ರೈತರಿಗೆ ಪ್ರತಿಭಟಿಸುವ ಹಕ್ಕು ಇದೆ, ಇದನ್ನು ಕಸಿದುಕೊಳ್ಳಲ್ಲ: ಸುಪ್ರೀಂ ಮಹತ್ವದ ತೀರ್ಪು!

Published : Dec 17, 2020, 02:27 PM ISTUpdated : Dec 17, 2020, 02:37 PM IST
ರೈತರಿಗೆ ಪ್ರತಿಭಟಿಸುವ ಹಕ್ಕು ಇದೆ, ಇದನ್ನು ಕಸಿದುಕೊಳ್ಳಲ್ಲ: ಸುಪ್ರೀಂ ಮಹತ್ವದ ತೀರ್ಪು!

ಸಾರಾಂಶ

ದೆಹಲಿಯಲ್ಲಿ ರೈತರ ಪ್ರತಿಭಟನೆ| ರೈತ ಪ್ರತಿಭಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ| ರೈತರ ಪ್ರತಿಭಟನೆಯ ಹಕ್ಕು ಕಸಿದುಕೊಳ್ಳಲು ತಯಾರಿಲ್ಲ ಎಂದ ಸುಪ್ರೀಂ 

ನವದೆಹಲಿ(ಡಿ.17): ರೈತರ ಪ್ರತಿಭಟನೆ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ರೈತರ ಪ್ರತಿಭಟನೆಯನ್ನು ನಿಲ್ಲಿಸಲು ಹೇಳುವುದಿಲ್ಲ, ರೈತರ ಪ್ರತಿಭಟನೆಯ ಹಕ್ಕು ಕಸಿದುಕೊಳ್ಳುವುದೂ ಸರಿಯಲ್ಲ ಎಂದಿದೆ. 

ಕೃಷಿ ಕಾಯ್ದೆ ವಿರೋಧಿಸಿ ಅನ್ನದಾತನ ಪ್ರತಿಭಟನೆ, ಕಾಂಗ್ರೆಸ್ ಬೆಂಬಲದ ಹಿಂದೆ 'ಹಗರಣ'ದ ಘಾಟು!

ವಿಚಾರಣೆ ನಡೆಸುತ್ತಿದ್ದ ಚೀಫಗ್ ಜಸ್ಟೀಸ್ ಎಸ್‌. ಎ. ಬೋಬ್ಡೆ ಈ ಬಗ್ಗೆ ತೀರ್ಪು ನೀಡುತ್ತಾ 'ರೈತರು ತಮ್ಮ ಪ್ರತಿಭಟನೆಯನ್ನೂ ನಡೆಸಿ, ಜನರ ನಿತ್ಯದ ಬದುಕಿಗೆ ಯಾವುದೇ ಸಮಸ್ಯೆಯಾಗದಂತೆ ನಾವು ಎಚ್ಚರವಹಿಸಬೇಕು. ನಾವು ರೈತರ ಸ್ಥಿತಿ ಅರಿತಿದ್ದೇಬವೆ, ನಮಗೆ ಅವರ ಬಗ್ಗೆ ಸಹಾನುಭೂತಿ ಇದೆ. ಆದರೆ ಈ ಬದಲಾಯಿಸುವ ಪರಿಯನ್ನು ಬದಲಾಯಿಸಬೇಕಿದೆ, ಈ ಮೂಲಕ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ' ಎಂದಿದ್ದಾರೆ. 

ಇದೇ ವೇಳೆ ರೈತರೊಂದಿಗೆ ಮಾತುಕತೆ ನಡೆಯುವವರೆಗೂ ಕೃಷಿ ಕಾನೂನನ್ನು ತಡೆಹಿಡಿಯಲು ಸಿದ್ಧವಿದ್ದೀರಾ ಎಂದು ಕೇಂದ್ರದ ಬಳಿ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹೀಗಿರುವಾಗ ಸರ್ಕಾರದ ಬಳಿ ಈ ಬಗ್ಗೆ ನಿರ್ದೇಶನ ಪಡೆಯುವುದಾಗಿ ಅಟಾರ್ನಿ ಜನರಲ್ ತಿಳಿಸಿದ್ದಾರೆ.

ರೈತಪರ ಸರ್ಕಾರ, ಕೃಷಿ ಕಾಯ್ದೆಯೂ ರೈತ ಸ್ನೇಹಿ; ಅನ್ನದಾತರಿಗೆ ಬೇಡ ಭಯ

ಒಟ್ಟಾರೆಯಾಗಿ ರೈತರ ಪ್ರತಿಭಟನೆಯನ್ನು ಮುಂದುವರೆಸಲು ಗ್ರೀನ್ ಸಿಗ್ನಲ್ ನೀಡಿರುವ ಸರ್ಕಾರ, ರೈತರು ಪ್ರತಿಭಟನೆ ವೇಳೆ ರಸ್ತೆ ಬಂದ್ ನಡೆಸುತ್ತಿರುವ ಕ್ರಮವನ್ನು ಖಂಡಿಸಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!