ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಚಿರತೆ ದಾಳಿ: ಬಾವಿಗೆ ಬಿದ್ದು ರೈತ ಚಿರತೆ ಇಬ್ಬರೂ ಸಾವು

Published : Jan 05, 2026, 12:47 PM IST
Leopard Attacks Farmer In Maharashtra

ಸಾರಾಂಶ

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಚಿರತೆಯೊಂದು ರೈತನ ಮೇಲೆ ದಾಳಿ ಮಾಡಿದೆ. ಹೋರಾಟದ ವೇಳೆ ಇಬ್ಬರೂ ಬಾವಿಗೆ ಬಿದ್ದು, ರೈತ ಸಾವನ್ನಪ್ಪಿದ್ದಾನೆ. ಇದರಿಂದ ಕೋಪಗೊಂಡ ಗ್ರಾಮಸ್ಥರು ಚಿರತೆಯ ರಕ್ಷಣೆಗೆ ಅಡ್ಡಿಪಡಿಸಿದ್ದರಿಂದ, ಚಿರತೆಯೂ ಪ್ರಾಣ ಬಿಟ್ಟಿದೆ.

ನಾಸಿಕ್: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಚಿರತೆ ದಾಳಿ ಮಾಡಿದ್ದು, ಚಿರತೆಯಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹೋರಾಟದಲ್ಲಿ ಚಿರತೆ ಹಾಗೂ ರೈತ ಇಬ್ಬರೂ ಬಾವಿಗೆ ಬಿದ್ದು ಸಾವನ್ನಪ್ಪಿದಂತಹ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆ ಸವ್ತಾ ಮಲಿ ಗ್ರಾಮದಲ್ಲಿ ನಡೆದಿದೆ.

ಸವ್ತಾ ಮಲಿ ಗ್ರಾಮದ ನಿವಾಸಿ ಗೋರಖ್ ಜಾಧವ್ ಸಾವನ್ನಪ್ಪಿದವರು. ಜಾಧವ್ ಅವರು ಮಧ್ಯಾಹ್ನ ತಮ್ಮ ಗೋಧಿ ಬೆಳೆಗೆ ನೀರು ಹಾಕಿ ಹೊಲದಲ್ಲಿ ಕುಳಿತು ಮಧ್ಯಾಹ್ನದ ಊಟ ಸೇವಿಸುತ್ತಿದ್ದ ವೇಳೆ ಚಿರತೆ ಅವರ ಮೇಲೆ ದಾಳಿ ಮಾಡಿದೆ. ಈ ವೇಳೇ ಜಾಧವ್ ಅವರು ಚಿರತೆಯಿಂದ ರಕ್ಷಿಸಿಕೊಳ್ಳಲು ಹೊಡೆದಾಟ ಮಾಡಿದ್ದು, ಈ ಹೋರಾಟದ ಸಮಯದಲ್ಲಿ ಅಲ್ಲೇ ಇದ್ದ ಬಾವಿಗೆ ಚಿರತೆ ಹಾಗೂ ಗೋರಖ್ ಜಾಧವ್ ಅವರು ಬಿದ್ದಿದ್ದಾರೆ. ಈ ವಿಚಾರ ತಿಳಿದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಬಂದು ವ್ಯಕ್ತಿ ಹಾಗೂ ಚಿರತೆಯ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಆದರೆ ಜಾಧವ್ ಅವರ ಸಾವಿನ ಹಿನ್ನೆಲೆಯಲ್ಲಿ ಜನರು ಉದ್ರಿಕ್ತರಾಗಿದ್ದು, ಚಿರತೆಯ ರಕ್ಷಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಅಲ್ಲಿದ್ದ ಜನರ ಮನವೊಲಿಸುವುದಕ್ಕೆ ಯತ್ನಿಸಿದ್ದಾರೆ. ಹೀಗೆ ಜನರನ್ನು ಮಲವೊಲಿಸುವುದರಲ್ಲೇ ಪೊಲೀಸರಿಗೆ ಹಾಗೂ ಅರಣ್ಯ ಇಲಾಖೆಯವರು ಮೂರು ಗಂಟೆಗೂ ಹೆಚ್ಚು ಕಾಲ ವ್ಯಯಿಸಿದ್ದಾರೆ. ಅಷ್ಟರಲ್ಲಿ ಚಿರತೆಯೂ ಕೂಡ ಬಾವಿಗೆ ಬೀಳುವ ವೇಳೆ ಆದ ಗಾಯಗಳಿಂದ ಸಾವನ್ನಪ್ಪಿದೆ.

ಇದನ್ನೂ ಓದಿ: ಮದುವೆ ಮನೆಯಲ್ಲೇ ಎಎಪಿ ನಾಯಕನ ಭೀಕರ ಹತ್ಯೆ: ಅತಿಥಿಗಳ ಮುಂದೆಯೇ ಗುಂಡಿಕ್ಕಿದ ದುಷ್ಕರ್ಮಿಗಳು

ಕೋಪಗೊಂಡಿದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಗೆ ಬಾವಿಯೊಳಗೆ ಪಂಜರವನ್ನು ಇಳಿಸಿ ಚಿರತೆಯನ್ನು ರಕ್ಷಿಸುವುದಕ್ಕೆ ಬಿಡಲಿಲ್ಲ. ಇದರಿಂದಾಗಿ ಚಿರತೆಯೂ ಕೂಡ ನೀರಲ್ಲಿ ಮುಳುಗಿ ಸಾವನ್ನಪ್ಪಿದೆ. ಇತ್ತ ಗೋರಖ್ ಜಾಧವ್ ಅವರ ಶವವನ್ನು ಮೇಲೆತ್ತಿ ಸಿನ್ನಾರ್‌ನ ಗ್ರಾಮೀಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯ್ತು. ಇತ್ತ ಚಿರತೆ ಸಾವಿಗೀಡಾದ ನಂತರವೇ ಅದನ್ನು ಮೇಲೆತ್ತಿ ಅದರ ಶವವನ್ನು ಎನ್‌ಟಿಸಿಎ ಮಾನದಂಡಗಳನುಸಾರ ದಪನ ಮಾಡುವುದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆಗೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಹೊಸವರ್ಷದಂದು ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ: ಬಾಯ್‌ಫ್ರೆಂಡ್ ಭಾರತಕ್ಕೆ ಪರಾರಿ

ಒಟ್ಟಿನಲ್ಲಿ ಜಾದವ್ ಅವರ ಸಾವಿನಿಂದ ಅರಣ್ಯ ಇಲಾಖೆ ಮೇಲೆ ಸಿಟ್ಟುಗೊಂಡಿದ್ದ ಜನರಿಂದಾಗಿ ಬದುಕುಳಿಯುತ್ತಿದ್ದ ಚಿರತೆಯೊಂದು ಪ್ರಾಣ ಬಿಡುವಂತಾಗಿದೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೂಪಾ ಅಯ್ಯರ್ 'ಆಜಾದ್ ಭಾರತ್' ಹೇಗಿದೆ? ಯಾಕೆ ಈ ಸಿನಿಮಾ ನೋಡಬೇಕು? ಇಲ್ಲಿದೆ ಮುಖ್ಯ ಕಾರಣ..
ಮದುವೆ ಮನೆಯಲ್ಲೇ ಎಎಪಿ ನಾಯಕನ ಭೀಕರ ಹತ್ಯೆ: ಅತಿಥಿಗಳ ಮುಂದೆಯೇ ಗುಂಡಿಕ್ಕಿದ ದುಷ್ಕರ್ಮಿಗಳು