
ಚೆನ್ನೈ(ಜ.20): ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೆ ಒಳಪಟ್ಟು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತ ಗೆಳತಿ ವಿ.ಕೆ. ಶಶಿಕಲಾ ಅವರು ಜನವರಿ 27ರಂದು ಬಿಡುಗಡೆ ಆಗಲಿದ್ದಾರೆ ಎಂದು ಅವರ ವಕೀಲರು ಹೇಳಿದ್ದಾರೆ.
ಜೈಲಿನಿಂದ ಬಂದ ಮಾಹಿತಿಯನ್ನು ಅನುಸರಿಸಿ ಈ ಮಾಹಿತಿ ನೀಡುತ್ತಿರುವುದಾಗಿ ಅವರ ವಕೀಲ ರಾಜಾ ಸೇತುರಪಾಂಡ್ಯನ್ ಮಂಗಳವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಶಶಿಕಲಾ ಅವರಿಗೆ 2016ರಲ್ಲಿ 4 ವರ್ಷ ಜೈಲು ಸಜೆ ಆಗಿತ್ತು ಹಾಗೂ 10 ಕೋಟಿ ರು. ದಂಡ ವಿಧಿಸಲಾಗಿತ್ತು. ಅಂದಿನಿಂದ ಅವರು ಪರಪ್ಪನ ಅಗ್ರಹಾರ ಜೈಲುವಾಸಿಯಾಗಿದ್ದಾರೆ.
ತಮಿಳುನಾಡು ವಿಧಾನಸಭೆ ಚುನಾವಣೆ ಬೇಸಿಗೆಯಲ್ಲಿ ನಡೆಯುತ್ತಿದ್ದು, ಈ ಸಂದರ್ಭದಲ್ಲೇ ಶಶಿಕಲಾ ಬಿಡುಗಡೆ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಆದರೆ ಶಶಿಕಲಾ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಂಗಳವಾರವಷ್ಟೇ ಅಣ್ಣಾ ಡಿಎಂಕೆ ನೇತಾರ ಹಾಗೂ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ