ಪ್ರತಿಭಟನೆಗೆ ತೆರಳುತ್ತಿದ್ದ ರೈತ ನಾಯಕ ಕುರುಬೂರು ಶಾಂತಕುಮಾರ್ ಕಾರು ಅಪಘಾತ

Published : Feb 14, 2025, 07:53 PM ISTUpdated : Feb 14, 2025, 08:00 PM IST
ಪ್ರತಿಭಟನೆಗೆ ತೆರಳುತ್ತಿದ್ದ ರೈತ ನಾಯಕ ಕುರುಬೂರು ಶಾಂತಕುಮಾರ್ ಕಾರು ಅಪಘಾತ

ಸಾರಾಂಶ

ಕರ್ನಾಟಕ ರೈತ ಮುಖಂಡ ಕುರುಬೂರು ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಪಂಜಾಬ್‌ನಲ್ಲಿ ರೈತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಗಾಯಗೊಂಡಿರುವ ಕುರುಬೂರು ಶಾಂತಕುಮಾರ್ ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ. 

ಪಟಿಯಾಲ(ಫೆ.14) ಕರ್ನಾಟಕದ ರೈತ ಮುಖಂಡನಾಗಿ ಹಲವು ರೈತ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ನಾಯಕ ಕುರುಬೂರು ಶಾಂತಕುಮಾರ್ ಸಂಚರಿಸುತ್ತಿದ್ದ ಕಾರು ಅಪಘಾಕ್ಕೀಡಾಗಿದೆ. ಪಂಜಾಬ್‌ನಲ್ಲಿ ಆಯೋಜಿಸಿದ್ದ ರೈತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಹಲವು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಇದರ ಪರಿಣಾಮ ಕುರುಬೂರು ಶಾಂತಕುಮಾರ್ ಗಾಯಗೊಂಡಿದ್ದಾರೆ. ತಕ್ಷಣವೇ ಕುರುಬೂರು ಶಾಂತಕುಮಾರ್ ಅವರನ್ನು ಪಂಜಾಬ್‌ನ ಪಟಿಯಾಲದ ರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕ ರಾಜ್ಯ ಸಂಯುಕ್ತ ಕಿಸಾನ್ ಮೋರ್ಚಾದ ಸಂಚಾಲಕ ಕುರುಬೂರು ಶಾಂತಕುಮಾರ್ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ(MSP) ಜಾರಿ ಸಂಬಂಧ ರೈತ ಪ್ರತಿಭಟನೆಯಲ್ಲಿ ಭಾಗವಹಿಸಲು ಪಂಜಾಬ್‌ಗೆ ತೆರಳಿದ್ದರು. ದೆಹಲಿಯಿಂದ ಪಂಜಾಬ್ ಕಡೆ ಪ್ರಯಾಣಿಸುವಾಗ ಈ ಘಟನೆ ನಡೆದಿದೆ. ಹಲವು ಕಾರುಗಳ ನಡುವೆ ಅಪಘಾತವಾಗಿರುವ ಕಾರಣ ಶಾಂತಕಮಾರ್ ಅವರ ಎಡಗೈ, ಎಡ ಕಾಲಿಗೆ ಗಾಯವಾಗಿದೆ. ಜೊತೆಗೆ ಸ್ಪೈನಲ್ ಕಾರ್ಡ್ ಕೂಡ ಗಾಯಗೊಂಡಿದೆ.  

ದುಬೈ ಬಳಿಕ ಪೋರ್ಚುಗಲ್ ರೇಸ್‌ನಲ್ಲಿ ಅಜಿತ್ ಕಾರು ಅಪಘಾತ, ಆತಂಕಗೊಂಡ ಫ್ಯಾನ್ಸ್

ರಾಜ್ಯದಿಂದ ದೆಹಲಿಗೆ ತೆರಳಿದ್ದ ಶಾಂತಕುಮಾರ್, ಅಲ್ಲಿಂದ ಪಂಜಾಬ್ ಕಡೆ ಪ್ರಯಾಣಿಸುತ್ತಿದ್ದಾಗ ಅಪಘಾತ ನಡೆದಿದೆ. ಎಸ್ಕಾರ್ಟ್ ವಾಹನ ಜೊತೆ ತೆರಳುತ್ತಿದ್ದ ವೇಳೆ ಮುಂದಿನ ವಾಹನ ಅಪಘಾತಕ್ಕೀಡಾಗಿದೆ. ಹೀಗಾಗಿ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾನೆ. ಇದರ ಪರಿಣಾಣ ಹಿಂದಿನಿಂದ ಬರುತ್ತಿದ್ದ 5ಕ್ಕೂ ಹೆಚ್ಚು ಕಾರುಗಳು ಏಕಕಾಲಕ್ಕೆ ಸರಣಿ ಅಪಘಾತಕ್ಕೀಡಾಗಿದೆ. ಅಪಘಾತದ ಬೆನ್ನಲ್ಲೇ ಇತರ ರೈತ ನಾಯಕರು, ಸಿಬ್ಬಂದಿಗಳು ಗಾಯಗೊಂಡವನ್ನು ಆಸ್ಪತ್ರೆ ದಾಖಲಿಸಿದ್ದಾರೆ. ಈ ಪೈಕಿ ಕುರುಬೂರು ಶಾಂತಕುಮಾರ್ ಕೂಡ ಗಾಯಗೊಂಡಿದ್ದಾರೆ. ಸದ್ಯ ರಾಜೇಂದ್ರ ಆಸ್ಪತ್ರೆಯಲ್ಲಿ ಕುರುಬೂರು ಶಾಂತಕುಮಾರ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್