ಹೊತ್ತಲ್ಲದ ಹೊತ್ತಲ್ಲಿ ವಿಚಾರಣೆ ಬೇಡ: ಅಧಿಕಾರಿಗಳಿಗೆ ಇ.ಡಿ. ಸೂಚನೆ

Published : Oct 20, 2024, 08:27 AM IST
ಹೊತ್ತಲ್ಲದ ಹೊತ್ತಲ್ಲಿ ವಿಚಾರಣೆ ಬೇಡ: ಅಧಿಕಾರಿಗಳಿಗೆ ಇ.ಡಿ. ಸೂಚನೆ

ಸಾರಾಂಶ

ಹೊತ್ತಲ್ಲದ ಹೊತ್ತಲ್ಲಿ ವಿಚಾರಣೆ ನಡೆಸದಂತೆ ಹಾಗೂ ಕಚೇರಿಗಳಲ್ಲಿ ಗಂಟೆಗಟ್ಟಲೆ ಕಾಯಿಸದಂತೆ ತನ್ನ ತನಿಖಾಧಿಕಾರಿಗಳಿಗೆ ಸೂಚನೆ ನೀಡಿ ಜಾರಿ ನಿರ್ದೇಶನಾಲಯ (ಇ.ಡಿ.) ಸುತ್ತೋಲೆಯೊಂದನ್ನು ಹೊರಡಿಸಿದೆ.

ನವದೆಹಲಿ: ಸಮನ್ಸ್‌ ಕೊಟ್ಟು ವಿಚಾರಣೆಗೆ ಕರೆಸಿದ ವ್ಯಕ್ತಿಗಳನ್ನು ಹೊತ್ತಲ್ಲದ ಹೊತ್ತಲ್ಲಿ ವಿಚಾರಣೆ ನಡೆಸದಂತೆ ಹಾಗೂ ಕಚೇರಿಗಳಲ್ಲಿ ಗಂಟೆಗಟ್ಟಲೆ ಕಾಯಿಸದಂತೆ ತನ್ನ ತನಿಖಾಧಿಕಾರಿಗಳಿಗೆ ಸೂಚನೆ ನೀಡಿ ಜಾರಿ ನಿರ್ದೇಶನಾಲಯ (ಇ.ಡಿ.) ಸುತ್ತೋಲೆಯೊಂದನ್ನು ಹೊರಡಿಸಿದೆ.

ತಮ್ಮನ್ನು ವಿಚಾರಣೆಗೆ ಕರೆಸಿದ ಇ.ಡಿ. ಅಧಿಕಾರಿಗಳು ಇಡೀ ರಾತ್ರಿ ವಶದಲ್ಲಿಟ್ಟುಕೊಂಡು, ಪ್ರಶ್ನೆ ಕೇಳಿದ್ದರು. ಮಧ್ಯರಾತ್ರಿ ಬಳಿಕ ಕಾಯಲು ಕೂರಿಸಿದ್ದರು ಎಂದು 64 ವರ್ಷದ ವ್ಯಕ್ತಿಯೊಬ್ಬರು ಬಾಂಬೆ ಹೈಕೋರ್ಟ್‌ ಮೊರೆ ಹೋಗಿದ್ದರು. ಈ ರೀತಿ ಮಾಡುವುದರಿಂದ ವಿಚಾರಣೆ ಬಂದ ವ್ಯಕ್ತಿ ನಿದ್ರೆಯಿಂದ ವಂಚಿತನಾಗುತ್ತಾನೆ. ಅದು ಕನಿಷ್ಠ ಮಾನವೀಯ ವೈಯಕ್ತಿಕ ಹಕ್ಕು ಎಂದು ಕೋರ್ಟ್‌ ಹೇಳಿತ್ತು. ಅಲ್ಲದೆ ಈ ಕುರಿತು ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡುವಂತೆ ಬಾಂಬೆ ಹೈಕೋರ್ಟ್‌ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಅ.11ರಂದು ಸುತ್ತೋಲೆಯನ್ನು ಹೊರಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತಪ್ಪು ಮಾಡಿದ್ದರೆ ಗಲ್ಲಿಗೇರಿಸಿ, ಹಳೇ ದ್ವೇಷಕ್ಕೆ ತಂದೆ ಬಲಿಪಶು, ಕಣ್ಣೀರಿಟ್ಟ ಉನ್ನಾವೋ ಕೇಸ್ ಆರೋಪಿ ಪುತ್ರಿ
ಪ್ರೀತಿಸಿದ ಹುಡುಗಿ ಬೆನ್ನಲ್ಲೇ ಪೋಷಕರು ತೋರಿಸಿದಾಕೆ ಜೊತೆಗೂ ಮದುವೆ, ಮೃತ ಕತೆ ಕಟ್ಟಿ ತಗ್ಲಾಕೊಂಡ