ಮೊದಲನೇ ಡೋಸ್ ಲಸಿಕೆ ಮಹತ್ವ ತೆರೆದಿಟ್ಟ ಹಿರಿಯ ಅಧಿಕಾರಿ, ಹೊಸ ಗುರಿ

Published : Jun 01, 2021, 11:19 PM IST
ಮೊದಲನೇ ಡೋಸ್ ಲಸಿಕೆ ಮಹತ್ವ ತೆರೆದಿಟ್ಟ ಹಿರಿಯ ಅಧಿಕಾರಿ, ಹೊಸ ಗುರಿ

ಸಾರಾಂಶ

* ದೇಶದ ಎಲ್ಲ ನಾಗರಿಕರಿಗೂ ಕನಿಷ್ಠ ಪಕ್ಷ ಮೊದಲನೇ ಡೋಸ್ ನೀಡಲೇಬೇಕು * ಮೊದಲನೇ ಡೋಸ್ ಮತ್ತು ಎರಡನೇ ಡೋಸ್ ನಡುವಿನ ಅಂತರ ಹೆಚ್ಚಳ * ಮೊದಲನೇ ಡೋಸ್ ನೀಡಿಕೆ  ಅತ್ಯಗತ್ಯ ಎಂದ ತಜ್ಞರು

ನವದೆಹಲಿ(ಜೂ. 01)  ಕೊರೋನಾ ಲಸಿಕೆ ವಿಚಾರದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಪ್ರಮುಖ ವಿಚಾರವೊಂದನ್ನು ಹೇಳಿದ್ದಾರೆ. ಕನಿಷ್ಠ ಪಕ್ಷ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಮೊದಲ ಡೋಸ್ ಲಸಿಕೆಯನ್ನಾದರೂ ನೀಡಬೇಕು ಎಂದಿದ್ದಾರೆ.

ಒಂದು ಕಡೆ ಲಸಿಕೆ ಕೊರತೆ ಮಾತುಗಳು ಕೇಳಿಬರುತ್ತಲೇ ಇವೆ. ಇನ್ನೊಂದು ಕಡೆ ತಜ್ಞರು   ಮೊದಲನೇ ಡೋಸ್ ಮತ್ತು ಎರಡನೇ ಡೋಸ್ ನಡುವಿನ ಅಂತರ ಹೆಚ್ಚಿಸಿದ್ದಾರೆ.

ಜೂನ್ ತಿಂಗಳಿನಲ್ಲೀಯೆ ಸ್ಫುಟ್ನಿಕ್ ಲಭ್ಯ

ಎಲ್ಲರಿಗೂ ಮೊದಲನೇ ಡೋಸ್ ತಲುಪಿಸುವುದು ಸದ್ಯ ನಮ್ಮ ಮುಂದೆ ಇರುವ ಗುರಿ ಎಂದು ತಿಳಿಸಿದ್ದಾರೆ.  ವಿದೇಶಗಳಲ್ಲಿ ಲಸಿಕೆ ನೀಡಿಕೆ  ಮತ್ತು ನಂತರದ ಬೆಳವಣಿಗೆ ಆಧರಿಸಿ ಈ  ಮಾತು ಹೇಳಲಾಗಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರೀಸರ್ಚ್ ನ ನಿರ್ದೇಶಕ ಡಾ. ಬಲರಾಮ್ ಭಾರ್ಗವ ಸಹ ಇದೇ ವಿಚಾರವನ್ನು ಹೇಳಿದ್ದು ವೈರಸ್ ವಿರುದ್ಧ ಹೋರಾಡಲು ದೇಹ ಸಿದ್ಧವಾಗುವಂತೆ ಮಾಡಬೇಕು ಎಂದು ತಿಳಿಸಿದ್ದಾರೆ.

ಲಸಿಕೆ ನೀಡಿಕೆ ಮತ್ತು ಫಲಿತಾಂಶಗಳ ಬಗ್ಗೆಯೂ ಸಂಶೋಧನೆಗಳು ಬೇರೆ ಬೇರೆ ಮಾತು ಹೇಳಿವೆ. ಆ ವಿಚಾರಗಳು ಏನೇ ಇದ್ದರೂ ಎಲ್ಲರಿಗೂ ಮೊದಲನೇ ಡೋಸ್ ಲಭ್ಯವಾಗಲೇಬೇಕು ಎಂದಿದ್ದಾರೆ. 

"

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
Dhurandhar Review: ಹಿಂದೂಗಳಿಗೆ ಪ್ರಥಮ ಶತ್ರು ಹಿಂದೂ-ಮೊಬೈಲ್‌ ಕೂಡ ನೋಡದಂತೆ ಮಾಡೋ Ranveer Singh ಸಿನಿಮಾ!