ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್‌ ಆರೋಗ್ಯ ಏರುಪೇರು: ಜೀರೋ ಟ್ರಾಫಿಕ್‌ನಲ್ಲಿ ಆಸ್ಪತ್ರೆಗೆ ದಾಖಲು

Published : Jul 10, 2023, 09:16 PM ISTUpdated : Jul 10, 2023, 09:28 PM IST
ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್‌ ಆರೋಗ್ಯ ಏರುಪೇರು: ಜೀರೋ ಟ್ರಾಫಿಕ್‌ನಲ್ಲಿ ಆಸ್ಪತ್ರೆಗೆ ದಾಖಲು

ಸಾರಾಂಶ

ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್‌ ಅವರು ಆರೋಗ್ಯದಲ್ಲಿ ಏರುಪೇರು ಸಂಭವಿಸಿದ್ದು, ಬೆಂಗಳೂರಿನ ನಾರಾಯಣ ಹೆಲ್ತ್‌ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು (ಜು.10): ದೇಶದ ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್‌ ಅವರು ಆರೋಗ್ಯದಲ್ಲಿ ಏರುಪೇರು ಸಂಭವಿಸಿದ್ದು, ಬೆಂಗಳೂರಿನ ಬೊಮ್ಮಸಂದ್ರ ಬಳಿಯಿರುವ ನಾರಾಯಣ ಹೆಲ್ತ್‌ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ದೇಶದ ಖ್ಯಾತ ವಿಜ್ಞಾನಿಗಳಲ್ಲಿ ಒಬ್ಬರಾದ ಹಾಗೂ ಇಸ್ರೋ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ಕಸ್ತೂರಿ ರಂಗನ್‌ ಅವರು ಆರೋಗ್ಯ ಸಮಸ್ಯೆಯಿಂದ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಬೆಂಗಳೂರಿನ ಬೊಮ್ಮಸಂದ್ರ ಬಳಿಯ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಿದ್ದು, ಚಿಕಿತ್ಸೆ ನಿಡಲಾಗುತ್ತಿದೆ. ಇನ್ನು ಶ್ರೀಲಂಕಾದ ಪ್ರವಾಸದಲ್ಲಿದ್ದ ಕಸ್ತೂರಿ ರಂಗನ್‌ ಅವರಿಗೆ ಹೃದಯಾಘಾತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಶ್ರೀಲಂಕಾದ ಕೊಲಂಬೋದಿಂದ ಏರ್‌ಲಿಫ್ಟ್‌ ಮಾಡಿ ಸೀದಾ ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ನಂತರ ಜೀರೋ ಟ್ರಾಫಿಕ್‌ ಮೂಲಕ ಬೊಮ್ಮಸಂದ್ರದ ನಾರಾಯಣ ಹೆಲ್ತ್‌ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ರಾಹುಲ್‌ ಗಾಂಧಿಯಿಂದ ಮತ್ತೊಂದು ಭಾರತ್‌ ಜೋಡೋ ಯಾತ್ರೆ: ಈಸ್ಟ್‌ ಟು ವೆಸ್ಟ್‌ ಶೀಘ್ರ ಆರಂಭ

ಎಮರ್ಜೆನ್ಸಿ ಕೇರ್‌ ಯೂನಿಟ್‌ನಲ್ಲಿ ಚಿಕಿತ್ಸೆ: ಶ್ರೀಲಂಕಾದ ಕೊಲಂಬೋದಲ್ಲಿದ್ದ ಕಸ್ತೂರಿ ರಂಗನ್​ ಅವರನ್ನು ಸ್ಥಳೀಯವಾಗಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಗಿದೆ. ನಂತರ, ಇಂಟೆನ್ಸಿವ್‌ಕೇರ್‌ ಸೌಲಭ್ಯವಿರುವ ವಿಮಾನದಲ್ಲಿ ಬೆಂಗಳೂರಿಗೆ ರವಾನೆ ಮಾಡಾಗಿದೆ. ತುರ್ತು ಕಾರ್ಯದ ನಿಮಿತ್ತ ಕಸ್ತೂರಿ ರಂಗನ್‌ ಅವರನ್ನು ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಏರ್‌ಲಿಫ್ಟ್‌ ಮಾಡಲಾಗಿದೆ. ಇನ್ನು ಇಲ್ಲಿಂದ ಆಂಬುಲೆನ್ಸ್‌ ಮೂಲಕ ಜೀರೋ ಟ್ರಾಫಿಕ್‌ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಕರೆದು ತರುವಾಗ ಆರೋಗ್ಯ ಸ್ಥಿತಿ ಸಹಜವಾಗಿದ್ದು, ಎಲ್ಲರೊಂದಿಗೆ ಮಾತನಾಡಿದ್ದಾರೆ. ತೀವ್ರ ಪ್ರಮಾಣದ ಹೃದಯಾಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಎಮರ್ಜೆನ್ಸಿ ಕೇರ್ ಯೂನಿಟ್‌ಗೆ ರವಾನೆ ಮಾಡಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಮೆರಿಕಕ್ಕೆ ಭಾರತದ ‘ಮೆಟ್ರೋ’ ಶಾಕ್: ವಿಶ್ವದಲ್ಲೇ ನಂಬರ್ 2 ಸ್ಥಾನಕ್ಕೇರಲಿದೆಯಾ ಭಾರತದ ಮೆಟ್ರೋ ನೆಟ್‌ವರ್ಕ್?
ಪಾಕ್‌ಗೆ ಶಾಕ್‌: ಸಿಂಧು ನದಿಗೆ ಭಾರತ ಡ್ಯಾಂ, ನದಿ ಒಪ್ಪಂದ ಸ್ಥಗಿತ ಬಳಿಕ ಮೊದಲ ಅಣೆಕಟ್ಟು