ಶಂಭು ಗಡಿಯಲ್ಲಿ ಅಶ್ರುವಾಯು ಸಿಡಿಸಿ ರೈತರ ಮೇಲೆ ಹೂಮಳೆ ಸುರಿಸಿದ  ಪೊಲೀಸರು

Published : Dec 09, 2024, 07:08 AM IST
ಶಂಭು ಗಡಿಯಲ್ಲಿ ಅಶ್ರುವಾಯು ಸಿಡಿಸಿ ರೈತರ ಮೇಲೆ ಹೂಮಳೆ ಸುರಿಸಿದ  ಪೊಲೀಸರು

ಸಾರಾಂಶ

ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವುದಕ್ಕೆ ಆಗ್ರಹಿಸಿ ದೆಹಲಿ ಚಲೋ ಪಾದಯಾತ್ರೆ ನಡೆಸುತ್ತಿದ್ದ ರೈತರ ಮೇಲೆ ಹರ್ಯಾಣ ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿ ಪ್ರಯೋಗಿಸಿದ್ದಾರೆ.

ಚಂಡೀಗಢ: ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ, ಸಾಲ ಮನ್ನಾ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಭಾನುವಾರ ಮತ್ತೆ ಆರಂಭವಾದ 101 ರೈತರ ದೆಹಲಿ ಚಲೋ ಪಾದಯಾತ್ರೆಯನ್ನು ಹರ್ಯಾಣದ ಶಂಭು ಗಡಿಯಲ್ಲೇ ಪೊಲೀಸರು ತಡೆದಿದ್ದಾರೆ.

ಈ ಸಂದರ್ಭದಲ್ಲಿ ಎಚ್ಚರಿಕೆಯ ಹೊರತಾಗಿಯೂ ಬ್ಯಾರಿಕೇಡ್‌ ದಾಟಿ ಶಂಭುಗಡಿ ದಾಟಲು ಮುಂದಾದವರ ಮೇಲೆ ಹರ್ಯಾಣ ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿ ಪ್ರಯೋಗಿಸಿದ್ದು, 10 ರೈತರು ಗಾಯಗೊಂಡಿದ್ದಾರೆ. ಹೀಗಾಗಿ ಇದೀಗ ಎರಡನೇ ಬಾರಿ ಒಂದು ದಿನದ ಮಟ್ಟಿಗೆ ಪಾದಯಾತ್ರೆಯನ್ನು ರೈತರು ರದ್ದು ಮಾಡಿದ್ದಾರೆ. ಸಭೆ ಬಳಿಕ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸುವುದಾಗಿ ಪಂಜಾಬ್ ರೈತ ಮುಖಂಡ ಸರ್ವಾನ್‌ ಸಿಂಗ್‌ ಹೇಳಿದ್ದಾರೆ.

ಶುಕ್ರವಾರವೇ ಈ ರೈತರನ್ನು ತಡೆ ಹಿಡಿಯಲಾಗಿತ್ತು. ಈ ವೇಳೆ ಅವರು, ಸರ್ಕಾರವು ಮಾತುಕತೆ ನಡೆಸಲು ಮುಂದಾದರೆ ಚಲೋ ನಿಲ್ಲಿಸುವುದಾಗಿ ಹೇಳಿದ್ದರು. ಆದರೆ ಸರ್ಕಾರ ಮಾತುಕತೆಗೆ ಮುಂದಾಗದ ಕಾರಣ ಭಾನುವಾರ ಮಧ್ಯಾಹ್ನ 12 ಗಂಟೆಗೆ ಮತ್ತೆ ಪಾದಯಾತ್ರೆ ಆರಂಭಿಸಲು ಮುಂದಾದರು. ಆಗ ರೈತರನ್ನು ಶಂಭು ಗಡಿಯಲ್ಲೇ ತಡೆಹಿಡಿಯಲಾಯಿತು. ‘ದೆಹಲಿ ಆಡಳಿತದ ಅನುಮತಿ ತೋರಿಸದೆ ಯಾರನ್ನೂ ಗಡಿದಾಟಲು ಬಿಡಲ್ಲ ಮತ್ತು ನಮ್ಮ ಬಳಿ ಇರುವ ಪ್ರತಿಭಟನಾಕಾರರ ಪಟ್ಟಿಗೂ ಇಲ್ಲಿ ಸೇರಿರುವವರಿಗೂ ಸಾಕಷ್ಟು ವ್ಯತ್ಯಾಸಗಳಿವೆ’ ಎಂದರು. ಆಗ ಘರ್ಷಣೆ ಸಂಭವಿಸಿದೆ.

ಇದನ್ನೂ ಓದಿ: ಭಾರತದ ಸಾರಿಗೆ ವಲಯದ ಹೊಸ ಯುಗ, ವಿಶ್ವದ ಮೊದಲ ಹೈಪರ್‌ಲೂಪ್ ಟ್ರ್ಯಾಕ್ ಚೆನ್ನೈನಲ್ಲಿ ಉದ್ಘಾಟನೆ!

ಹೂಮಳೆ ಸುರಿಸಿ ಪೊಲೀಸರ ಗಾಂಧಿಗಿರಿ
ಈ ನಡುವೆ ಅಶ್ರುವಾಯು ಪ್ರಯೋಗದ ಬಳಿಕ, ರೈತರ ಮನವೊಲಿಸಲು ಪೊಲೀಸರು ಹೂಮಳೆ ಸುರಿಸಿ ಗಾಂಧಿಗಿರಿ ಯತ್ನವನ್ನೂ ನಡೆಸಿದರು.

ಸಿದ್ಧವಾಗಿ ಬಂದಿದ್ದ ರೈತರು
ಶನಿವಾರದ ಪ್ರತಿಭಟನೆ ವೇಳೆ ಪೊಲೀಸರು ಸಿಡಿಸಿದ ಅಶ್ರುವಾಯುವಿನಿಂದ ಹಲವು ರೈತರು ಗಾಯಗೊಂಡಿದ್ದ ಹಿನ್ನೆಲೆಯಲ್ಲಿ 2ನೇ ದಿನ ಪೊಲೀಸರ ಅಶ್ರುವಾಯು ಪ್ರಯೋಗ ಎದುರಿಸಲು ಗಾಗಲ್ಸ್‌(ಕನ್ನಡಕ), ಮಾಸ್ಕ್‌ ಸೇರಿ ಎಲ್ಲಾ ರೀತಿಯಲ್ಲೂ ಸನ್ನದ್ಧವಾಗಿದ್ದರು. ಪ್ರತಿಭಟನಾನಿರತರು ಬ್ಯಾರಿಕೇಡ್‌ ಸಮೀಪ ಮುನ್ನುಗ್ಗಿದಾಗ ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿ ಪ್ರಯೋಗಿಸಿ ಪ್ರತಿಭಟನಾಕಾರರನ್ನು ಚದುರಿಸಿದರು. ಈ ವೇಳೆ ಮತ್ತೆ ಹಲವರು ಗಾಯಗೊಂಡರು.

ಇದನ್ನೂ ಓದಿ:ವಕ್ಫ್ ಆಸ್ತಿ ಮಾತು ಬಿಡಿ, ಈ ರೈಲು ನಿಲ್ದಾಣದ ಪಕ್ಕದ ಸ್ಥಳ ಪಾಕಿಸ್ತಾನ ಪ್ರಧಾನಿ ಆಸ್ತಿ ಎಂದ ಅಧಿಕಾರಿಗಳು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?