ರೈತ ಪ್ರತಿಭಟನೆಯಿಂದ 50,000 ಕೋಟಿ ನಷ್ಟ!

Published : Jan 22, 2021, 08:34 AM IST
ರೈತ ಪ್ರತಿಭಟನೆಯಿಂದ 50,000 ಕೋಟಿ ನಷ್ಟ!

ಸಾರಾಂಶ

ರೈತ ಪ್ರತಿಭಟನೆಯಿಂದ 50000 ಕೋಟಿ ನಷ್ಟ| ಕೇಂದ್ರದ ಪ್ರಸ್ತಾವನೆ ಒಪ್ಪಿ ರೈತರು ಪ್ರತಿಭಟನೆ ಹಿಂಪಡೆಯಲಿ| ಒಪ್ಪದಿದ್ದರೆ ರೈತರ ಹಿಂದೆ ಕೆಲ ಶಕ್ತಿಗಳಿವೆ ಎಂದರ್ಥ: ಸಿಎಐಟಿ

ನವದೆಹಲಿ(j.22): ಕೇಂದ್ರದ ನೂತನ 3 ಕೃಷಿ ಕಾಯ್ದೆಗಳ ವಿರುದ್ಧ ಸುಮಾರು 2 ತಿಂಗಳಿನಿಂದ ದಿಲ್ಲಿ ಗಡಿಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಿಂದಾಗಿ ಸುಮಾರು 50 ಸಾವಿರ ಕೋಟಿ ರು. ನಷ್ಟವಾಗಿದೆ ಎಂದು ವಾಣಿಜ್ಯ ಸಂಸ್ಥೆ ಸಿಎಐಟಿ ಹೇಳಿದೆ.

ಈ ಬಗ್ಗೆ ಗುರುವಾರ ಮಾತನಾಡಿದ ಸಿಎಐಟಿ ಪ್ರಧಾನ ಕಾರ್ಯದರ್ಶಿ ಪ್ರವೀಣ್‌ ಖಂಡೇಲ್ವಾಲ್‌ ಅವರು, ‘ರೈತರ ಬಿಕ್ಕಟ್ಟು ಶಮನಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ವಿವಾದಾತ್ಮಕ ಕಾಯ್ದೆಗಳನ್ನು 18 ತಿಂಗಳ ಕಾಲ ಜಾರಿ ಮಾಡಲ್ಲ. ಜೊತೆಗೆ ರೈತ ನಾಯಕರೊಂದಿಗೆ ಜಂಟಿ ಸಮಿತಿ ರಚನೆ ಮಾಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ್ದು, ರೈತಾಪಿ ವರ್ಗದ ಅನುಕೂಲಕ್ಕಾಗಿ ಸರ್ಕಾರದ ಈ ಪ್ರಸ್ತಾವನೆಯನ್ನು ಒಪ್ಪಿಕೊಂಡು ರೈತರು ತಮ್ಮ ಪ್ರತಿಭಟನೆ ಹಿಂಪಡೆಯಬೇಕು’ ಎಂದಿದ್ದಾರೆ.

ಅಲ್ಲದೆ ಒಂದು ವೇಳೆ ಈ ಪ್ರಸ್ತಾವನೆಯನ್ನು ಒಪ್ಪದೆ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದು ರೈತರು ಹಠಕ್ಕೆ ಬಿದ್ದರೆ, ಈ ಪ್ರತಿಭಟನೆ ಹಿಂದೆ ಕೆಲ ದೇಶ ವಿರೋಧಿ ಶಕ್ತಿಗಳು ಕೆಲಸ ಮಾಡುತ್ತಿವೆ ಎಂದೇ ಅರ್ಥೈಸಬೇಕಾಗುತ್ತದೆ ಎಂದು ಪ್ರತಿಪಾದಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹಿರಿಯ ನಾಗರಿಕರು, 45+ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ರೈಲ್ವೆ; ಇಲ್ಲಿದೆ ಸೂಪರ್ ಅಪ್‌ಡೇಟ್
ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು