ADB ಬ್ಯಾಂಕ್ ಸೇರಿಕೊಳ್ಳಲು ಚುನಾವಣಾ ಆಯುಕ್ತ ಹುದ್ದೆಗೆ ರಾಜೀನಾಮೆ ನೀಡಿದ ಅಶೋಕ್ ಲಾವಾಸ!

Published : Aug 18, 2020, 07:19 PM IST
ADB ಬ್ಯಾಂಕ್ ಸೇರಿಕೊಳ್ಳಲು ಚುನಾವಣಾ ಆಯುಕ್ತ ಹುದ್ದೆಗೆ ರಾಜೀನಾಮೆ ನೀಡಿದ  ಅಶೋಕ್ ಲಾವಾಸ!

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅಸಮಾಧಾನ ಹೊರಹಾಕಿದ್ದ ಚುನಾವಣಾ ಆಯೋಗ ಆಯುಕ್ತ ಅಶೋಕ್ ಲಾವಾಸ ಇದೀಗ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 

ನವದೆಹಲಿ(ಆ.18): ಚುನಾವಣಾ ಆಯುಕ್ತ ಅಶೋಕ್ ಲಾವಾಸ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಗಸ್ಟ್ 31ರೊಳಗೆ ತಮ್ಮನ್ನು ಹುದ್ದೆಯಿಂದ ಮುಕ್ತಿಗೊಳಿಸುಂತೆ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್‌ಗೆ ನೀಡಿದ್ದಾರೆ. ಫಿಲಿಪೈನ್ಸ್ ಮೂಲದ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನ ಉಪಾಧ್ಯಕ್ಷರಾಗಿ ಮುಂದಿನ ತಿಂಗಳು ಅಶೋಕ್ ಲಾವಾಸ ಅಧಿಕಾರ ಸ್ವೀಕರಿಸಿದ್ದಾರೆ. ಹೀಗಾಗಿ ಚುನಾವಣಾ ಆಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದೆ: H D ರೇವಣ್ಣ

ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ ಕಳೆದ ತಿಂಗಳು ಅಶೋಕ್ ಲಾವಾಸ ಅವರನ್ನು ಬ್ಯಾಂಕ್‌ನ ನೂತನ ಉಪಾಧ್ಯಕ್ಷ ಎಂದು ಘೋಷಿಸಿತ್ತು.  ಖಾಸಗಿ ಹಾಗೂ ಸರ್ಕಾರ ಸಹಭಾಗಿತ್ವದ ಯೋಜನೆಗಳಲ್ಲಿ ಸಾಕಷ್ಟು ಅನುಭವ ಹೊಂದಿರುವ ಅಶೋಕ್ ಲಾವಾಸ ಅವರನ್ನು ಬ್ಯಾಂಕ್ ಉಪಾಧ್ಯಕ್ಷರಾಗಿ ನೇಮಕ ಮಾಡುತ್ತಿರುವುದಾಗಿ ADB ಹೇಳಿತ್ತು.

ಗ್ರಾಪಂ ಚುನಾವಣೆ: ಮತದಾರ ಪಟ್ಟಿ ಸಿದ್ಧತೆಗೆ ಆಯೋಗ ಸೂಚನೆ

ಚುನಾವಣಾ ಆಯುಕ್ತರಾಗಿ ಅಶೋಕ್ ಲಾವಾಸ ಅವಧಿ ಇನ್ನೂ 2 ವರ್ಷ ಬಾಕಿ ಇತ್ತು. ಹಿರಿತನ ಹಾಗೂ ಅನುಭವದ ಆಧಾರದ ಮೇಲೆ ಅಶೋಕ ಲಾವಾಸಾ 2022ರಲ್ಲಿ ಎಲೆಕ್ಷನ್ ಕಮಿಷನರ್ ಆಗಿ ನಿವೃತ್ತಿ ಹೊಂದಬೇಕಿತ್ತು. ಆದರೆ ಅಶೋಕ್ ಲಾವಾಸ ಇದೀಗ ರಾಜೀನಾಮೆ ನೀಡೋ  ಮೂಲಕ, ಕೆಲ ಪ್ರಶ್ನೆಗಳನ್ನು ಹುಟ್ಟುಹಾಕಿದ್ದಾರೆ.

2019ರ ಲೋಕಸಭಾ ಚುನಾವಣೆ ಬಳಿಕ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಚುನಾವಣಾ ನೀತಿ ಉಲ್ಲಂಘನೆ ಕುರಿತು ಮೋದಿ ಹಾಗೂ ಶಾ ವಿರುದ್ಧ 11 ದೂರುಗಳು ದಾಖಲಾಗಿತ್ತು. ದೂರುಗಳನ್ನು ಆಲಿಸಿದ ಚುನಾವಣಾ ಆಯೋಗ ಮೋದಿ ಹಾಗೂ ಅಮಿತ್ ಶಾ ಕ್ಲೀನ್ ಚಿಟ್ ನೀಡಿತ್ತು. ಆದರೆ ಇದಕ್ಕೆ ಅಶೋಕ್ ಲಾವಾಸ ಅಸಮಾಧಾನ ವ್ಯಕ್ತಪಡಿಸಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..