ಐಎನ್‌ಎಸ್ ವಿಕ್ರಾಂತ್‌ ಈಗ ಎಲ್ಲಿದೆ ಎಂದು ಕೇಳಿದ ಕೇರಳದ ವ್ಯಕ್ತಿಯ ಬಂಧನ

Published : May 13, 2025, 01:33 PM IST
 ಐಎನ್‌ಎಸ್ ವಿಕ್ರಾಂತ್‌ ಈಗ ಎಲ್ಲಿದೆ ಎಂದು ಕೇಳಿದ ಕೇರಳದ ವ್ಯಕ್ತಿಯ ಬಂಧನ

ಸಾರಾಂಶ

ಪ್ರಧಾನಿ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ಐಎನ್‌ಎಸ್ ವಿಕ್ರಾಂತ್ ಯುದ್ಧನೌಕೆಯ ಬಗ್ಗೆ ಮಾಹಿತಿ ಕೇಳಿದ ಕೇರಳ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. 

ಕೊಚ್ಚಿ: ಪಿಎಂಒ ಅಧಿಕಾರಿ ಎಂದು ಹೇಳಿಕೊಂಡು ಐಎನ್‌ಎಸ್ ವಿಕ್ರಾಂತ್ ಯುದ್ಧನೌಕೆಯ ಸ್ಥಳದ ಬಗ್ಗೆ ಮಾಹಿತಿ ಕೇಳಿದ ಕೇರಳ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮುಜಿಬ್ ರೆಹಮಾನ್ ಎಂದು ಗುರುತಿಸಲಾಗಿದೆ. ಈತ ಕೇರಳದ ಕೋಜಿಕೋಡ್‌ನ ನಡಕ್ಕವು ನಿವಾಸಿಯಾಗಿದ್ದಾನೆ. ಈತ ಪ್ರಧಾನಿ ಸಚಿವಾಲಯದ ಅಧಿಕಾರಿ ಎಂದು ಹೇಳಿಕೊಂಡು ಕೊಚ್ಚಿಯಲ್ಲಿರುವ ನೌಕಾನೆಲೆಗೆ ಕರೆ ಮಾಡಿ ಐಎನ್‌ಎಸ್‌ ವಿಕ್ರಾಂತ್ ಯುದ್ಧನೌಕೆಯ ಬಗ್ಗೆ ಮಾಹಿತಿ ಕೇಳಿದ್ದಾನೆ. ಕೂಡಲೇ ಆತನನ್ನು ಪೊಲೀಸರು ಬಂಧಿಸಿದ್ದು, ಕೋಜಿಕೋಡ್‌ನಿಂದ ಕೊಚ್ಚಿಗೆ ವಿಚಾರಣೆಗಾಗಿ ಕರೆದುಕೊಂಡು ಬಂದಿದ್ದಾರೆ. ಬಳಿಕ ಆತನನ್ನು ವಿಚಾರಣೆ ನಡೆಸಲಾಗಿದ್ದು, ಬಂಧಿಸಲಾಗಿದೆ.

ಈತ ಕೊಚ್ಚಿ ನೌಕಾನೆಲೆಯ ಲ್ಯಾಂಡ್‌ಲೈನ್ ನಂಬರ್‌ಗೆ ಕರೆ ಮಾಡಿದ್ದು, ತಾನು ಪ್ರಧಾನಿ ಸಚಿವಾಲಯದ ಅಧಿಕಾರಿ, ಪ್ರಸ್ತುತ ಐಎನ್‌ಎಸ್ ವಿಕ್ರಾಂತ್ ಎಲ್ಲಿದೆ ಎಂದು ಕೇಳಿದ್ದಾನೆ. ಶುಕ್ರವಾರ ರಾತ್ರಿ 9 ಗಂಟೆಗೆ ಈ ಕರೆ ಬಂದಿದೆ. ಅಲ್ಲದೇ ಮುಜಿಬ್ ರೆಹಮಾನ್ ತನ್ನ ಹೆಸರನ್ನು ರಾಘವನ್ ಎಂದು ಹೇಳಿಕೊಂಡಿದ್ದಾನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೊಚ್ಚಿ ನೌಕಾನೆಲೆಯ ಅಧಿಕಾರಿಗಳು ಅಲ್ಲಿನ ಹಾರ್ಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದಾದ ನಂತರ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 319(2)ರ ಅಡಿ ಹಾಗೂ ಅಧಿಕಾರಿಗಳ ರಹಸ್ಯ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಈತನನ್ನು ಸ್ಥಳೀಯ ಪೊಲೀಸರು ನೌಕಾಪಡೆ ಹಾಗೂ ಗುಪ್ತಚರ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ನಡುವಣ ಬಿಕ್ಕಟ್ಟು ತೀವ್ರವಾಗಿ ಉಲ್ಬಣಿಸಿದ ಸಮಯದಲ್ಲೇ ಈ ಕರೆ ಬಂದಿದೆ. ಹೀಗಾಗಿ ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತೀವ್ರವಾಗಿ ವಿಚಾರಣೆ ನೆಸುವುದಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

1,2,5 ರೂ. ನಾಣ್ಯ ಇವೆಯಾ? ಹಾಗಿದ್ರೆ ರಿಸರ್ವ್​ ಬ್ಯಾಂಕ್​ ಕೊಟ್ಟಿರೋ ಬಿಗ್​ ಅಪ್​ಡೇಟ್​ ಒಮ್ಮೆ ನೋಡಿ
ಬಿಜೆಪಿಯ ಲೆನ್ಸ್‌ ಒಳಗಿಂದ ಆರ್‌ಎಸ್‌ಎಸ್‌ನ್ನು ಅರ್ಥ ಮಾಡಿಕೊಳ್ಳುವುದು ದೊಡ್ಡ ತಪ್ಪು: ಮೋಹನ್ ಭಾಗವತ್