ಪಿಎಂ ಆವಾಸ್ ಹಣ ಬರ್ತಿದ್ದಂತೆ ಗಂಡಂದಿರಿಗೆ ಗುಡ್ ಬೈ  ಹೇಳಿ 11 ಮಹಿಳೆಯರು ಜೂಟ್

Published : Jul 07, 2024, 11:28 AM IST
ಪಿಎಂ ಆವಾಸ್ ಹಣ ಬರ್ತಿದ್ದಂತೆ ಗಂಡಂದಿರಿಗೆ ಗುಡ್ ಬೈ  ಹೇಳಿ 11 ಮಹಿಳೆಯರು ಜೂಟ್

ಸಾರಾಂಶ

ಪಿಎಂ ಆವಾಸ್ ಯೋಜನೆಯ ಹಣ ಬರುತ್ತಿದ್ದಂತೆ 11 ಮಹಿಳೆಯರು ಗಂಡನಿಗೆ ಕೈ ಕೊಟ್ಟು, ಪ್ರೇಮಿಗಳ ಜೊತೆ ಜೂಟ್ ಆಗಿದ್ದಾರೆ. ಮುಂದಿನ ಕಂತು ಪತ್ನಿ ಖಾತೆಗೆ ಜಮೆ ಮಾಡದಂತೆ ನೊಂದ ಪುರುಷರು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ.

ಮಹಾರಾಜಾಗಂಜ್: ಉತ್ತರ ಪ್ರದೇಶದ ಮಹಾರಾಜಗಂಜ್ ಜಿಲ್ಲೆಯ (Maharajaganj, Uttar Pradesh) ನಿಚ್ಲಾಲ್ ಬ್ಲಾಕ್ ಪ್ರದೇಶದ ವಿವಿಧ ಗ್ರಾಮಗಳಲ್ಲಿ 11 ಮಹಿಳೆಯರು (Woman Elopes) ಪರಾರಿಯಾಗಿದ್ದಾರೆ. 11 ಮಹಿಳೆಯರು ಪತಿಯನ್ನು ಬಿಟ್ಟು, ಪ್ರೇಮಿಗಳ ಜೊತೆ ಎಸ್ಕೇಪ್ ಆಗಿದ್ದಾರೆ ಎಂದು ವರದಿಯಾಗಿದೆ. ಏಕಕಾಲದಲ್ಲಿ ಇಷ್ಟೊಂದು ಮಹಿಳೆಯರು (Women Missing) ನಾಪತ್ತೆಯಾಗಿರೋದರಿಂದ ಈ ಭಾಗದಲ್ಲಿ ಸಂಚಲನ ಸೃಷ್ಟಿಯಾಗಿದೆ. ಆದ್ರೆ ಎಲ್ಲಾ 11 ಪ್ರಕರಣಗಳಲ್ಲಿ ಸಾಮ್ಯತೆ ಇದೆ ಎಂಬುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಪಿಎಂ ಆವಾಸ್ ಯೋಜನೆಯ (PM Awas Scheme) ಮೊದಲ ಕಂತು 40 ಸಾವಿರ ರೂಪಾಯಿ ಜಮೆ ಆಗುತ್ತಿದ್ದಂತೆ ಮಹಿಳೆಯರು ಮನೆಯಿಂದ ಹೊರಗೆ ಹೆಜ್ಜೆ ಇರಿಸಿದ್ದಾರೆ. 

ನಗರ ಪ್ರದೇಶದಲ್ಲಿ ನಿವಾಸಿಗಳಿಗೆ ಅಂದ್ರೆ ಸ್ವಂತ ಸೂರಿಲ್ಲದ ಕುಟುಂಬಗಳಿಗೆ ಸರ್ಕಾರ ಮನೆ ನಿರ್ಮಾಣಕ್ಕೆ ಹಂತ ಹಂತವಾಗಿ ಕಂತುಗಳ ರೂಪದಲ್ಲಿ ಹಣ ಬಿಡುಗಡೆ ಮಾಡುತ್ತದೆ. ಈ ಹಣ ಮನೆಯ ಮಹಿಳಾ ಸದಸ್ಯರ ಖಾತೆಗೆ ಮಾತ್ರ ಜಮೆ ಮಾಡಲಾಗುತ್ತದೆ. ಇದೀಗ ಹಣ ಬರುತ್ತಿದ್ದಂತೆ ಮಹಿಳೆಯರು ತಮ್ಮ ಪ್ರೇಮಿಗಳ ಜೊತೆ ಪಲಾಯನ ಆಗುತ್ತಿದ್ದಾರೆ. ನಾಪತ್ತೆಯಾಗಿರುವ ಮಹಿಳೆಯರ ಗಂಡಂದಿರು ಪತ್ನಿ ಕಾಣೆಯಾಗಿರುವ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಂತರ ಸಂಬಂಧಿತ ಇಲಾಖೆಗೆ ತೆರಳಿ ಪಿಎಂ ಆವಾಸ್ ಯೋಜನೆಯ ಎರಡನೇ ಕಂತನ್ನು ಪತ್ನಿಯರ ಖಾತೆಗೆ ಜಮೆ ಮಾಡದಂತೆ ಮನವಿಯನ್ನು ಸಹ ಸಲ್ಲಿಸುತ್ತಿದ್ದಾರೆ.

ತಡರಾತ್ರಿ ಸ್ನೇಹಿತೆಯ ಕೋಣೆಗೆ ನುಗ್ಗಿದ್ದ 15ರ ಬಾಲಕನ ಪ್ರಾಣ ಹೋಗಿದ್ದೇಗೆ? ಇಬ್ಬರ ಬಂಧನ

ನಿಚ್ಲಾಲ್ ಬ್ಲಾಕ್‌ನಲ್ಲಿ ಪಿಎಂ ಆವಾಸ ಯೋಜನೆಯ 2,350 ಮಹಿಳಾ ಫಲಾನುಭವಿಗಳಿದ್ದಾರೆ. ಈಗಾಗಲೇ ಈ ವಿಭಾಗದ ಎಲ್ಲಾ ಮಹಿಳಾ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಜಮೆ ಮಾಡಲಾಗಿದೆ. ಸರ್ಕಾರದಿಂದ ಬಿಡುಗಡೆಯಾಗುವ ಹಣವನ್ನು ಮನೆ ನಿರ್ಮಾಣಕ್ಕಾಗಿಯೇ ಬಳಸಬೇಕು. ಒಂದು ವೇಳೆ ಅನ್ಯ ಕೆಲಸಕ್ಕೆ ಹಣ ಬಳಕೆಯಾಗಿರೋದು ಕಂಡು ಬಂದ್ರೆ ಅಧಿಕಾರಿಗಳು ಪಡೆದುಕೊಂಡು ಮೊತ್ತವನ್ನು ವಸೂಲಿ ಮಾಡುತ್ತಾರೆ. ಪತ್ನಿಯರು ಹಣದ ಜೊತೆ ಪರಾರಿಯಾಗಿರುವ ಕಾರಣ ಕೆಲವರ ಮನೆ ನಿರ್ಮಾಣ ಸ್ಥಗಿತಗೊಂಡಿದೆ. ಇದೀಗ ಅಂತಹವರಿಂದ ಹಣ ವಸೂಲಿ ಮಾಡಲು ಅಧಿಕಾರಿಗಳು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ಮದುವೆ ಆಯ್ತು, ಫಸ್ಟ್‌ನೈಟ್‌ಗೂ ರೂಮ್ ಡೆಕೋರೇಟ್ ಆಗಿತ್ತು; ದುಃಖದಲ್ಲಿಯೇ ಇಡೀ ರಾತ್ರಿ ಕಳೆದ ವರ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ
25 ಜನರು ಸಾವನ್ನಪ್ಪಿದ ಪಬ್‌ ಮಾಲೀಕರ ರೆಸಾರ್ಟ್‌ ಧ್ವಂಸ