ಕೃಷಿ ಕಾಯ್ದೆ ತಡೆ ಪ್ರಸ್ತಾವನೆಗೂ ಬಗ್ಗದ ರೈತರು!

Published : Jan 22, 2021, 08:17 AM IST
ಕೃಷಿ ಕಾಯ್ದೆ ತಡೆ ಪ್ರಸ್ತಾವನೆಗೂ ಬಗ್ಗದ ರೈತರು!

ಸಾರಾಂಶ

ಕೃಷಿ ಕಾಯ್ದೆ ತಡೆ ಪ್ರಸ್ತಾವನೆಗೂ ಬಗ್ಗದ ರೈತರು| ಮೂರೂ ಕಾಯ್ದೆ ರದ್ದೊಂದೇ ನಮಗೆ ಪರಿಹಾರ| ಇಂದು ರೈತರು- ಕೇಂದ್ರದ 11ನೇ ಸುತ್ತಿನ ಸಭೆ

ನವದೆಹಲಿ(ಜ.22): ವಿವಾದ ಇತ್ಯರ್ಥಕ್ಕಾಗಿ ನೂತನ ಕೃಷಿ ಕಾಯ್ದೆ ಜಾರಿಯನ್ನು ಒಂದೂವರೆ ವರ್ಷಗಳ ಕಾಲ ತಡೆ ಹಿಡಿಯುವುದಾಗಿ ಕೇಂದ್ರ ಸರ್ಕಾರದ ಮುಂದಿಟ್ಟಿರುವ ಪ್ರಸ್ತಾವನೆಯನ್ನೂ ರೈತ ಸಂಘಟನೆಗಳು ಗುರುವಾರ ತಿರಸ್ಕರಿಸಿದ್ದು, ಪ್ರತಿಭಟನೆಯನ್ನು ಮುಂದುವರಿಸುವ ನಿರ್ಧಾರ ಕೈಗೊಂಡಿವೆ.

ಜ.19ರಂದು ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರ ಇಂಥದ್ದೊಂದು ಪ್ರಸ್ತಾಪ ಮುಂದಿಟ್ಟಿತ್ತು. ಈ ಬಗ್ಗೆ ಗುರುವಾರ ನಡೆದ ಸಂಯುಕ್ತ ಕಿಸಾನ್‌ ಮೋರ್ಚಾದ ಸಭೆಯಲ್ಲಿ ಚರ್ಚಿಸಲಾಯಿತಾದರೂ, ಅಂತಿಮವಾಗಿ ಪ್ರಸ್ತಾಪ ತಿರಸ್ಕರಿಸಲಾಯಿತು. ಜೊತೆಗೆ ಮೂರೂ ಕೃಷಿ ಕಾಯ್ದೆ ರದ್ದು ಮಾಡುವುದೊಂದೇ ನಮ್ಮ ಬೇಡಿಕೆ ಎಂದು ರೈತರು ಸ್ಪಷ್ಟಪಡಿಸಿದರು. ಹೀಗಾಗಿ ಕಗ್ಗಂಟು ಮತ್ತೆ ಮುಂದುವರೆದಂತೆ ಆಗಿದೆ.

ಈ ನಡುವೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಶುಕ್ರವಾರ 11ನೇ ಸುತ್ತಿನ ಮಾತುಕತೆ ನಿಗದಿ ಆಗಿದೆ. ಹೀಗಾಗಿ ಈ ಸಭೆಯ ಫಲಶೃತಿ ಬಗ್ಗೆ ಇದೀಗ ಕುತೂಹಲ ಮೂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವಾಕ್ ಹೋಗಿದ್ದ 79 ವರ್ಷದ ಅಜ್ಜಿ ನಾಪತ್ತೆ: ನೆಕ್ಲೇಸ್‌ಗೆ ಮೊಮ್ಮಗ ಅಳವಡಿಸಿದ ಜಿಪಿಎಸ್‌ನಿಂದ ಪತ್ತೆ