'ದೇಶವನ್ನೇ ಹಿಂದೆ ತಳ್ಳುತ್ತಿರುವವರು ನನ್ನನ್ನು ತಳ್ಳಿದ್ದರಲ್ಲಿ ಅಚ್ಚರಿ ಏನಿಲ್ಲ'

Published : Oct 06, 2020, 10:57 PM IST
'ದೇಶವನ್ನೇ ಹಿಂದೆ ತಳ್ಳುತ್ತಿರುವವರು ನನ್ನನ್ನು ತಳ್ಳಿದ್ದರಲ್ಲಿ ಅಚ್ಚರಿ ಏನಿಲ್ಲ'

ಸಾರಾಂಶ

ಕೇಂದ್ರದ ಮೇಲೆ ರಾಹುಲ್ ವಾಗ್ದಾಳಿ/ ಇಡಿ ದೇಶವನ್ನೇ ಹಿಂದೆ ತಳ್ಳುತ್ತಿದ್ದವರು ನನ್ನನ್ನು ಹಿಂದೆ ತಳ್ಳಿದ್ದರಲ್ಲಿ ಅಚ್ಚರಿ ಇಲ್ಲ/ ಮೋದಿ ತಮ್ಮ ಇಮೇಜ್ ಕಾಪಾಡಿಕೊಳ್ಳುವುದರಲ್ಲಿ ನಿರತರಾಗಿದ್ದಾರೆ/ ಚೀನಾ ಅತಿಕ್ರಮಣ ಮಾಡಿಕೊಂಡ ಪ್ರದೇಶ ವಾಪಸ್ ಪಡೆಯುವ ಯಾವ ಕೆಲಸವನ್ನು ಮಾಡಿಲ್ಲ

ನವದೆಹಲಿ(ಅ. 06)   ಕೇಂದ್ರ ಸರ್ಕಾರದ ಮೇಲೆ ರಾಹುಲ್ ಗಾಂಧಿ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ. ಇಡೀ ದೇಶವನ್ನೇ ಬಡಿದು, ಹಿಂದಕ್ಕೆ ತಳ್ಳಲಾಗುತ್ತಿದೆ, ಇಂಥ ಸಂದರ್ಭದಲ್ಲಿ ಉತ್ತರ ಪ್ರದೇಶ ಪೊಲೀಸರು ನನ್ನನ್ನು ಹಿಂದಕ್ಕೆ ತಳ್ಳಿದ್ದು ವಿಶೇಷವೇನಲ್ಲ ಬಿಡಿ ಎಂದು ಕೇಂದ್ರ ದ ಮೇಲೆ ಚಾಟಿ ಬೀಸಿದ್ದಾರೆ.

ಪಂಜಾಬ್ ನಲ್ಲಿ ಮಾತನಾಡಿದ ಗಾಂಧಿ,  ಉತ್ತರ ಪ್ರದೇಶದ ಅತ್ಯಾಚಾರದ ಸಂತ್ರಸ್ತೆಯ ಮನೆಗೆ ಭೇಟಿ ನೀಡುವಾಗ ಪೊಲೀಸರು ನಡೆದುಕೊಂಡ ರೀತಿಯನ್ನು ಉಲ್ಲೇಖಿಸಿದರು..

ನಾವು ದೇಶದೊಂದಿಗೆ ಮುಂದೆ ನಡೆಯಬೇಕು ಹೊರತು ದೇಶಕ್ಕೆ ಮಾರಕವಾಗಿ ನಡೆದುಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ. ಕೃಷಿ ಕಾಯಿದೆ ವಿರೋಧಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಅಭಿಯಾನದ ಆರಂಭದದಲ್ಲಿ ಮಾತನಾಡಿ ಕೇಂದ್ರ ಸರ್ಕಾರ ನೀತಿಗಳನ್ನು ಟೀಕಿಸಿದ್ದಾರೆ.

ಚೀನಾ ನಮ್ಮ ಮೇಲೆ ನುಗ್ಗಿ ಬರುತ್ತಿರುವುದು ಯಾಕೆ? ಕಾರಣ ಹೇಳಿದ ರಾಹುಲ್

ಪ್ರಧಾನಿ ನರೇಂದ್ರ ಮೋದಿ ಮಾಧ್ಯಮಗಳನ್ನು ತಮಗೆ ಬೇಕಾದ ರೀತಿ ಬಳಸಿಕೊಳ್ಳುತ್ತಾರೆ. ಯಾವುದೇ ಮಾಧ್ಯಮ ಗೋಷ್ಠಿ ಮಾಡಿ ವಿವರ ನೀಡುವುದಿಲ್ಲ ಎಂದು ಆರೋಪಿಸಿದರು. 

ಚೀನಾ ನಮ್ಮ  ದೇಶದ 1,200 ಚದರ ಕಿ.ಮೀ ಭೂಮಿಯನ್ನು ಪಡೆದುಕೊಂಡಿದ್ದು ಹೇಗೇ?  ಮೋದಿ ತಮ್ಮ ಇಮೇಜ್ ಕಾಪಾಡಿಕೊಳ್ಳಲು ಮಾತ್ರ ಯತ್ನ ಮಾಡುತ್ತಾರೆ ಎಂಬುದು ಚೀನಾಕ್ಕೆ ಗೊತ್ತಿದ್ದೆ ಇಂಥ ಕೆಲಸ ಮಾಡಿತು ಎಂದಿದ್ದಾರೆ. ಯಾವುದೆ ಅಧಿಕಾರಿಯನ್ನು ಕೇಳಿ ನೋಡಿ ನಿಮಗೆ ಈ ಉತ್ತರವೇ ಸಿಗುತ್ತದೆ ಎಂದು ರಾಹುಲ್ ಹೇಳಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್