
ನವದೆಹಲಿ(ಜೂ.09): ಕೇರಳದಲ್ಲಿ ಇತ್ತೀಚೆಗೆ ಆನೆಯೊಂದು ಸಿಡಿಮದ್ದು ಅಡಗಿಸಿಟ್ಟಿದ್ದ ಅನಾನಸ್ ಸೇವಿಸಿ ಸಾವನ್ನಪ್ಪಿದ್ದ ಘಟನೆ, ಆನೆ ಹತ್ಯೆಗೆ ನಡೆಸಿದ ಸಂಚು ಅಲ್ಲದಿರಬಹುದು ಎಂದು ಕೇಂದ್ರ ಪರಿಸರ ಇಲಾಖೆ ಹೇಳಿದೆ. ಘಟನೆ ಕುರಿತು ನಡೆಸಿದ ಪ್ರಾಥಮಿಕ ತನಿಖೆಯಿಂದ ಈ ಅಂಶ ಕಂಡುಬಂದಿದೆ ಎಂದು ಅದು ಮಾಹಿತಿ ನೀಡಿದೆ.
ಅಲ್ಲಿ ಆನೆ, ಇಲ್ಲಿ ಶ್ವಾನ..ಮಾನವೀಯತೆ ಮರೆತ ಮಾನವ!
ಇದೇ ವೇಳೆ ರೈತರು ಬೆಳೆಗಳನ್ನು ಕಾಡುಹಂದಿ ಸೇರಿದಂತೆ ಇತರೆ ಪ್ರಾಣಿಗಳಿಂದ ರಕ್ಷಿಸಲು ಹಣ್ಣುಗಳ ಒಳಗೆ ಪಟಾಕಿ ಮತ್ತು ಇತರ ಸಿಡಿಮದ್ದುಗಳನ್ನು ತುಂಬಿಡುವ ಪರಿಪಾಠ ಇಟ್ಟುಕೊಂಡಿರುವುದೂ ಗಮನಕ್ಕೆ ಬಂದಿದೆ ಎಂದು ಪರಿಸರ ಸಚಿವಾಲಯ ಅಸಮಾಧಾನ ವ್ಯಕ್ತಪಡಿಸಿದೆ.
ಗರ್ಭಿಣಿ ಹಸುವಿಗೆ ಸ್ಫೋಟಕ ತಿನ್ನಿಸಿದ್ದ 'ರಾಕ್ಷಸ' ಅರೆಸ್ಟ್!
ಇದೇ ವೇಳೆ ಆನೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಅಲ್ಲದೆ, ಈ ಕೃತ್ಯದ ಹಿಂದಿರುವ ಇತರ ತಪ್ಪಿತಸ್ಥರ ತ್ವರಿತ ಬಂಧನ ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿ ಕೇರಳ ಸರ್ಕಾರಕ್ಕೆ ಮಾರ್ಗಸೂಚಿಗಳನ್ನು ರವಾನಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬುವ ವದಂತಿಗಳಿಗೆ ಯಾರೂ ಸಹ ಕಿವಿಗೊಡಬಾರದು. ಕೇರಳ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಈ ಪ್ರಕರಣವನ್ನು ವಸ್ತುನಿಷ್ಠವಾಗಿ ತನಿಖೆ ನಡೆಸುತ್ತಿವೆ ಎಂದು ಜನತೆಗೆ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಅವರು ಕರೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ