
ನ್ಯೂಯಾರ್ಕ್(ಮೇ.05): ಉಕ್ರೇನ್-ರಷ್ಯಾ ಯುದ್ಧದಿಂದಾಗಿ ಅಸಂಖ್ಯಾತ ಯೋಧರು, ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದು, ಅಂಗಾಂಗಗಳನ್ನು ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಮೆರಿಕದಲ್ಲಿರುವ ಭಾರತೀಯ ಮೂಲದ ಜೈಪುರ್ ಫäಟ್ ಸಂಸ್ಥೆಯು ಉಕ್ರೇನಿನಲ್ಲಿ ಅಂಗಾಂಗ ಜೋಡಣೆಯ ಶಿಬಿರ ಆಯೋಜಿಸಲು ಚಿಂತನೆ ನಡೆಸುತ್ತಿದೆ.
ಈ ಕುರಿತಂತೆ ಸಂಸ್ಥೆಯ ಮುಖ್ಯಸ್ಥ ಪ್ರೇಮ್ ಭಂಡಾರಿ ಹಾಗೂ ಜಂಟಿ ಕಾರ್ಯದರ್ಶಿ ನಿಶಾಂತ್ ಗಗ್ರ್, ಶಿಬಿರ ನಡೆಸಲು ಅನುಮತಿಗಾಗಿ ನ್ಯೂಯಾರ್ಕ್ನಲ್ಲಿರುವ ಉಕ್ರೇನಿನ ರಾಯಭಾರಿ ಓಲೆಸ್ಕಿ ಹೊಲುಬೊವ್ ಅವರನ್ನು ಮಂಗಳವಾರ ಭೇಟಿಯಾಗಿದ್ದಾರೆ.
‘ಆದರೆ ಪ್ರಸ್ತುತ ಉಕ್ರೇನಿನಲ್ಲಿ ರಷ್ಯಾ ತೀವ್ರ ದಾಳಿ ನಡೆಸುತ್ತಿದ್ದು, ಸಂಘರ್ಷವಲಯದಲ್ಲಿ ಶಿಬಿರವನ್ನು ಆಯೋಜಿಸುವುದು ಕಷ್ಟ. ಹೀಗಾಗಿ ಉಕ್ರೇನಿನ ನೆರೆಯ ರಾಷ್ಟ್ರಗಳಾದ ಪೊಲೆಂಡಿನಲ್ಲಿ ಅಂಗಾಂಗ ಜೋಡಣಾ ಶಿಬಿರ ಆಯೋಜಿಸುವ ಯೋಜನೆ ಹಾಕಿಕೊಳ್ಳುತ್ತಿದ್ದೇವೆ’ ಎಂದು ಭಂಡಾರಿ ತಿಳಿಸಿದ್ದಾರೆ.
ಪದ್ಮ ಭೂಷಣ ಪುರಸ್ಕೃತ ಡಿ. ಆರ್. ಮೆಹತಾ ಅವರು ಭಗವಾನ್ ಮಹಾವೀರ್ ವಿಕಲಾಂಗ ಸಹಾಯಕ ಸಮಿತಿಯನ್ನು ಆರಂಭಿಸಿದ್ದರು. ಇದು ಜೈಪುರ್ ಫäಟ್ನ ಮಾತೃಸಂಸ್ಥೆಯಾಗಿದೆ. ಈ ಸಮಿತಿಯು ಏಷ್ಯಾ, ಆಫ್ರಿಕಾ, ಲ್ಯಾಟಿನ್ ಅಮೆರಿಕದ 33 ದೇಶಗಳಲ್ಲಿ ಒಟ್ಟು 85 ಅಂತಾರಾಷ್ಟ್ರೀಯ ಅಂಗಾಂಗ ಜೋಡಣಾ ಶಿಬಿರವನ್ನು ಹಮ್ಮಿಕೊಂಡಿದೆ. 1.9 ಲಕ್ಷ ಜನರಿಗೆ ಈವರೆಗೆ ಅಂಗಾಂಗ ಜೋಡಣೆ ಮಾಡಿದ ಹಿರಿಮೆ ಹೊಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ