
ನವದೆಹಲಿ(ಆ.06): ದೇಶದಲ್ಲಿ ಕಲ್ಲಿದ್ದಲು(Coal) ಲಭ್ಯತೆ ಕುಂಠಿತಗೊಂಡಿದ್ದು, ಭಾರೀ ವಿದ್ಯುತ್(Electricity) ಕಡಿತದ ಭೀತಿ ಆರಂಭವಾಗಿದೆ. ಸದ್ಯ 4 ದಿನಗಳ ವಿದ್ಯುತ್ ಉತ್ಪಾದನೆಗೆ ಮಾತ್ರ ಸಾಕಾಗುವಷ್ಟುಕಲ್ಲಿದ್ದಲು ಇದೆ. ಮುಂದಿನ 6 ತಿಂಗಳು ಕಾಲ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಖುದ್ದು ಕೇಂದ್ರ ಇಂಧನ ಸಚಿವ ಆರ್.ಕೆ. ಸಿಂಗ್(RK Singh) ಅವರೇ ಈ ವಿಷಯ ಒಪ್ಪಿಕೊಂಡಿದ್ದಾರೆ.
ದೇಶದ ಒಟ್ಟಾರೆ ವಿದ್ಯುತ್ ಉತ್ಪಾದನೆ ಪೈಕಿ ಶೇ.70ರಷ್ಟುವಿದ್ಯುತ್ ಕಲ್ಲಿದ್ದಲು ಘಟಕಗಳಿಂದಲೇ ಉತ್ಪಾದನೆಯಾಗುತ್ತದೆ. ಮುಂದಿನ ದಿನಗಳಲ್ಲಿ ಈ ಪ್ರಮಾಣ ಮತ್ತಷ್ಟು ಏರಿಕೆಯಾಗಿದೆ. ಇದೇ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇತರೆ ನವೀಕರಿಸಬಹುದಾದ ಸಂಪನ್ಮೂಲಗಳಿಗೆ ಉತ್ತೇಜನ ನೀಡುತ್ತಿದ್ದಾರೆ. ಭಾರೀ ವಿದ್ಯುತ್ ಬೇಡಿಕೆಯಿಂದಾಗಿ ಚೀನಾದಂತೆ ನಾವು ಸಹ ಸಮಸ್ಯೆಗೆ ಸಿಲುಕಿದ್ದೇವೆ ಎಂದು ಅವರು ಹೇಳಿದ್ದಾರೆ. ಇನ್ನು 4 ದಿನಕ್ಕಾಗುವಷ್ಟುಮಾತ್ರ ಕಲ್ಲಿದ್ದಲು ಲಭ್ಯ ಇದೆ. ಮುಂದಿನ 6 ತಿಂಗಳು ಇದೇ ಸ್ಥಿತಿ ಇರಬಹುದು ಎಂದಿದ್ದಾರೆ.
‘ಆದರೆ ವಿದ್ಯುತ್ ಬಿಕ್ಕಟ್ಟಿನ ಪರಿಸ್ಥಿತಿ ಇನ್ನೂ ನಿರ್ಮಾಣವಾಗಿಲ್ಲ. ಪ್ರಸ್ತುತ ಪರಿಸ್ಥಿತಿ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಬೇಡಿಕೆಯಿರುವಷ್ಟುಕಲ್ಲಿದ್ದಲು ಉತ್ಪಾದನೆಯಾಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಸಮಸ್ಯೆಗೆ ಕಾರಣ ಏನು?:
ಕಳೆದ ಕೊರೋನಾ ಕಾರಣದಿಂದಾಗಿ ವಿದ್ಯುತ್ ಬೇಡಿಕೆ ಅಷ್ಟಾಗಿ ಇರಲಿಲ್ಲ. ಆದರೆ ಈ ವರ್ಷ ಉದ್ಯಮಗಳಿಂದ ಭಾರೀ ವಿದ್ಯುತ್ ಬೇಡಿಕೆ ವ್ಯಕ್ತವಾಗಿದೆ. ಇತ್ತೀಚೆಗಷ್ಟೇ 15,000 ಮೆಗಾವ್ಯಾಟ್ನಷ್ಟುವಿದ್ಯುತ್ ಬೇಡಿಕೆ ಉಂಟಾಗಿತ್ತು. ಇದು ಕಳೆದ ವರ್ಷಕ್ಕಿಂತಲೂ ದುಪ್ಪಟ್ಟು. ಕಲ್ಲಿದ್ದಲು ಗಣಿಗಳನ್ನು ಹೊಂದಿರುವ ಜಾರ್ಖಂಡ್, ಛತ್ತೀಸ್ಗಢ ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಇದರಿಂದಾಗಿ ಗಣಿಗಳಿಂದ ಕಲ್ಲಿದ್ದಲು ಹೊರತೆಗೆಯಲಾಗುತ್ತಿಲ್ಲ. ಜತೆಗೆ ಸಾಗಣೆಯೂ ದುಸ್ತರವಾಗಿದೆ. ಈ ಹಿನ್ನೆಲೆಯಲ್ಲಿ ಕಲ್ಲಿದ್ದಲು ಅಭಾವ ಉಂಟಾಗಿದ್ದು, ಈ ಪರಿಸ್ಥಿತಿಯನ್ನು ನಾವು ನಿಭಾಯಿಸುತ್ತೇವೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗಲಿದೆ ಎಂದು ಸಚಿವ ಸಿಂಗ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ