ಪಂಚ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟ! ಕುತೂಹಲ ಹೆಚ್ಚಿಸಿದ ಮೇ4ರ ಫಲಿತಾಂಶ

Kannadaprabha News   | Kannada Prabha
Published : Apr 30, 2026, 06:30 AM IST
exit polls

ಸಾರಾಂಶ

ಪಂಚರಾಜ್ಯಗಳ ಚುನಾವಣೆಯ ಮತದಾನೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ನಡುವೆ ತೀವ್ರ ಪೈಪೋಟಿ ಇರುವುದನ್ನು ಸೂಚಿಸಿವೆ. ತಮಿಳುನಾಡಿನಲ್ಲಿ ಡಿಎಂಕೆ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲಿದ್ದು, ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ನವದೆಹಲಿ: ಪಂಚರಾಜ್ಯಗಳ ಚುನಾವಣೆಗಳು ಮುಗಿದ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು 3 ರಾಜ್ಯಗಳಲ್ಲಿ ಯಥಾಸ್ಥಿತಿ ಮುಂದುವರೆಯುವ, ಕೇರಳದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಮರಳುವ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ತುರುಸಿನ ಹೋರಾಟದ ಸುಳಿವು ನೀಡಿವೆ.

ಪಶ್ಚಿಮ ಬಂಗಾಳ ಎಕ್ಸಿಟ್ ಪೋಲ್:

ಪಶ್ಚಿಮ ಬಂಗಾಳಲ್ಲಿ ಈ ಬಾರಿ ಟಿಎಂಸಿ ಕೋಟೆಯನ್ನು ಛಿದ್ರಗೊಳಿಸಿ ಬಿಜೆಪಿ ಮೊದಲ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂದು 4 ಸಮಿಕ್ಷೆಗಳು ಹೇಳಿದ್ದರೆ 2 ಸಮೀಕ್ಷೆಗಳು ಸತತ 4ನೇ ಬಾರಿಗೆ ಮಮತಾರ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ. ಕಳೆದ ಚುನಾವಣೆಯಲ್ಲೂ ಸಮೀಕ್ಷೆಗಳು ಬಿಜೆಪಿ ಗೆಲುವಿನ ಭವಿಷ್ಯ ನುಡಿದಿದ್ದವಾದರೂ ಅದು ಸುಳ್ಳಾಗಿತ್ತು. ಹೀಗಾಗಿ ಈ ಬಾರಿ ಫಲಿತಾಂಶ ಏನಾಗಬಹುದು ಎಂಬ ಭಾರೀ ಕುತೂಹಲ ಮೂಡಿದೆ.

ತಮಿಳುನಾಡು:

ಡಿಎಂಕೆ, ಅಣ್ಣಾಡಿಎಂಕೆ ಮತ್ತು ವಿಜಯ್‌ರ ಟಿವಿಕೆ ನಡುವಿನ ಕದನಕ್ಕೆ ಸಾಕ್ಷಿಯಾಗಿದ್ದ ತಮಿಳುನಾಡಲ್ಲಿ ಡಿಎಂಕೆ ಕುರ್ಚಿ ಭದ್ರವಾಗಿದೆ ಎಂದು 6 ಸಮೀಕ್ಷೆಗಳು ಸುಳಿವು ನೀಡಿದ್ದರೆ, 1 ಸಮೀಕ್ಷೆ ಅಣ್ಣಾಡಿಎಂಕೆ- ಬಿಜೆಪಿ ಕೂಟದ ಗೆಲುವಿನ ಭವಿಷ್ಯ ನುಡಿದಿವೆ. ಇನ್ನು ಭಾರೀ ಅಬ್ಬರ ಮೂಡಿಸಿದ್ದ ವಿಜಯ್‌ ಅವರ ಟಿವಿಕೆ ಪಕ್ಷ ಹೆಚ್ಚೇನೂ ಸಾಧನೆ ಮಾಡದು ಎಂದು 5 ಸಮೀಕ್ಷೆಗಳು ಹೇಳಿದ್ದರೆ, ಒಂದು ಸಮೀಕ್ಷೆ ಮಾತ್ರ ವಿಜಯ್‌ ಪಕ್ಷ 120 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ.

ಅಸ್ಸಾಂ:

ರಾಜ್ಯ ವಿಧಾನಸಭೆಯ 126 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬುಧವಾರ ಪ್ರಕಟವಾದ ಬಹುತೇಕ ಚುನಾವಣಾ ಸಮೀಕ್ಷೆಗಳು ಹೇಳಿವೆ. ಇದು ಖಚಿತವಾದರೆ ಹಾಲಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ.

ಕೇರಳ:

ಸತತ 10 ವರ್ಷಗಳಿಂದ ರಾಜ್ಯವನ್ನು ಆಳಿದ್ದ, ಹಲವು ಭ್ರಷ್ಟಾಚಾರದ ಆರೋಪಕ್ಕೆ ತುತ್ತಾಗಿದ್ದ ಕೇರಳದಲ್ಲಿ ಎಡಪಕ್ಷಗಳ ಎಲ್‌ಡಿಎಫ್‌ ಮೈತ್ರಿಕೂಟ ಈ ಬಾರಿ ಅಧಿಕಾರ ಕಳೆದುಕೊಳ್ಳಲಿದೆ. ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಕೂಟ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಈ ನಡುವೆ ಕಳೆದ ಬಾರಿ ರಾಜ್ಯ ವಿಧಾನಸಭೆಯಲ್ಲಿ ಒಂದೂ ಸ್ಥಾನ ಹೊಂದಿರದಿದ್ದ ಬಿಜೆಪಿ ಈ ಬಾರಿ ದಾಖಲೆಯ 10-14 ಸ್ಥಾನ ಗೆಲ್ಲಬಹುದು ಎಂದು ಸಮೀಕ್ಷೆಗಳು ಹೇಳಿವೆ.

ಪುದುಚೇರಿ:

ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಆಲ್‌ ಇಂಡಿಯಾ ಎನ್‌ ಆರ್‌ ಕಾಂಗ್ರೆಸ್‌(ಎಐಎನ್‌ಆರ್‌ಸಿ) ಮತ್ತು ಬಿಜೆಪಿ ಕೂಟ ಅಧಿಕಾರಕ್ಕೆ ಮರಳಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಈ ಮೂಲಕ ಇನ್ನೊಂದು ವರ್ಷವೂ ಈ ಕೂಟದ ಆಡಳಿತವೇ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Viral Video: ಸಿಸಿಟಿವಿನೂ ಮಾಡತ್ತೆ ಮೋಸ- ಒಂದ್ರಲ್ಲಿ ಈಕೆ ಅಪರಾಧಿ, ಮತ್ತೊಂದರಲ್ಲಿ ಆತ; ನಿಜಕ್ಕೂ ಯಾರು?
Viral Video: ಮಗನ ಉಳಿಸಲು ರೈಲ್ವೆ ಹಳಿ ಮೇಲೆ ಜಿಗಿದ ಅಪ್ಪ- ಸಿನಿಮಾದಲ್ಲೂ ತೋರಿಸದ ಕ್ಲೈಮ್ಯಾಕ್ಸ್​