ನಾನು ಸಿಕ್ಕಾಪಟ್ಟೆ ದಣಿದಿದ್ದೇನೆ: ಇಡಿ 20% ಪ್ರಶ್ನೆಗೆ ರಾಹುಲ್‌ ಉತ್ತರ..!

Published : Jun 25, 2022, 06:26 AM IST
ನಾನು ಸಿಕ್ಕಾಪಟ್ಟೆ ದಣಿದಿದ್ದೇನೆ: ಇಡಿ 20% ಪ್ರಶ್ನೆಗೆ ರಾಹುಲ್‌ ಉತ್ತರ..!

ಸಾರಾಂಶ

*   ಶೇ.20ರಷ್ಟು ಪ್ರಶ್ನೆಗೆ ಉತ್ತರ ನೀಡದೇ ತಪ್ಪಿಸಿಕೊಂಡ ಕಾಂಗ್ರೆಸ್‌ ನಾಯಕ *  ನನ್ನ ತಾಳ್ಮೆ ಕಂಡು ಇಡಿ ಅಧಿಕಾರಿಗಳೇ ದಂಗಾಗಿದ್ದರು ಎಂದಿದ್ದ ರಾಹುಲ್‌ *  ಎಲ್ಲಾ ಹೇಳಿಕೆಗಳನ್ನು ಸ್ಪಷ್ಟವಾಗಿ ಅಲ್ಲಗಳೆದ ಇಡಿ ಮೂಲಗಳು  

ನವದೆಹಲಿ(ಜೂ.25):  ನ್ಯಾಷನಲ್‌ ಹೆರಾಲ್ಡ್‌ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಶ್ನೆಗಳಿಗೆ ಉತ್ತರಿಸುವಾಗ ನನ್ನ ತಾಳ್ಮೆ ಕಂಡು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳೇ ದಂಗಾಗಿದ್ದರು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಳೆದ ಬುಧವಾರ ನೀಡಿದ್ದ ಹೇಳಿಕೆಯನ್ನು ಇಡಿ ಮೂಲಗಳು ಸ್ಪಷ್ಟವಾಗಿ ಅಲ್ಲಗಳೆದಿವೆ. ವಾಸ್ತವವಾಗಿ ಅಧಿಕಾರಿಗಳು ಕೇಳಿದ ಶೇ.20ರಷ್ಟು ಪ್ರಶ್ನೆಗೆ ರಾಹುಲ್‌ ‘ನಾನು ತುಂಬಾ ದಣಿದಿದ್ದೇನೆ’ ಎಂದು ನೆಪವೊಡ್ಡಿ ಉತ್ತರ ನೀಡುವುದರಿಂದ ತಪ್ಪಿಸಿಕೊಂಡರು ಎಂದು ಮೂಲಗಳು ತಿಳಿಸಿವೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ‘ಇಡಿ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೆ ಸಮಾಧಾನದಿಂದ ಉತ್ತರಿಸಿದ್ದೇನೆ. ದಣಿಯದೇ ತಾಳ್ಮೆ ಉತ್ತರಿಸಿದ್ದಕ್ಕೆ ಅಧಿಕಾರಿಗಳು ದಂಗಾಗಿ ನಿಮ್ಮ ಶಕ್ತಿಯ ಗುಟ್ಟೇನು? ಎಂದು ಪ್ರಶ್ನಿಸಿದ್ದಾರೆ’ ಎಂದು ಹೇಳಿಕೆ ನೀಡಿದ್ದರು. ಜೊತೆಗೆ ‘ಕಾಂಗ್ರೆಸ್‌ ಕಾರ್ಯಕರ್ತನಾಗಿ ತರಬೇತಿ ಪಡೆದಿದ್ದು ಹಾಗೂ ವಿಪಷ್ಯನ ಧ್ಯಾನ ತಮಗೆ ಸಮಾಧಾನದಿಂದ ಉತ್ತರ ನೀಡಲು ಸಹಾಯ ಮಾಡಿತು’ ಎಂದು ರಾಹುಲ್‌ ಹೇಳಿಕೊಂಡಿದ್ದರು.

National Herald Case ವಿಚಾರಣೆಗೆ ಹಾಜರಾಗಲು ಸೋನಿಯಾ ಗಾಂಧಿಗೆ ದಿನಾಂಕ ಸೂಚಿಸಿದ ಇಡಿ!

ಆದರೆ ಈ ಎಲ್ಲಾ ಹೇಳಿಕೆಗಳನ್ನು ಇಡಿ ಮೂಲಗಳು ಸ್ಪಷ್ಟವಾಗಿ ಅಲ್ಲಗಳೆದಿದ್ದು, ‘5 ದಿನ ವಿಚಾರಣೆಗೆ ಹಾಜರಾಗಿದ್ದ ರಾಹುಲ್‌ ಗಾಂಧಿ ಸುಮಾರು ಶೇ.20ರಷ್ಟು ಪ್ರಶ್ನೆಗಳಿಗೆ ಉತ್ತರ ನೀಡುವುದರಿಂದ ತಪ್ಪಿಸಿಕೊಂಡಿದ್ದು, ನನಗೆ ತುಂಬಾ ದಣಿವಾದಂತೆ ಅನ್ನಿಸುತ್ತಿದೆ ಎಂದು ಹೇಳಿ ಸುಮ್ಮನಾಗುತ್ತಿದ್ದರು’ ಎಂದು ತಿಳಿಸಿವೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು
ಇಂದು ರಾತ್ರಿ 8ರ ಒಳಗೆ ಟಿಕೆಟ್ ಮೊತ್ತ ಮರುಪಾವತಿಸಿ : ಇಂಡಿಗೋಗೆ ಕೇಂದ್ರ ಗಡುವು