ಕಾರಿಗೆ ಅಡ್ಡಬಂದ ನೀಲಗಾಯ್‌ ಜೀವ ಉಳಿಸಲು ಹೋಗಿ ಭೀಕರ ಅಪಘಾತ, ಒಂದೇ ಕುಟುಂಬದ 7 ಮಂದಿ ಸಾವು!

Published : Aug 06, 2023, 10:18 AM IST
ಕಾರಿಗೆ ಅಡ್ಡಬಂದ ನೀಲಗಾಯ್‌ ಜೀವ ಉಳಿಸಲು ಹೋಗಿ ಭೀಕರ ಅಪಘಾತ, ಒಂದೇ ಕುಟುಂಬದ 7 ಮಂದಿ ಸಾವು!

ಸಾರಾಂಶ

ಉತ್ತರ ಪ್ರದೇಶದ ಶ್ರಾವಸ್ತಿ ಪ್ರದೇಶದ ಹೆದ್ದಾರಿಯಲ್ಲಿ  ಭೀಕರ ದುರಂತವೊಂದು ನಡೆದಿದ್ದು,   ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ.

ಲಕ್ನೋ (ಆ.6): ಉತ್ತರ ಪ್ರದೇಶದ ಶ್ರಾವಸ್ತಿ ಪ್ರದೇಶದ ಬುದ್ಧ ಸರ್ಕ್ಯೂಟ್ (ಬಹ್ರೈಚ್-ಬಲ್ರಾಮ್‌ಪುರ) ಹೆದ್ದಾರಿಯಲ್ಲಿ  ಭೀಕರ ದುರಂತವೊಂದು ನಡೆದಿದ್ದು, ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ತಡರಾತ್ರಿ ಶ್ರಾವಸ್ತಿ ಪ್ರದೇಶದಲ್ಲಿ 'ನೀಲಗಾಯ್' (ನೀಲಿ ಹಸು) ಉಳಿಸುವ ಸಲುವಾಗಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ.

ಪಂಜಾಬ್‌ನಿಂದ ಸ್ಕಾರ್ಪಿಯೋ ಕಾರನ್ನು ಕಾಯ್ದಿರಿಸಿ ಐಕೋನಾದ ತಮ್ಮ ಮನೆಗೆ ಹಿಂತಿರುಗುತ್ತಿದ್ದಾಗ ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿದ್ದರು.  ಮೃತರೆಲ್ಲರೂ ನೇಪಾಲ್​ಗಂಜ್​ನ ತ್ರಿಭುವನ್ ಚೌಕದ ನಿವಾಸಿಗಳಾಗಿದ್ದಾರೆ. ನೇಪಾಲ್​ಗಂಜ್​ನ ತ್ರಿಭುವನ್ ಚೌಕದ ನಿವಾಸಿ  ನೀಲಾಂಶ್ ಗುಪ್ತಾ (25) ಹಾಗೂ ಸಹೋದರಿಯರಾದ ನಿತಿ ಗುಪ್ತಾ (18), ವೈಭವ್ (28) ಮತ್ತು ಕುಟುಂಬದ ಸದಸ್ಯರು ಮತ್ತು ಇಬ್ಬರು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ.

Bengaluru: ಜೈಲಿಂದ ಬಿಡುಗಡೆಯಾಗಿ ಮನೆ ಸೇರುವ ಮುನ್ನವೇ ನವ ವಿವಾಹಿತಿ ರೌಡಿ ಶೀಟರ್‌ ಬರ್ಬರ ಹತ್ಯೆ

ಜೀಪ್‌ ಬೌದ್ಧ ಸರ್ಕ್ಯೂಟ್‌ನ ಸೀತಾದ್ವಾರದ ತಿರುವಿನಲ್ಲಿ ಬಂದ ತಕ್ಷಣ, ಅಡ್ಡಬಂದ ನೀಲ್‌ಗಾಯ್‌ ಗಳನ್ನು ಉಳಿಸುವ ಪ್ರಯತ್ನದಲ್ಲಿ  ಜೀಪು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.  ವಿಷಯ ತಿಳಿದ ಐಕೌನಾ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು, ವಾಹನದ ಬಾಗಿಲು ಕಟ್ ಮಾಡಿ ಮೃತದೇಹವನ್ನು ಹೊರತೆಗೆದರು. ಗಂಭೀರ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು ಎಂದು ತಿಳಿದುಬಂದಿದೆ.

ಜೈಲಿನಲ್ಲಿರುವ ತಮಿಳುನಾಡು ಸಚಿವನ ಚಾಲಕನ ಮನೆಯಲ್ಲಿ ಸಿಕ್ತು ಬರೋಬ್ಬರಿ 22 ಲಕ್ಷ 

ಈ ಬಗ್ಗೆ ಮಾತನಾಡಿದ ಶ್ರಾವಸ್ತಿ ಪೊಲೀಸ್ ವರಿಷ್ಠಾಧಿಕಾರಿ ಪ್ರಾಚಿ ಸಿಂಗ್,  ಮೃತರೆಲ್ಲರೂ ಬೌದ್ಧ ಸರ್ಕ್ಯೂಟ್‌ನಲ್ಲಿ ಸೀತಾದ್ವಾರವನ್ನು ತಲುಪಿದ ತಕ್ಷಣ, ಮಾರ್ಗದಲ್ಲಿ 'ನೀಲಗಾಯ್' ಅಡ್ಡ ಬಂದಿತು. ಅದನ್ನು ಉಳಿಸಲು ಚಾಲಕನ ನಿಯಂತ್ರಣ ತಪ್ಪಿ ಗಾಡಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಎಸ್‌ಯುವಿ ಪಲ್ಟಿಯಾಗಿ ಕಂದಕಕ್ಕೆ ಬಿದ್ದು ಈ ದುರಂತ ನಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ನೇಪಾಳ ಜೆನ್‌-ಝೀ ದಂಗೆ: ₹8.5 ಸಾವಿರ ಕೋಟಿ ನಷ್ಟ
ಡಿಕೆ ಶಿವಕುಮಾರ್‌ಗೆ ಕೇಂದ್ರ ನಾಯಕತ್ವ ಸ್ಥಾನ : ಕಾಂಗ್ರೆಸ್‌ನಲ್ಲಿ ಕೂಗು