Fact Check: ಕೇಜ್ರಿವಾಲ್‌ ಮೇಲೆ ಕೊಳಕು ನೀರು ಚೆಲ್ಲಿದ ಮಹಿಳೆ!

Published : Feb 04, 2020, 09:28 AM IST
Fact Check: ಕೇಜ್ರಿವಾಲ್‌ ಮೇಲೆ ಕೊಳಕು ನೀರು ಚೆಲ್ಲಿದ ಮಹಿಳೆ!

ಸಾರಾಂಶ

ದೆಹಲಿ ಚುನಾವಣೆಗೆ ದಿನಗಣನೆ ನಡೆಯುತ್ತಿದೆ. ಆಮ್‌ ಆದ್ಮಿ, ಬಿಜೆಪಿ, ಕಾಂಗ್ರೆಸ್‌ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಈ ನಡುವೆ ಮತಯಾಚಿಸಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಪ್ರಚಾರಕ್ಕೆ ತೆರಳಿದ ಸಂದರ್ಭದಲ್ಲಿ ಮಹಿಳೆಯೊಬ್ಬರು ಕೇಜ್ರಿವಾಲ್‌ ಮೇಲೆ ಕೊಳಕು ನೀರು ಸೋಕಿದ್ದಾರೆ ಎನ್ನುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ದೆಹಲಿ ಚುನಾವಣೆಗೆ ದಿನಗಣನೆ ನಡೆಯುತ್ತಿದೆ. ಆಮ್‌ ಆದ್ಮಿ, ಬಿಜೆಪಿ, ಕಾಂಗ್ರೆಸ್‌ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಈ ನಡುವೆ ಮತಯಾಚಿಸಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಪ್ರಚಾರಕ್ಕೆ ತೆರಳಿದ ಸಂದರ್ಭದಲ್ಲಿ ಮಹಿಳೆಯೊಬ್ಬರು ಕೇಜ್ರಿವಾಲ್‌ ಮೇಲೆ ಕೊಳಕು ನೀರು ಸೋಕಿದ್ದಾರೆ ಎನ್ನುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಕೇಜ್ರಿವಾಲ್‌ ಧರಿಸಿದ್ದ ಶರ್ಟಿನ ಮೇಲೆ ನೀರು ಬಿದ್ದಂತೆ ಕಾಣುವ ಫೋಟೋವನ್ನು ಪೋಸ್ಟ್‌ ಮಾಡಿ ಹೀಗೆ ಹೇಳಲಾಗಿದೆ.

Fact Check: ಬೇಯಿಸಿದ ಬೆಳ್ಳುಳ್ಳಿಯಿಂದ ಕರೋನಾ ವೈರಸ್‌ ಗುಣವಾಗುತ್ತೆ!

ಹಾರ್ದಿಕ್‌ ಗೋಯಲ್‌ ಎನ್ನುವ ಫೇಸ್‌ಬುಕ್‌ ಬಳಕೆದಾರರು ಇದನ್ನು ಪೋಸ್ಟ್‌ ಮಾಡಿ, ‘ಮಹಿಳೆಯೊಬ್ಬರು ಕೇಜ್ರಿವಾಲ್‌ ಮೇಲೆ ಕೊಳಕು ನೀರು ಚೆಲ್ಲಿದ್ದಾರೆ. ಇದು ಇನ್ನೂ ಆರಂಭ ಅಷ್ಟೇ’ ಎಂದು ಬರೆದುಕೊಂಡಿದ್ದಾರೆ.

ಆದರೆ ಈ ಫೋಟೋ ಹಿಂದಿನ ಸತ್ಯಾಸತ್ಯ ಏನೆಂದು ಇಂಡಿಯಾ ಟು ಡೇ ಪರಿಶೀಲಿಸಿದಾಗ ಇದು ಸುಳ್ಳುಸುದ್ದಿ ಯಾರೂ ಕೇಜ್ರಿವಾಲ್‌ ಮೇಲೆ ಕೊಳಕು ನೀರು ಚೆಲ್ಲಿಲ್ಲ ಎಂಬುದು ಖಚಿತವಾಗಿದೆ. ವಾಸ್ತವವಾಗಿ ವೈರಲ್‌ ವಿಡಿಯೋ 2017ರದ್ದು. ಆಗ ವೆಬ್‌ಸೈಟ್‌ವೊಂದರಲ್ಲಿ ಇದೇ ಶರ್ಟ್‌ ಇರುವ ಫೋಟೋದೊಂದಿಗೆ ಪ್ರಕಟವಾಗಿದ್ದ ಸುದ್ದಿಯೊಂದು ಲಭ್ಯವಾಗಿದೆ.

ಅದರಲ್ಲಿ ‘ವಿಧಾನಸಭಾ ಉಪ ಚುನಾವಣಾ ಹಿನ್ನೆಲೆಯಲ್ಲಿ ಬವಾನಾ ಕ್ಷೇತ್ರದಲ್ಲಿ ಮತಪ್ರಚಾರಕ್ಕೆ ತೆರಳಿದ ಸಂದರ್ಭದಲ್ಲಿ ಕೇಜ್ರಿವಾಲ್‌ ಬೆವರಿದ್ದು ಹೀಗೆ’ ಎಂದು ಹೇಳಲಾಗಿದೆ. ಇದಕ್ಕೆ ಸಂಬಂಧಿಸಿದ ಹಲವು ಫೋಟೋಗಳಲ್ಲಿ ಕೇಜ್ರಿವಾಲ್‌ ಬೆವರಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ. ಆ ಉಪಚುನಾವಣೆ ಸಂದರ್ಭದಲ್ಲಿ ದೆಹಲಿಯಲ್ಲಿ ತೀವ್ರ ಬೇಸಿಗೆ ಇತ್ತು. ಹಾಗಾಗಿ ಪ್ರಚಾರದ ವೇಳೆ ಕೇಜ್ರಿವಾಲ್‌ ಬೆವರಿದ್ದರು.

- ವೈರಲ್ ಚೆಕ್ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೆಳತಿಯ ತಡೆಯಲು ಕಾರಿನ ರೂಫ್‌ ಮೇಲೆ ಹತ್ತಿದ.. ಆದರೆ ಆಕೆಯ ಪ್ರಿಯಕರ ಆತನ ಮೇಲೆ ಕಾರು ಹತ್ತಿಸಿದ
IAS: ಭ್ರಷ್ಟ ವ್ಯವಸ್ಥೆ ನಿದ್ದೆಗೆಡಿಸಿದ ಭಾರತದ ಆ ಐರನ್ ಐಎಎಸ್' ಆಫೀಸರ್ಸ್; ಈ ಲಿಸ್ಟ್‌ನಲ್ಲಿದೆ ಒಂದು ಕನ್ನಡದ ಕಲಿ!