
ನವದೆಹಲಿ(ಏ.08): ಕೊರೋನಾ ನಿಗ್ರಹಕ್ಕಾಗಿ ದೇಶಾದ್ಯಂತ ಚಾಲ್ತಿಯಲ್ಲಿರುವ 21 ದಿನಗಳ ಲಾಕ್ಡೌನ್ ತೆರವಾಗಲಿ ಅಥವಾ ವಿಸ್ತರಣೆಯಾಗಲಿ ಮೇ 15ರವರೆಗೂ ಎಲ್ಲ ಶೈಕ್ಷಣಿಕ ಸಂಸ್ಥೆಗಳು, ಧಾರ್ಮಿಕ ಚಟುವಟಿಕೆಗಳು ಹಾಗೂ ಶಾಪಿಂಗ್ ಮಾಲ್ಗಳನ್ನು ಮೇ 15ರವರೆಗೂ ಮುಚ್ಚುವಂತೆ ಸಚಿವರ ಸಮಿತಿ ಮಂಗಳವಾರ ಮಹತ್ವದ ಶಿಫಾರಸು ಮಾಡಿದೆ.
ಈಗ ಇರುವ ಲಾಕ್ಡೌನ್ ತೆರವಾದರೂ ಧಾರ್ಮಿಕ ಕೇಂದ್ರಗಳು, ಶಾಪಿಂಗ್ ಮಾಲ್ಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳು ಏ.14ರಿಂದ ಕನಿಷ್ಠ ನಾಲ್ಕು ವಾರಗಳ ಕಾಲ ಕಾರ್ಯಾಚರಣೆ ಆರಂಭಿಸಲು ಅವಕಾಶ ನೀಡಬಾರದು ಎಂದು ರಾಜನಾಥ ಸಿಂಗ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಚಿವರ ಸಮಿತಿ ನಿಲುವು ಕೈಗೊಂಡಿದೆ.
ಕೊರೋನಾ ಆತಂಕ: ವಾಹನಕ್ಕೆ ಮುಗಿಬಿದ್ದು ಆಹಾರಧಾನ್ಯ ಹೊತ್ತೊಯ್ದ ಜನ!
ಕೊರೋನಾ ವೈರಸ್ ಮತ್ತಷ್ಟುಹರಡದಂತೆ ತಡೆಯಲು ಯಾವುದೇ ಧಾರ್ಮಿಕ ಸಂಘಟನೆಗಳ ಚಟುವಟಿಕೆಗೆ ಮೇ 15ರವರೆಗೂ ಅವಕಾಶ ನೀಡಬಾರದು ಎಂದೂ ಸಮಿತಿ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಕೊರೋನಾದಿಂದ ಉದ್ಭವವಾಗುವ ಪರಿಸ್ಥಿತಿಯ ಬಗ್ಗೆ ಕಾಲಕಾಲಕ್ಕೆ ನಿಗಾ ವಹಿಸಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಿಫಾರಸು ಮಾಡಲು ಸಚಿವರ ಸಮಿತಿಯನ್ನು ರಚನೆ ಮಾಡಲಾಗಿದೆ. ಹೀಗಾಗಿ ಈ ಸಮಿತಿಯ ಶಿಫಾರಸುಗಳು ಮಹತ್ವ ಪಡೆದುಕೊಂಡಿವೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ