ಮಹಾರಾಷ್ಟ್ರ ಜಿಂದಾಲ್‌ ಕಂಪನಿಯಲ್ಲಿ ಬಾಯ್ಲರ್‌ ಸ್ಫೋಟ, 3 ಸಾವು , 17 ಮಂದಿಗೆ ಗಾಯ

Published : Jan 01, 2023, 08:17 PM IST
ಮಹಾರಾಷ್ಟ್ರ ಜಿಂದಾಲ್‌ ಕಂಪನಿಯಲ್ಲಿ ಬಾಯ್ಲರ್‌ ಸ್ಫೋಟ, 3 ಸಾವು , 17 ಮಂದಿಗೆ ಗಾಯ

ಸಾರಾಂಶ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಇಗತ್‌ಪುರಿಯಲ್ಲಿರುವ ಕಾರ್ಖಾನೆಯಲ್ಲಿ ಭಾನುವಾರ ಬಹುದೊಡ್ಡ ಅಗ್ನಿ ದುರಂತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಈವರೆಗೆ  ಮೂವರು  ಸಾವನ್ನಪ್ಪಿ , 17 ಮಂದಿ ಗಾಯಗೊಂಡಿದ್ದಾರೆ. 

ಮುಂಬಯಿ (ಜ.1): ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಇಗತ್‌ಪುರಿಯಲ್ಲಿರುವ ಕಾರ್ಖಾನೆಯಲ್ಲಿ ಭಾನುವಾರ ಬಹುದೊಡ್ಡ ಅಗ್ನಿ ದುರಂತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಈವರೆಗೆ ಮೂವರು ಸಾವನ್ನಪ್ಪಿ , 17 ಮಂದಿ ಗಾಯಗೊಂಡಿದ್ದಾರೆ.  ನಾಸಿಕ್‌ನ ಇಗತ್‌ಪುರಿ ತಾಲೂಕಿನ ಮುಂಢೆಗಾಂವ್‌ ಬಳಿಯ ಜಿಂದಾಲ್‌ ಕಂಪನಿಯ  ಬಾಯ್ಲರ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದ ನಂತರ ಬೆಂಕಿ ಕಾಣಿಸಿಕೊಂಡು ಈ ದುರಂತ ನಡೆದಿದೆ. ಬೆಳಗ್ಗೆ 11.30ರ ಸುಮಾರಿಗೆ ಕೆಲವು ಕಾರ್ಮಿಕರು ಆವರಣದಲ್ಲಿದ್ದಾಗ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.

ಸ್ಫೋಟವು ಎಷ್ಟು ಪ್ರಭಾವಿತವಾಗಿತ್ತೆಂದರೆ ಸ್ಥಳೀಯ 20 ರಿಂದ 25 ಹಳ್ಳಿಗಳಲ್ಲಿ ಬಾಯ್ಲರ್‌ ಸ್ಫೋಟದ ಅನುಭವಾಗಿದೆ. ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.  ಸಾಮಾನ್ಯವಾಗಿ 20ರಿಂದ 25 ಮಂದಿ ಸ್ಥಾವರದಲ್ಲಿ ಕೆಲಸ ಮಾಡುತ್ತಾರೆ. ಆದರೆ, ಹೊಸ ವರ್ಷದ ಮೊದಲ ದಿನವಾದ್ದರಿಂದ ಭಾನುವಾರ ಈ ಸಂಖ್ಯೆ ಕಡಿಮೆಯಾಗಿತ್ತು. ಇದು ಸ್ವಯಂಚಾಲಿತ ಸ್ಥಾವರವಾದ್ದರಿಂದ, ಸ್ಫೋಟದ ಸಮಯದಲ್ಲಿ ಹೆಚ್ಚಿನ ಸಿಬ್ಬಂದಿ ಇರಲಿಲ್ಲ. 

Chikkamagaluru News: ಹೊಸಕೆರೆ ಸರ್ಕಾರಿ ಶಾಲೆಯಲ್ಲಿ ಸಿಲಿಂಡರ್‌ ಸ್ಫೋಟ, ಗೋಡೆ ಕುಸಿತ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನಾಸಿಕ್ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿರುವ ಸುಯಾಶ್ ಆಸ್ಪತ್ರೆಗೆ  ಭೇಟಿ ಮಾಡಿದ್ದು, ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಘೋಷಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಘಟನೆ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದು ಸಿಎಂ ಶಿಂಧೆ ಹೇಳಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದ್ದು, ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ.

China Weapons: 'ಪಾಕ್' ಉಗ್ರರ ನಿಗೂಢ ಸಂಚು: ಕಾಶ್ಮೀರದ ಗುಹೆಯಲ್ಲಿ 'ಚೀನಾ' ಆಯುಧಗಳು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್