
ನವದೆಹಲಿ(ಫೆ.16) ಬೆಳೆಗೆ ಬೆಂಬಲ ಬೆಲೆ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ರೈತರು ನಡೆಸುತ್ತಿರುವ ರೈತ ಪ್ರತಿಬಟನೆ ಜೋರಾಗಿದೆ. ರೈತರು ಕರೆ ನೀಡಿದಂತೆ ಗ್ರಾಮೀಣ ಭಾರತ್ ಬಂದ್ ನಡೆಸುತ್ತಿದ್ದಾರೆ. ಪಂಜಾಬ್, ಹರ್ಯಾಣ ಭಾಗದಲ್ಲಿ ಗ್ರಾಮೀಣ ಭಾರತ್ ಬಂದ್ ತೀವ್ರ ಸ್ಪರೂಪ ಪಡೆದುಕೊಂಡಿದ್ದರೆ, ದೇಶದ ಇತರ ಭಾಗದಲ್ಲಿ ನಿರೀಕ್ಷಿತ. ಯಶಸ್ಸು ಸಿಕ್ಕಿಲ್ಲ. ಆದರೆ ಕರ್ನಾಟಕಕ ಕೆಲ ರೈತರು ರೈತರ ಗ್ರಾಮೀಣ ಭಾರತ್ ಬಂದ್ಗೆ ಬೆಂಬಲ ನೀಡಿದ್ದಾರೆ.
ಇಂದು 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬಂದ್ ಆಚರಿಲಾಗುತ್ತದೆ. ಈ ವೇಳೆ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4ರವರೆಗೆ ದೇಶದ ಪ್ರಮುಖ ರಸ್ತೆಗಳಲ್ಲಿ ರೈತರು ಪ್ರತಿಭಟನೆ ನಡೆಸಲಿದ್ದಾರೆ. ಇನ್ನು ಪಂಜಾಬ್ನಲ್ಲಿ ಪ್ರತಿಭಟನೆಯ ಸಮಯದಲ್ಲಿ ಪ್ರಮುಖ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ನಾಲ್ಕು ಗಂಟೆಗಳ ಕಾಲ ಮುಚ್ಚಲು ನಿರ್ಧರಿಸಲಾಗಿದೆ. ಪಂಜಾಬ್, ಹರ್ಯಾಣ ಭಾಗದಲ್ಲಿ ಈಗಾಗಲೇ ರಸ್ತೆ ತಡೆದೆ ರೈತರು ತಯಾರಿ ನಡೆಸಿದ್ದಾರೆ. ಇನ್ನು ಕೆಲ ಸಂಘಟನೆಗಳು ಈ ಬಂದ್ಗೆ ಬೆಂಬಲ ನೀಡಿದೆ.
ಫೆ.16ಕ್ಕೆ ಗ್ರಾಮೀಣ ಭಾರತ್ ಬಂದ್ಗೆ ಕರೆ, ರೈತ ಪ್ರತಿಭಟನೆಯಿಂದ ಏನಿರುತ್ತೆ? ಏನಿರಲ್ಲ?
ಪ್ರಮುಖವಾಗಿ ರೈತರ ಕೃಷಿ ಚಟುವಟಿಕೆಗಳು ಬಂದ್ ಆಗಲಿದೆ. ರೈತ ಮಾರುಕಟ್ಟೆ, ಅಂಗಡಿ, ಬೇಳೆ ಕಾಳು ಸಾಗಾಣೆ ಸೇರಿದಂತೆ ಹಲವು ಕೃಷಿ ಸಂಬಂಧಿತ ಚಟುವಟಿಕೆಗಳು ಬಂದ್ ಆಗಲಿವೆ. ಇನ್ನು ಮಧ್ಯಾಹ್ನ 12 ಗಂಟೆಯಿಂದ ರಸ್ತೆ ತಡೆ ನಡೆಸಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತರು ಮುಂದಾಗಿದ್ದಾರೆ.
ಈ ಬಗ್ಗೆ ಮಾತನಾಡಿದ ಎಸ್ಕೆಎಮ್ ಮುಖಂಡ ಡಾ. ದರ್ಶನ್ ಪಾಲ್ ‘ಗ್ರಾಮೀಣ ಭಾರತ್ ಬಂದ್ಗೆ ಕರೆ ನೀಡುವ ಕುರಿತು ಕಳೆದ ಡಿಸೆಂಬರ್ನಲ್ಲಿ ಯೋಜಿಸಲಾಗಿತ್ತು. ಬಂದ್ ವೇಳೆ ಗ್ರಾಮಗಳ ಜನರು ತಮ್ಮೆಲ್ಲ ಕೃಷಿ ಚಟುವಟಿಕೆಗಳು ಹಾಗೂ ನರೇಗಾ ಗ್ರಾಮೀಣ ಕೆಲಸಗಳನ್ನು ಮಾಡುವುದಿಲ್ಲ. ಆದರೆ ಅಂಬುಲೆನ್ಸ್, ಸಾವು, ಮದುವೆ, ಮೆಡಿಕಲ್ ಶಾಪ್ಗಳು, ಸುದ್ದಿ ಪತ್ರಿಕೆ ವಿತರಣೆ, ಪರೀಕ್ಷೆ, ಪ್ರಯಾಣಿಕರು ಹಾಗೂ ಏರ್ಪೋರ್ಟ್ ಸೇರಿದಂತೆ ಇತರ ತುರ್ತು ಅವಶ್ಯಕಗಳಿಗೆ ಯಾವುದೇ ಅಡ್ಡಿ ಮಾಡುವುದಿಲ್ಲ’ ಎಂದಿದ್ದಾರೆ.
ಚಿಕ್ಕಬಳ್ಳಾಪುರ : ಬಂದ್ಗೆ ರೈತ, ಕನ್ನಡಪರ ಸಂಘಟನೆಗಳ ಬೆಂಬಲ
ಅಲ್ಲದೇ ‘ಬಂದ್ ದಿನದಂದು ತರಕಾರಿಗಳು ಮತ್ತು ಇತರ ಬೆಳೆಗಳ ಮಾರಾಟ, ಗ್ರಾಮೀಣ ಅಂಗಡಿಗಳು, ಧಾನ್ಯ ಮಾರುಕಟ್ಟೆ, ತರಕಾರಿ ಮಾರುಕಟ್ಟೆ, ಸರ್ಕಾರಿ ಮತ್ತು ಸರ್ಕಾರೇತರ ಕಚೇರಿಗಳು ಗ್ರಾಮೀಣ ಕೈಗಾರಿಕೆಗಳನ್ನು ಬಂದ್ ಮಾಡುವಂತೆ ಒತ್ತಾಯಿಸಲಾಗುತ್ತದೆ’ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ