ಹಿಂಸಾಚಾರಕ್ಕೆ ತೀವ್ರ ಆಕ್ಷೇಪ: ಮೊದಲ ಬಾರಿ ರೈತ ಸಂಘಟನೆಯಲ್ಲಿ ಬಿರುಕು!

Published : Jan 28, 2021, 08:22 AM IST
ಹಿಂಸಾಚಾರಕ್ಕೆ ತೀವ್ರ ಆಕ್ಷೇಪ: ಮೊದಲ ಬಾರಿ ರೈತ ಸಂಘಟನೆಯಲ್ಲಿ ಬಿರುಕು!

ಸಾರಾಂಶ

ಪ್ರತಿಭಟನೆಯಿಂದ 2 ರೈತ ಸಂಘಟನೆಗಳು ವಾಪಸ್‌| ಟ್ರ್ಯಾಕ್ಟರ್‌ ರಾರ‍ಯಲಿ ವೇಳೆ ಹಿಂಸಾಚಾರಕ್ಕೆ ತೀವ್ರ ಆಕ್ಷೇಪ

ನೋಯ್ಡಾ(ಜ.28): ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದ 2 ರೈತ ಸಂಘಟನೆಗಳು ಹಿಂದಕ್ಕೆ ಸರಿದಿವೆ. ಇದರೊಂದಿಗೆ ಎರಡೂವರೆ ತಿಂಗಳಿನಿಂದ ನಡೆಯುತ್ತಿರುವ ರೈತ ಹೋರಾಟದಲ್ಲಿ ಮೊದಲ ಬಾರಿಗೆ ಬಿರುಕು ಮೂಡಿದಂತಾಗಿದೆ.

ಮಂಗಳವಾರ ನಡೆದ ಟ್ರ್ಯಾಕ್ಟರ್‌ ರಾರ‍ಯಲಿ ವೇಳೆ ಭಾರೀ ಹಿಂಸಾಚಾರ ನಡೆದಿದ್ದಕ್ಕೆ ತೀವ್ರ ಬೇಸರ ಮತ್ತು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆಯಿಂದ ಹಿಂದಕ್ಕೆ ಸರಿಯುತ್ತಿರುವುದಾಗಿ ಭಾರತೀಯ ಕಿಸಾನ್‌ ಮೋರ್ಚಾದ ಭಾನು ಘಟಕ ಘೋಷಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಂಘಟನೆಯ ಮುಖ್ಯಸ್ಥ ಠಾಕೂರ್‌ ಭಾನುಪ್ರತಾಪ್‌ ಸಿಂಗ್‌, ಗಣರಾಜ್ಯದ ದಿನ ದಿಲ್ಲಿಯಲ್ಲಿ ಏನಾಯಿತೋ ಅದು ತೀವ್ರ ನೋವು ತಂದಿದೆ. ಹೀಗಾಗಿ ನಾವು ತಕ್ಷಣದಿಂದ ಪ್ರತಿಭಟನೆಯಿಂದ ಹಿಂದಕ್ಕೆ ಸರಿಯುತ್ತಿದ್ದೇವೆ ಎಂದು ಹೇಳಿದ್ದಾರೆ. ಈ ಸಂಘಟನೆ ಚಿಲ್ಲಾ ಗಡಿ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿತ್ತು.

ಅದೇ ರೀತಿ ಅಖಿಲ ಭಾರತ ಕಿಸಾನ್‌ ಸಂಘರ್ಷ ಸಮನ್ವಯ ಸಮಿತಿ ಕೂಡಾ ಪ್ರತಿಭಟನೆಯಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದೆ. ಕೆಲ ವ್ಯಕ್ತಿಗಳ ಉದ್ದೇಶ ಬೇರೇನೋ ಇರುವ ಕಾರಣ ನಾವು ಈ ಹೋರಾಟದಲ್ಲಿ ಮುಂದುವರೆಯುವುದು ಉಚಿತವಲ್ಲ ಎಂದು ಸಂಘಟನೆಯ ಮುಖ್ಯಸ್ಥ ವಿ.ಎಂ.ಸಿಂಗ್‌ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೆವ್ವಗಳ ಬಗ್ಗೆ ಪಿಎಚ್‌ಡಿ ಮಾಡಲಿದ್ದಾರೆ ಬಾಗೇಶ್ವರ ಬಾಬಾ ಧೀರೇಂದ್ರ ಶಾಸ್ತ್ರಿ! ಘೋಸ್ಟ್ ಬಗ್ಗೆ ತಿಳಿಯಲು ನಿಮಗೆ ಆಸಕ್ತಿ ಇದೆಯೇ?
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ಮಂಜೂರು!