ಟೆಸ್ಟ್‌ಗೆ ಒಳಗಾಗಲು ನಕಾರ, ಕೊರೋನಾದಿಂದ ರೈತರ ಹೋರಾಟ ದುರ್ಬಲ ಭೀತಿ!

Published : Dec 13, 2020, 12:12 PM IST
ಟೆಸ್ಟ್‌ಗೆ ಒಳಗಾಗಲು ನಕಾರ, ಕೊರೋನಾದಿಂದ ರೈತರ ಹೋರಾಟ ದುರ್ಬಲ ಭೀತಿ!

ಸಾರಾಂಶ

ಜ್ವರ ಇದ್ದರೂ ಕೊರೋನಾ ಟೆಸ್ಟ್‌ಗೆ ಒಳಗಾಗಲು ನಕಾರ| ಕೊರೋನಾದಿಂದ ಹೋರಾಟ ದುರ್ಬಲ ಭೀತಿ

ನವದೆಹಲಿ(ಡಿ.13): ರೈತರು ಧರಣಿ ನಡೆಸುತ್ತಿರುವ ದೆಹಲಿಯ ಗಡಿ ಭಾಗಗಳು ಕೋವಿಡ್‌ ಹರಡುವ ಕೇಂದ್ರಗಳಾಗುವ ಸಾಧ್ಯತೆಗಳಿವೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ ಬೆನ್ನಲ್ಲೇ, ಪ್ರತಿಭಟನಾನಿರತ ರೈತರು ಕೊರೋನಾ ಟೆಸ್ಟ್‌ಗೆ ಒಳಗಾಗಲು ಹಿಂಜರಿಯುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸೋನಿಪತ್‌ ಜಿಲ್ಲಾ ವೈದ್ಯಕೀಯ ತಂಡ ಸಿಂಘೂ ಗಡಿಯಲ್ಲಿ ಹೋರಾಟ ನಿರತ ಅನ್ನದಾತರ ಸೇವೆಯಲ್ಲಿ ನಿರತವಾಗಿದ್ದು, ರೈತರು ಕಫ, ಜ್ವರ, ಶೀತ, ಕೆಮ್ಮು ಮುಂತಾದವುಗಳಿಗೆ ಔಷಧ ಪಡೆದುಕೊಳ್ಳುತ್ತಿದ್ದಾರೆ. ಆದರೆ ಕೋವಿಡ್‌ ಪರೀಕ್ಷೆಗೆ ಹಿಂಜರಿಯುತ್ತಿದ್ದಾರೆ. ಒಂದು ವೇಳೆ ಪರೀಕ್ಷೆಯಲ್ಲಿ ಪಾಸಿಟಿವ್‌ ಬಂದರೆ, ಐಸೊಲೇಶನ್‌ಗೆ ಒಳಗಾಗಬೇಕು. ಹೀಗಾದಲ್ಲಿ ಹೋರಾಟ ದುರ್ಬಲಗೊಳ್ಳುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ರೈತರು ಪರೀಕ್ಷೆ ಮಾಡಿಸಿಕೊಳ್ಳುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಮೊನ್ನೆಯಷ್ಟೆಸಿಂಘೂ ಗಡಿಯಲ್ಲಿ ಕರ್ತವ್ಯನಿರತ ಇಬ್ಬರು ಹಿರಿಯ ಪೊಲೀಸ್‌ ಅಧಿಕಾರಿಗಳು ಕೊರೋನಾಗೆ ತುತ್ತಾಗಿದ್ದರು.

ಅಲ್ಲದೇ ಯಾವುದೇ ವೈರಸ್‌ ಕೂಡ ನಮ್ಮನ್ನು ಹಿಮ್ಮೆಟ್ಟಿಸಲು ಸಾಧ್ಯವಿಲ್ಲ ಎಂದು ರೈತರು ಗುಡುಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು