ಇನ್ನೂ 8 ತಿಂಗಳು ದೆಹಲಿ ಗಡಿಯಲ್ಲೇ ಹೋರಾಟ: ಕೇಂದ್ರಕ್ಕೆ ಅ.2ರ ಗಡುವು!

Published : Feb 07, 2021, 09:12 AM IST
ಇನ್ನೂ 8 ತಿಂಗಳು ದೆಹಲಿ ಗಡಿಯಲ್ಲೇ ಹೋರಾಟ: ಕೇಂದ್ರಕ್ಕೆ ಅ.2ರ ಗಡುವು!

ಸಾರಾಂಶ

ಕೇಂದ್ರಕ್ಕೆ ಅ.2ರ ಗಡುವು| ಇನ್ನೂ 8 ತಿಂಗಳು ದೆಹಲಿ ಗಡಿಯಲ್ಲೇ ಹೋರಾಟ|  ಬೇಡಿಕೆ ಈಡೇರದಿದ್ರೆ ಹೊಸದಾಗಿ ಹೋರಾಟ ಶುರು| ರೈತ ನಾಯಕ ರಾಕೇಶ್‌ ಟಿಕಾಯತ್‌ ಘೋಷಣೆ

ಗಾಜಿಯಾಬಾದ್‌(ಫೇ.07): ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಲೇಬೇಕು ಎಂಬ ಹಠಕ್ಕೆ ಅಂಟಿಕೊಂಡಿರುವ ರೈತ ಸಂಘಟನೆಗಳು, ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರಕ್ಕೆ ಗಾಂಧೀ ಜಯಂತಿ ದಿನವಾದ ಅ.2ರ ಗಡುವು ನೀಡಿವೆ.

ಈ ಕುರಿತು ಶನಿವಾರ ಇಲ್ಲಿ ಹೇಳಿಕೆ ನೀಡಿರುವ ಭಾರತೀಯ ಕಿಸಾನ್‌ ಮೋರ್ಚಾ ನಾಯಕ ರಾಕೇಶ್‌ ಟಿಕಾಯತ್‌ ‘ನಮ್ಮ ಬೇಡಿಕೆ ಈಡೇರುವವರೆಗೂ ನಾವು ಹಿಂದಿರುಗುವುದಿಲ್ಲ. ನಾವು ಸರ್ಕಾರಕ್ಕೆ ಅ.2ರ ಗಡುವು ನೀಡುತ್ತಿದ್ದೇವೆ. ಅಷ್ಟರೊಳಗೆ ಬೇಡಿಕೆ ಈಡೇರದೇ ಇದ್ದಲ್ಲಿ, ಆಗ ಮತ್ತೆ ಹೋರಾಟದ ರೂಪುರೇಷೆ ನಿರ್ಧರಿಸಲಿದ್ದೇವೆ. ಯಾವುದೇ ಕಾರಣಕ್ಕೂ ಒತ್ತಡಕ್ಕೆ ಒಳಗಾಗಿ ಸರ್ಕಾರದ ಜೊತೆ ಮಾತುಕತೆ ನಡೆಸುವುದಿಲ್ಲ’ ಎಂದು ಘೋಷಿಸಿದ್ದಾರೆ

ಇದೇ ವೇಳೆ ‘ರೈತರು ಶನಿವಾರ ಕರೆಕೊಟ್ಟಿದ್ದ ‘ಚಕ್ಕಾ ಜಾಮ್‌’ ಶಾಂತಿಯುತ ಪ್ರತಿಭಟನೆಯನ್ನು ಹಾಳುಗೆಡವಲು ಕೆಲ ಕಿಡಿಗೇಡಿಗಳು ಯೋಜನೆ ರೂಪಿಸಿದ್ದ ಮಾಹಿತಿ ತಿಳಿದುಬಂದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಪ್ರತಿಭಟನೆಯನ್ನು ವಾಪಸ್‌ ಪಡೆದಿದ್ದೇವೆ’ ಎಂದು ತಿಳಿಸಿದರು. ಇದೇ ವೇಳೆ ರೈತರ ಭೂಮಿಯನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ. ಅದನ್ನು ರೈತರೇ ಕಾಪಾಡಿಕೊಳ್ಳುತ್ತಾರೆ ಎಂದು ಗುಡುಗಿದರು.

ಹೊಸ ಕೃಷಿ ಕಾಯ್ದೆ ವಿರೋಧಿಸಿ ಕಳೆದ ನವೆಂಬರ್‌ನಿಂದ ರಾಷ್ಟ್ರರಾಜಧಾನಿ ದೆಹಲಿಯ ಸಿಂಘು, ಟಿಕ್ರಿ, ಗಾಜಿಪುರ ಗಡಿಗಳಲ್ಲಿ ಸಾವಿರರು ರೈತರು ಬೀಡುಬಿಟ್ಟು ಪ್ರತಿಭಟಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಂಕೆ ಬಿಹಾರಿ ದೇಗುಲದಲ್ಲಿ ಶಾಲಿನ ಮೇಲೆ ಬಿತ್ತು ಚಿನ್ನದ ಉಂಗುರ: ಶ್ರೀಕೃಷ್ಣನ ಪ್ರತಿಮೆಯನ್ನೇ ಮದುವೆಯಾದ ಪಿಂಕಿ
'ವಂದೇ ಮಾತರಂ..' ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಮಂತ್ರ ಎಂದ ಪ್ರಧಾನಿ ಮೋದಿ