ಆ ವಿಷಯ ಎಲ್ಲಿಯೂ ಹೇಳಿಕೊಳ್ಳಲು ಆಗ್ತಿರಲಿಲ್ಲ: ಕೈ ನಾಯಕನ ಹೇಳಿಕೆಗೆ ಸತ್ಯ ಹೊರ ಬಂತಲ್ವಾ ಎಂದ ಬಿಜೆಪಿ

Published : Sep 11, 2024, 09:00 AM IST
ಆ ವಿಷಯ ಎಲ್ಲಿಯೂ ಹೇಳಿಕೊಳ್ಳಲು ಆಗ್ತಿರಲಿಲ್ಲ: ಕೈ ನಾಯಕನ ಹೇಳಿಕೆಗೆ ಸತ್ಯ ಹೊರ ಬಂತಲ್ವಾ ಎಂದ ಬಿಜೆಪಿ

ಸಾರಾಂಶ

ಮಾಜಿ ಕೇಂದ್ರ ಗೃಹ ಸಚಿವ ಸುಶಿಲ್ ಕುಮಾರ್ ಶಿಂಧೆ ಅವರು ತಮ್ಮ ಅಧಿಕಾರಾವಧಿಯಲ್ಲಿ ಶ್ರೀನಗರದ ಲಾಲ್ ಚೌಕ್‌ನಲ್ಲಿ ನಡೆದಾಡಲು ಭಯವಾಗುತ್ತಿತ್ತು ಎಂದು ಹೇಳಿದ್ದಾರೆ. ಉಗ್ರರ ದಾಳಿಯ ಆತಂಕ ಅವರನ್ನು ಕಾಡುತ್ತಿತ್ತು ಎಂದು ಅವರು ತಮ್ಮ ಜೀವನ ಚರಿತ್ರೆಯಲ್ಲಿ ಬರೆದಿದ್ದಾರೆ.

ನವದೆಹಲಿ: ಮಾಜಿ ಕೇಂದ್ರ ಗೃಹ ಸಚಿವ, ಕಾಂಗ್ರೆಸ್‌ ನಾಯಕ ಸುಶಿಲ್‌ ಕುಮಾರ್‌ ಶಿಂಧೆ ಅವರು ತಾವು ಕೇಂದ್ರ ಗೃಹ ಸಚಿವನಾಗಿದ್ದಾಗ ‘ಜಮ್ಮು ಕಾಶ್ಮೀರದ ಶ್ರೀನಗರದ ಲಾಲ್‌ ಚೌಕ್‌ನಲ್ಲಿ ನಡೆದಾಡಲು ಭಯವಾಗಿತ್ತು. ಉಗ್ರರು ದಾಳಿ ಮಾಡುವ ಆತಂಕವಿತ್ತು’ ಎಂದು ಹೇಳಿದ್ದಾರೆ.

ತಮ್ಮ ಜೀವನ ಚರಿತ್ರೆ ‘ಫೈವ್‌ ಡೆಕೇಡ್ಸ್‌ ಇನ್‌ ಪಾಲಿಟಿಕ್ಸ್‌’ ಪುಸ್ತಕ ಬಿಡುಗಡೆಯಲ್ಲಿ ಮಾತನಾಡಿದ ಅವರು, ನಾನು ಸಚಿವನಾಗಿದ್ದಾಗ ಅದೇ ಸಂದರ್ಭದಲ್ಲಿ ಶಿಕ್ಷಣ ತಜ್ಞ ವಿಜಯ್‌ ದಾರ್‌ ಶ್ರೀನಗರದ ಲಾಲ್‌ ಚೌಕ್‌ ಬಳಿ ಭಾಷಣ ಮಾಡುವಂತೆ ಹೇಳಿದ್ದರು. ಉಗ್ರರ ಉಪಟಳ ಹೆಚ್ಚಿದ್ದ ಕಾರಣ ಎಲ್ಲೆಂದರಲ್ಲಿ ನಡೆದಾಡದಂತೆ ಎಚ್ಚರಿಕೆ ನೀಡಿದ್ದರು. ಅಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ ನನಗೆ ವಿಪರೀತ ಭಯವಾಗಿತ್ತು. ಆದರೆ ಅದನ್ನು ಎಲ್ಲಿಯೂ ಹೇಳಿಕೊಳ್ಳಲು ಆಗುತ್ತಿರಲಿಲ್ಲ’ ಎಂದರು.

ಬಿಜೆಪಿ ವ್ಯಂಗ್ಯ
ಕಾಂಗ್ರೆಸ್‌ನ ಹಿರಿಯ ನಾಯಕ ಶಿಂಧೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ,‘ಮಾಜಿ ಗೃಹ ಸಚಿವರ ಹೇಳಿಕೆಯು ಕಾಂಗ್ರೆಸ್ ಬಂಡವಾಳವನ್ನು ಎಳೆಎಳೆಯಾಗಿ ಬಿಡಿಸಿದೆ. ಕಾಂಗ್ರೆಸ್‌ ತನ್ನ 10 ವರ್ಷದ ಅವಧಿಯಲ್ಲಿ ಜಮ್ಮು ಕಾಶ್ಮೀರವನ್ನು ಹೇಗೆ ಇಟ್ಟುಕೊಂಡಿತ್ತು ಎಂದು ಇದರಲ್ಲಿ ತಿಳಿಯುತ್ತದೆ’ ಎಂದು ಟಾಂಗ್‌ ನೀಡಿದೆ.

ಪಿಎಂ ಮೋದಿಯನ್ನ ನನ್ನ ವೈರಿಯೆಂದು ಪರಿಗಣಿಸಿಲ್ಲ ಎಂದ ರಾಹುಲ್ ಗಾಂಧಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದತಿ ಕೊಂಚ ಸರಿ ದಾರಿಗೆ
ಹಿಂದಿ ಹೇರಿಕೆ ಬಗ್ಗೆ ನ್ಯಾ। ನಾಗರತ್ನ ಬೇಸರ