
ನವದೆಹಲಿ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಖಾತರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು 200ಕ್ಕೂ ಹೆಚ್ಚು ರೈತ ಸಂಘಟನೆಗಳು ಫೆ.13ರಂದು ಅಂದರೆ ನಾಳೆ ದಿಲ್ಲಿ ಚಲೋಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಕರೆ ನೀಡಿರುವ ಈ ಪ್ರತಿಭಟನೆಗೆ 200 ರೈತ ಸಂಘಟನೆಗಳು ಬೆಂಬಲ ನೀಡಿದ್ದು, ಕನಿಷ್ಠ 20 ಸಾವಿರ ರೈತರು ದೆಹಲಿ ಪ್ರವೇಶಿಸುವ ಯತ್ನ ಮಾಡಬಹುದು ಎಂಬ ಗುಪ್ತಚರ ಇಲಾಖೆ ಅಂದಾಜಿಸಿದೆ. ರೈತರು ಅಂಬಾಲ- ಶಂಭು, ಕನೌರಿ- ಜಿಂದ್ ಮತ್ತು ದಬಾವಲಿ ಗಡಿ ಮೂಲಕ ರಾಜಧಾನಿ ಪ್ರವೇಶಕ್ಕೆ ಯೋಜಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯ ಗಡಿಯಲ್ಲಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಘೋಷಿಸಲಾಗಿದೆ.
ದಿಲ್ಲಿ ಹೆಬ್ಬಾಗಿಲು ಬಂದ್:
ಈ ಎರಡೂ ಗಡಿಗಳಲ್ಲಿ ಕ್ರೇನ್ ಮತ್ತು ಕಂಟೇನರ್ಗಳನ್ನು ತಂದಿಡಲಾಗಿದ್ದು, ರೈತರು ದೆಹಲಿ ಪ್ರವೇಶ ಮಾಡಲು ಯತ್ನಿಸಿದರೆ ಹೆದ್ದಾರಿ ಬಂದ್ ಮಾಡಲು ದೆಹಲಿ ಪೊಲೀಸರು ಯೋಜಿಸಿದ್ದಾರೆ. ಅಲ್ಲದೆ ಯಾವುದೇ ಅನಾಹುತಕಾರಿ ಘಟನೆ ತಡೆಯಲು ಗಡಿ ಮತ್ತು ದೆಹಲಯ ಆಯಕಟ್ಟಿನ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಜೊತೆಗೆ ದೆಹಲಿಯ ಸೀಲಂಪುರ ಜಿಲ್ಲೆ ಮತ್ತು ಹರ್ಯಾಣದ ಪಂಚಕುಲ ಜಿಲ್ಲೆಗಳಲ್ಲಿ ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಅಲ್ಲದೆ, ಅನಿವಾರ್ಯ ಕಾರಣಗಳಿಲ್ಲದ ಹೊರತೂ ಮುಂದಿನ ಒಂದೆರಡು ದಿನ ಪಂಜಾಬ್ಗೆ ತೆರಳಬೇಡಿ ಎಂದು ಹರ್ಯಾಣ ಪೊಲೀಸರು ನಾಗರಿಕರಿಗೆ ಸಲಹೆ ನೀಡಿದ್ದಾರೆ. ಅಲ್ಲದೆ ಭದ್ರತಾ ಕ್ರಮಗಳ ಕಾರಣ ಪಂಜಾಬ್ಗೆ ತೆರಳುವ ಮಾರ್ಗದಲ್ಲಿ ಸಂಚಾರದಲ್ಲಿ ಅಡಚಣೆ ಆಗಬಹುದು ಎಂದು ಎಚ್ಚರಿಸಿದ್ದಾರೆ.
ಜರ್ಮನ್ ಸರ್ಕಾರದ ಮೇಲೆ ಮುಗಿಬಿದ್ದ ರೈತರು, ನಗರದ ರಸ್ತೆಗಳಲ್ಲಿ ಲಕ್ಷಾಂತರ ಟ್ರ್ಯಾಕ್ಟರ್ ನಿಲ್ಲಿಸಿ ಪ್ರತಿಭಟನೆ!
ಈ ನಡುವೆ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿರುವ ರೈರ ನಾಯಕ ಜಗಜಿತ್ ಸಿಂಗ್ ದಲ್ಲೇವಾಲಾ, ಒಂದೆಡೆ ಸರ್ಕಾರ ನಮಗೆ ಮಾತುಕತೆಗೆ ಆಹ್ವಾನ ನೀಡಿದ್ದರೆ, ಮತ್ತೊಂದೆಡೆ ಹರ್ಯಾಣದಲ್ಲಿ ನಮ್ಮನ್ನು ಹೆದರಿಸುವ ಯತ್ನ ಮಾಡುತ್ತಿದೆ. ಗಡಿಗಳನ್ನು ಮುಚ್ಚಲಾಗುತ್ತಿದೆ, ಸೆಕ್ಷನ್ 144 ಜಾರಿ ಮಾಡಲಾಗುತ್ತಿದೆ, ಅಂತರ್ಜಾಲ ಸೇವೆ ಸ್ಥಗಿತಗೊಳಿಸಲಾಗುತ್ತಿದೆ. ಇಂಥ ಯತ್ನಗಳನ್ನು ಮಾಡಿದರೆ ಉಭಯ ಬಣಗಳ ನಡುವೆ ರಚನಾತ್ಮಕ ಮತ್ತು ಫಲಪ್ರದವಾದ ಮಾತುಕತೆ ಸಾಧ್ಯವೇ? ಈ ವಿಷಯದ ಬಗ್ಗೆ ಸರ್ಕಾರ ಮೊದಲು ಗಮನ ಹರಿಸಬೇಕು’ ಎಂದು ಹೇಳಿದ್ದಾರೆ.'
ಈ ದೇಶದ ಪ್ರಧಾನಿಯವರಿಗೆ ಸ್ಟೇಟ್ಸ್ಮನ್ ಶಿಪ್ ಇದ್ದಿದ್ರೆ ಇಂತಹ ಘಟನೆ ನಡೆಯುತ್ತಿರಲಿಲ್ಲ'
ಮತ್ತೊಂದೆಡೆ, ನಮ್ಮ ಬೇಡಿಕೆ ಕುರಿತು ಫೆ.12ರಂದು ಸಂಜೆ 5 ಗಂಟೆಗೆ ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಷ್ ಗೋಯಲ್ ಮತ್ತು ನಿತ್ಯಾನಂದ್ ರೈ ಜೊತೆ ಸಭೆ ನಿಗದಿಯಾಗಿದೆ ಎಂದು ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ್ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸರ್ವಣ್ ಸಿಂಗ್ ಪಂಧೇರ್ ಮಾಹಿತಿ ನೀಡಿದ್ದಾರೆ. ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಉಭಯ ರಾಜ್ಯಗಳ ರೈತರು ಕಳೆದ ಡಿಸೆಂಬರ್ನಿಂದಲೂ ರಾಜ್ಯದೊಳಗೆ ಪ್ರತಿಭಟನೆ ನಡೆಸುತ್ತಲೇ ಬಂದಿದ್ದಾರೆ.
2020-21ರಲ್ಲಿ ರೈತರು ದೆಹಲಿಗೆ ಆಗಮಿಸಿ ನಡೆಸಿದ ಪ್ರತಿಭಟನೆ ಹಲವು ತಿಂಗಳು ಕಾಲ ವಿಸ್ತರಿಸಿ ಕೊನೆಗೆ ಭಾರೀ ಹಿಂಸಾಚಾರಕ್ಕೂ ಕಾರಣವಾಗಿ ಹಲವರು ಸಾವನ್ನಪ್ಪಿದ್ದರು.
'ಕೆಂಪುಕೋಟೆಯಲ್ಲಿ ಸಿಖ್ ಧ್ವಜ, ಪ್ರತಿಭಟನೆ ಹಿಂದೆ ದೇಶ ವಿರೋಧಿಗಳ ಷಡ್ಯಂತ್ರವಿದೆ'
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ