ವಯನಾಡು ದುರಂತದಲ್ಲಿ ನಲುಗಿದ ಕುಟುಂಬಕ್ಕೆ ರಾತ್ರಿ ಇಡೀ ಆಶ್ರಯ ನೀಡಿ ಕಾಪಾಡಿದ ಕಾಡಾನೆ!

Published : Aug 03, 2024, 08:59 AM ISTUpdated : Aug 03, 2024, 12:27 PM IST
ವಯನಾಡು ದುರಂತದಲ್ಲಿ ನಲುಗಿದ ಕುಟುಂಬಕ್ಕೆ ರಾತ್ರಿ ಇಡೀ ಆಶ್ರಯ ನೀಡಿ ಕಾಪಾಡಿದ ಕಾಡಾನೆ!

ಸಾರಾಂಶ

ವಯನಾಡು ಭೂಕುಸಿತದ ವೇಳೆ ಆನೆಯೊಂದು ಇಡೀ ಕುಟುಂಬವನ್ನು ಕಾಪಾಡಿದ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ.

ಮೆಪ್ಪಾಡಿ (ಆ.3): ವಯನಾಡು ಭೂಕುಸಿತದ ವೇಳೆ ಇಡೀ ಮನೆ ಕುಸಿದು ಬಿದ್ದು, ಕುಟುಂಬ ಸದಸ್ಯರೊಂದಿಗೆ ಜೀವ ಉಳಿಸಿಕೊಳ್ಳಲು ಪರಾರಿಯಾಗುತ್ತಿದ್ದ ವೇಳೆ ಎದುರಾಗಿದ್ದ ಆನೆಯೊಂದು ಇಡೀ ಕುಟುಂಬವನ್ನು ಕಾಪಾಡಿದ ಅಚ್ಚರಿಯ ಘಟನೆಯೊಂದು ನಡೆದಿದೆ.

ಚೂರಲ್‌ಮಲೆಯಲ್ಲಿ ಘಟನೆ ನಡೆದ ದಿನ ಮಧ್ಯರಾತ್ರಿ ಭಾರೀ ಪ್ರವಾಹದ ಕಾರಣ ಸುಜಾತಾ ಎಂಬುವವರ ಮನೆ ಪೂರ್ಣ ಕುಸಿದುಬಿದ್ದಿತ್ತು. ಪರಿಣಾಮ ಮನೆಯೊಳಗಿದ್ದ ಅಳಿಯ, ಮಗಳು ಮತ್ತು ಇಬ್ಬರು ಮೊಮ್ಮಕ್ಕಳು ಗಾಯಗೊಂಡಿದ್ದರು. ಇನ್ನು ಇಲ್ಲೇ ಇದ್ದರೆ ಪ್ರಾಣಾಪಾಯ ಗ್ಯಾರಂಟಿ ಎಂದು ಸುಜಾತಾ ಇಡೀ ಕುಟುಂಬ ಸದಸ್ಯರನ್ನು ಸೇರಿಸಿಕೊಂಡು ಟೀ ಎಸ್ಟೇಟ್‌ನ ಎತ್ತರದ ಪ್ರದೇಶದತ್ತ ಹೆಜ್ಜೆ ಹಾಕಿದ್ದರು.

ವಯನಾಡಿನ ಕಲ್ಲು ಮಣ್ಣು ಅವಶೇಷಗಳಡಿ ಉಸಿರಾಡುತ್ತಿದೆ ಜೀವ, ರೇಡಾರ್‌ನಲ್ಲಿ ನಾಡಿಮಿಡಿತ ಪತ್ತೆ!

ಆದರೆ ಸ್ವಲ್ಪ ದೂರ ಸಾಗುವಷ್ಟರಲ್ಲೇ ಎದುರಿಗೆ ಮೂರು ಕಾಡಾನೆಗಳ ಗುಂಪು ಕಂಡಿತ್ತು. ಸುಜಾತಾ ಕುಟುಂಬಕ್ಕೆ ಒಮ್ಮೆ ಎದೆ ಧಸಕ್ಕೆಂದಿತ್ತು. ಆದರೂ ಧೈರ್ಯಗೆಡದ ಸುಜಾತಾ ಆನೆಗಳ ಮುಂದೆ ಕೈಮುಗಿದು, ಈಗಷ್ಟೇ ಒಂದು ದುರಂತದಿಂದ ಪಾರಾಗಿ ಬಂದಿದ್ದೇನೆ. ದಯವಿಟ್ಟು ನಮ್ಮ ಕುಟುಂಬವನ್ನು ಬಿಟ್ಟುಬಿಡು. ಬೆಳಗಿನ ಜಾವದವರೆಗೆ ನಮಗೆ ಇಲ್ಲೇ ಇರಲು ಬಿಡಿ ಎಂದು ಕೇಳಿಕೊಂಡಿದ್ದಾರೆ.

ಆನೆಗೆ ಏನನ್ನಿಸಿತೋ ಸುಮ್ಮನಾಗಿದೆ. ಬಳಿಕ ಕುಟುಂಬದ ಎಲ್ಲಾ ಸದಸ್ಯರು ಮೂರು ಆನೆಗಳಿಂದ ಕೆಲವೇ ಅಡಿಗಳ ದೂರದಲ್ಲಿ ಮರದಡಿ ನಿಂತು ಬೆಳಗಿನ ಜಾವದವರೆಗೆ ಕಾಲ ಕಳೆದಿದ್ದಾರೆ. ಆನೆಗಳು ಬೆಳಗಿನ ಜಾವದರೆಗೆ ಅಲ್ಲೇ ನಿಂತು ಕುಟುಂಬಕ್ಕೆ ರಕ್ಷಣೆ ನೀಡಿವೆ. ಬೆಳಗ್ಗೆ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ ಬಳಿಕವಷ್ಟೇ ಆನೆಗಳು ಅಲ್ಲಿಂದ ತೆರಳಿವೆ ಎಂದು ಸುಜಾತಾ ಆಘಾತಕಾರಿ ಘಟನೆ, ಬಳಿಕ ಆನೆಗಳು ತಮಗೆ ಪ್ರಾಣಭಿಕ್ಷೆ ನೀಡಿದ ಘಟನೆಯನ್ನು ಎಲ್ಲರೊಂದಿಗೆ ಹಂಚಿಕೊಂಡಿದ್ದಾರೆ.

Wayanad Landslides: ಭೂಕುಸಿತ ಪ್ರದೇಶದಲ್ಲಿ ನಾಲ್ವರನ್ನ ರಕ್ಷಣೆ ಮಾಡಿದ ಭಾರತೀಯ ಸೇನೆ!

ನೀರಿನಲ್ಲಿ ಕೊಚ್ಚಿಹೋದರೂ ಬದುಕಿದ 40 ದಿನದ ಕಂದ, 6 ವರ್ಷದ ಪುಟ್ಟ ಬಾಲಕ:
ಮೆಪ್ಪಾಡಿ: ಚೂರಲ್‌ಮಲೆಯಲ್ಲಿ ಒಂದೇ ಕುಟುಂಬದ 6 ಜನರ ಪೈಕಿ ಮೂವರು ಸಾವನ್ನಪ್ಪಿದ್ದರೂ, 40 ದಿನದ ಮಗು, ಆತನ 6 ವರ್ಷದ ಸೋದರ ಮತ್ತು ಇವರಿಬ್ಬರ ತಾಯಿ ಪವಾಡ ಸದೃಶ್ಯವಾಗಿ ಬದುಕಿ ಬಂದಿದ್ದಾರೆ.

ಭೂಕುಸಿದ ಘಟನೆ ನಡೆದ ದಿನ ಮನೆಯಲ್ಲಿ ನೀರು ನುಗ್ಗಿದ್ದನ್ನು ನೋಡಿದ ತಂಝೀರಾ ಎಂಬ ಬಾಣಂತಿ ತನ್ನ 40 ದಿನಗಳಷ್ಟೇ ತುಂಬಿದ ಹಸುಗೂಸು ಅನಾರ್‌, 6 ವರ್ಷದ ಇನ್ನೊಬ್ಬ ಮಗ ಹಯಾನ್‌, ಅಜ್ಜಿ ಮತ್ತು ಮುತ್ತಾತನನ್ನು ಮನೆಯ ಮೇಲಿನ ಮಹಡಿಗೆ ಕರೆದೊಯ್ದಿದ್ದರು.

ಆದರೆ ಪ್ರವಾಹ ಮೇಲಿನ ಮಹಡಿಯನ್ನೂ ಬಿಡದೆ ಅಪ್ಪಳಿಸಿದಾಗ ಅಜ್ಜಿ ಮತ್ತು ಮುತ್ತಾತ, ಪ್ರವಾಹದ ಅಬ್ಬರಕ್ಕೆ ಕೊಚ್ಚಿ ಹೋಗಿದ್ದಾರೆ. ಈ ವೇಳೆ ಪ್ರವಾಹದ ಅಬ್ಬರ ತಂಝೀರಾ ಮೇಲೂ ಅಪ್ಪಳಿಸಿದ್ದು, ಆಕೆಯ ಇಬ್ಬರೂ ಮಕ್ಕಳು ಕೈಯಿಂದ ಜಾರಿ ಹೋಗಿದ್ದಾರೆ. ಅದೃಷ್ಟವಶಾತ್‌ ಆಕೆ 40 ತಿಂಗಳ ಮಗುವಿನ ಹಿಡಿದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಹಯಾನ್‌ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ತಂಝೀರಾಳ ಅದೃಷ್ಟಕ್ಕೆ ಹಯಾನ್, ಕೊಚ್ಚಿಹೋದ ಪ್ರದೇಶದಿಂದ ಸ್ವಲ್ಪದೂರದಲ್ಲಿ ಬಾವಿಯೊಂದರ ಕಬ್ಬಿಣದ ತಂತಿಗೆ ಸಿಕ್ಕಿಬಿದ್ದಿದ್ದಾನೆ. ಕೆಲ ಹೊತ್ತಿನ ಬಳಿಕ ರಕ್ಷಣಾ ಸಿಬ್ಬಂದಿ ಆತನನ್ನು ಗಮನಿಸಿ ರಕ್ಷಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು