
ನವದೆಹಲಿ(ಫೆ.04): ರೈತ ಸಂಘಟನೆಗಳು ಕರೆ ನೀಡಿದ ದೇಶಾದ್ಯಂತ ರಸ್ತೆ ತಡೆ ಪ್ರತಿಭಟನೆ ಮತ್ತೆ ಹಿಂಸಾ ರೂಪ ಪಡೆಯದಿರಲು ಈ ಬಾರಿ ರಾಷ್ಟ್ರೀಯ ಭದ್ರತಾ ಸಲಹಗಾರ ಅಜಿತ್ ದೋವಲ್ ಕಣಕ್ಕಿಳಿದಿದ್ದಾರೆ. ಫೆಬ್ರವರಿ 6 ರಂದು ರೈತ ಸಂಘಟನೆಗಳು ಚಕ್ಕಾ ಜಾಮ್ ನಡೆಸಲಿದ್ದಾರೆ.
ರೈತ ಪ್ರತಿಭಟನೆ ಹೆಸರಿನಲ್ಲಿ ಭಾರತ ವಿರೋಧಿ ಪಿತೂರಿಗೆ ಟೂಲ್ ಕಿಟ್ ನೀಡಿದ ಗ್ರೇಟಾ ಧನ್ಬರ್ಗ್!.
ಅಜಿತ್ ದೋವಲ್, ದೆಹಲಿ ಪೊಲೀಸ್ ಕಮಿಷನರ್ ಎಸ್ ಎಲ್ ಶ್ರೀವಾತ್ಸವ್ ಹಾಗೂ ಗೃಹ ಸಚಿವ ಅಮಿತ್ ಶಾ ತುರ್ತು ಸಭೆ ನಡೆಸಿದ್ದಾರೆ. ರೈತರ ರಸ್ತೆ ತಡೆ ಪ್ರತಿಭಟನೆ ಹಾಗೂ ಭದ್ರತಾ ನಿಯೋಜನೆ ಕುರಿತು ಸಭೆ ನಡೆಸಲಾಗಿದೆ. ಇಷ್ಟೇ ಅಲ್ಲ ರೈತ ಪ್ರತಿಭಟನೆ ಲಾಭ ಗಳಿಸಲು ಪ್ರಯತ್ನಿಸುತ್ತಿರುವ ಉಗ್ರಗಾಮಿ ಗುಂಪಗಳನ್ನು ಹತ್ತಿಕ್ಕಲು ಮಾಸ್ಟರ್ ಪ್ಲಾನ್ ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.
ಫೆಬ್ರವರಿ 6 ರಂದು ಚಕ್ಕಾ ಜಾಮ್ ನಡೆಸುವುದಾಗಿ ರೈತ ಸಂಘಟನೆ ಮುಖಂಡ ರಾಕೇಶ್ ಟಿಕೈಟ್ ಹೇಳಿದ್ದಾರೆ. ಆದರೆ ದೆಹಲಿಯಲ್ಲಿ ಈ ಪ್ರತಿಭಟನೆ ಇರುವುದಿಲ್ಲ. ದೆಹಲಿ ಹೊರತು ಪಡಿಸಿ ದೇಶಾದ್ಯಂತ ಪ್ರತಿಭಟನೆ ಇರಲಿದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ