ಕೃಷಿ ಕಾಯ್ದೆ ವಿರೋಧಿಸಿ ರೈತರಿಂದ ಉಪವಾಸ, ಒಲೆ ಹಚ್ಚದಂತೆ ಕರೆ!

Published : Dec 21, 2020, 09:55 AM IST
ಕೃಷಿ ಕಾಯ್ದೆ ವಿರೋಧಿಸಿ ರೈತರಿಂದ ಉಪವಾಸ,  ಒಲೆ ಹಚ್ಚದಂತೆ ಕರೆ!

ಸಾರಾಂಶ

ಇಂದು ರೈತರಿಂದ ಸರದಿ ಉಪವಾಸ| 23ರಂದು ಒಲೆ ಹಚ್ಚದಂತೆ ಜನತೆಗೆ ನಾಯಕರ ಕರೆ

ನವದೆಹಲಿ(ಡಿ.21): ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಕಳೆದ ನಾಲ್ಕು ವಾರಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ಮತ್ತಷ್ಟುತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಎಲ್ಲ ಪ್ರತಿಭಟನಾ ಸ್ಥಳಗಳಲ್ಲಿ ಸೋಮವಾರ ಸರದಿ ಉಪವಾಸ ಸತ್ಯಾಗ್ರಹ ನಡೆಸಲಿರುವ ರೈತರು, ಡಿ.25ರಿಂದ 27ರವರೆಗೆ ಹರಾರ‍ಯಣದ ಹೆದ್ದಾರಿಗಳಲ್ಲಿ ಟೋಲ್‌ ಸಂಗ್ರಹಕ್ಕೆ ತಡೆಯೊಡ್ಡುವುದಾಗಿ ಘೋಷಿಸಿದ್ದಾರೆ.

ಸೋಮವಾರ 11 ಮಂದಿ ಪ್ರತಿಭಟನಾ ಸ್ಥಳದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ. ಅದು ಸರದಿಯಾಗಿ ಮುಂದುವರಿಯಲಿದೆ ಎಂದು ಸ್ವರಾಜ್‌ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್‌ ಅವರು ಸಿಂಘೂ ಗಡಿಯಲ್ಲಿ ತಿಳಿಸಿದರು.

ಇದೇ ವೇಳೆ ಮಾತನಾಡಿದ ರೈತ ನಾಯಕ ರಾಕೇಶ್‌ ಟಿಕಾಯತ್‌, ಪ್ರತಿಭಟನಾ ನಿರತ ರೈತರು ಡಿ.23ರಂದು ಕಿಸಾನ್‌ ದಿವಸ ಆಚರಿಸಲಿದ್ದಾರೆ. ಒಂದು ದಿನದ ಮಟ್ಟಿಗೆ ಅಂದು ಅಡುಗೆ ಮಾಡದಂತೆ ಜನತೆಯನ್ನು ಕೋರುತ್ತೇವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

22 ಕಾರ್ಮಿಕರ ಸಾಗಿಸುತ್ತಿದ್ದ ಟ್ರಕ್ ಭೀಕರ ಅಪಘಾತದಲ್ಲಿ 17 ಸಾವು, 4 ದಿನ ಬಳಿಕ ಘಟನೆ ಬೆಳಕಿಗೆ
ಪ್ರತಿಷ್ಠಿತ ಶಾಲೆಯ ಮೇಲೆ ಐಟಿ ರೈಡ್: ಕೋಟಿ ಕೋಟಿ ಹಣ ಪತ್ತೆ: ಹಣ ಎಣಿಸುವ ಯಂತ್ರ ತರಿಸಿದ ಅಧಿಕಾರಿಗಳು