ಬ್ಯಾರಿಕೇಡ್‌ ಕಿತ್ತೆಸೆದು ಕಡೆಗೂ ದೆಹಲಿ ಪ್ರವೇಶಿಸಿದ ರೈತರು!

Published : Nov 28, 2020, 08:10 AM ISTUpdated : Nov 28, 2020, 08:26 AM IST
ಬ್ಯಾರಿಕೇಡ್‌ ಕಿತ್ತೆಸೆದು ಕಡೆಗೂ ದೆಹಲಿ ಪ್ರವೇಶಿಸಿದ ರೈತರು!

ಸಾರಾಂಶ

ಬ್ಯಾರಿಕೇಡ್‌ ಕಿತ್ತೆಸೆದು ಕಡೆಗೂ ದೆಹಲಿ ಪ್ರವೇಶಿಸಿದ ರೈತರು| ಶಾಂತಿಯುತ ಪ್ರತಿಭಟನೆಗೆ ಅವಕಾಶ

ನವದೆಹಲಿ(ನ.28): ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಚಲೋ ರಾರ‍ಯಲಿ ಕೈಗೊಂಡಿರುವ ಪಂಜಾಬ್‌ ಹಾಗೂ ಹರ್ಯಾಣ ರೈತರು ಶುಕ್ರವಾರ ದೆಹಲಿಯನ್ನು ಪ್ರವೇಶಿಸಿದ್ದಾರೆ. ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುವ ವಿವಿಧ ರಸ್ತೆಗಳಲ್ಲಿ ಜಮಾವಣೆ ಆದ ಸಾವಿರಾರು ರೈತರಿಗೆ ಉತ್ತರ ದೆಹಲಿಯ ಬುರಾರಿ ಪ್ರದೇಶದಲ್ಲಿರುವ ನಿರಂಕಾರಿ ಮೈದಾನದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗಿದೆ. ಹಲವು ಅಡೆತಡೆಗಳು, ಪೊಲೀಸರ ಜೊತೆಗಿನ ಸಂಘರ್ಷದ ಬಳಿಕ ರೈತರು ಮಧ್ಯಾಹ್ನ 3 ಗಂಟೆಯ ಸುಮಾರಿನಲ್ಲಿ ಟಿಕ್ರಿ ಗಡಿಯ ಮೂಲಕ ದೆಹಲಿಯನ್ನು ಪ್ರವೇಶಿಸಿದರು. ಆದರೆ, ಸಿಂಘು ಗಡಿಯ ಮೂಲಕ ದೆಹಲಿಗೆ ಆಗಮಿಸಲು ರೈತರಿಗೆ ಅನುಮತಿ ನೀಡಲಾಗಿಲ್ಲ.

ಇದಕ್ಕೂ ಮುನ್ನ ಮುಂಜಾನೆ ಟಿಕ್ರಿ ಗಡಿಯಲ್ಲಿ ರೈತರನ್ನು ತಡೆಯಲು ಭಾರೀ ಪೊಲೀಸ್‌ ಬಂದೋಬಸ್‌್ತ ನಿಯೋಜನೆ ಮಾಡಲಾಗಿತ್ತು. ರೈತರು ರಸ್ತೆಗೆ ಅಡ್ಡಲಾಗಿ ಹಾಕಿದ್ದ ಬ್ಯಾರಿಕೇಡ್‌ಗಳನ್ನು ಕಿತ್ತೆಸೆದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಹೀಗಾಗಿ ರೈತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಹಾಗೂ ಜಲಫಿರಂಗಿ ಪ್ರಯೋಗಿಸಿದರು. ಟ್ರ್ಯಾಕ್ಟರ್‌ಗಳು, ಟ್ರಕ್‌ಗಳನ್ನು ಅಡ್ಡ ಇಟ್ಟು ರೈತರ ವಾಹನಗಳು ಬರದಂತೆ ತಡೆಯಲಾಯಿತು. ರೈತ ಮುಖಂಡರ ಜೊತೆ ಪೊಲೀಸರು ಸಂಧಾನ ನಡೆಸಿದ ಬಳಿಕ ರೈತರಿಗೆ ದೆಹಲಿಯನ್ನು ಪ್ರವೇಶಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಯಿತು. ಪ್ರತಿಭಟನೆಗೆ ಅನುಮತಿ ನೀಡುತ್ತಿದ್ದಂತೆ ಭಾರೀ ಸಂಖ್ಯೆಯ ವಾಹನಗಳು ಹಾಗೂ ಕಾಲ್ನಡಿಗೆಯಲ್ಲಿ ರೈತರು ಮೈದಾನದಲ್ಲಿ ಜಮಾವಣೆ ಆಗುತ್ತಿದ್ದಾರೆ.

ಇದೇ ವೇಳೆ ದೆಹಲಿಗೆ ಆಗಮಿಸಿ ಪ್ರತಿಭಟನೆ ನಡೆಸುತ್ತಿರುಬ ರೈತರನ್ನು ಬಂಧಿಸಿ ಇಡಲು ಕ್ರೀಡಾಗಂಣಗಳನ್ನು ತಾತ್ಕಾಲಿಕ ಜೈಲುಗಳಾಗಿ ಬಳಕೆ ಮಾಡುವಂತೆ ಪೊಲೀಸರು ಮಾಡಿಕೊಂಡಿರುವ ಮನವಿಯನ್ನು ದೆಹಲಿಯ ಆಮ್‌ ಆದ್ಮಿ ಸರ್ಕಾರ ನಿರಾಕರಿಸಿದೆ. ಭಾರತದ ಎಲ್ಲಾ ನಾಗರಿಕರಿಗೂ ಸಂವಿಧಾನಾತ್ಮಕವಾಗಿ ಪ್ರತಿಭಟಿಸುವ ಹಕ್ಕು ಇದೆ ಎಂದು ದೆಹಲಿ ಗೃಹ ಸಚಿವ ಸತ್ಯೇಂದ್ರ ಜೈನ್‌ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?