
ದೆಹಲಿ(ಫೆ.02): ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ದೆಹಲಿ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಇದೀಗ ಚುರುಕುಗೊಳಿಸಿದ್ದಾರೆ. ಟ್ರಾಕ್ಟರ್ ರ್ಯಾಲಿ ಆಯೋಜಿಸಿ ಹಿಂಸಾ ರೂಪ ಪಡೆದ ಬಳಿಕ ರೈತರು ಹಾಗೂ ಸರ್ಕಾರದ ನಡುವಿನ ಕಂದಕ ಹೆಚ್ಚಾಗಿದೆ. ಹೀಗಾಗಿ ಫೆಬ್ರವರಿ 6 ರಂದು ರೈತರು ದೇಶಾದ್ಯಂತ ಚಕ್ಕಾ ಜಾಮ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.
ಪ್ರತಿಭಟನಾ ನಿರತ ರೈತರಿಂದ ತಲ್ವಾರ್ ದಾಳಿ; ಒರ್ವ ಪೊಲೀಸ್ ಗಂಭೀರ!...
ಚಕ್ಕಾ ಜಾಮ್ ಅಂದರೆ ರಸ್ತೆ ತಡೆ. ದೇಶಾದ್ಯಂತ ರಸ್ತೆ ತಡೆ ನಡೆಸಲು ರೈತ ಸಂಘಟನೆಗಳು ಕರೆ ನೀಡಿದೆ. ಒಂದರ್ಥದಲ್ಲಿ ಇದು ಭಾರತ್ ಬಂದ್ ಇದ್ದ ರೀತಿ. ದೆಹಲಿ ಗಡಿ ಭಾಗದಲ್ಲೂ ಪ್ರತಿಭಟನೆ ಹಿಂಸಾ ರೂಪ ಪಡೆದ ಕಾರಣ, ಸರ್ಕಾರ ಇಂಟರ್ನೆಟ್ ಸೇವೆ ಸೇರಿದಂತೆ ಕೆಲ ಸೇವೆಗಳನ್ನು ಬಂದ್ ಮಾಡಲಾಗಿದೆ. ಇದರ ವಿರುದ್ಧ ರೈತ ಸಂಘಟನೆಗಳು ಶನಿವಾರ(ಫೆ.06) ಚಕ್ಕಾ ಜಾಮ್ಗೆ ಕರೆ ನೀಡಿದೆ.
ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ನಲ್ಲೂ ರೈತರನ್ನು ನಿರ್ಲಕ್ಷ್ಯಿಸಲಾಗಿದೆ. ಹೀಗಾಗಿ ರೈತರ ಆಕ್ರೋಶ ಹೆಚ್ಚಾಗಿದೆ. ಫೆಬ್ರವರಿ 6 ರಂದು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆ ವರೆಗೆ ರಸ್ತೆ ತಡೆ ನಡೆಸಲು ರೈತರು ಕರೆ ನೀಡಿದ್ದಾರೆ. ದೇಶದ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗುವುದು ಎಂದು ರೈತ ಸಂಘಟನೆಗಳು ಘೋಷಿಸಿದೆ.
ದೆಹಲಿ ಗಲಭೆಗೆ ತಿಂಗಳ ಹಿಂದೆ ಸ್ಕೆಚ್; ಟ್ರಾಕ್ಟರ್ ರ್ಯಾಲಿ ಹಿಂದಿನ ಸ್ಫೋಟಕ ಮಾಹಿತಿ ಬಹಿರಂಗ!...
ಚಕ್ಕಾ ಜಾಮ್ ರೂಪು ರೇಷೆಯನ್ನು ರೈತ ಸಂಘಟನೆಗಳೊಂದಿಗೆ ಚರ್ಚಿಸಿ ಪ್ರಕಟಿಸಲಾಗುವುದು ಎಂದು ರೈತ ಮುಖಂಡ ಬಲ್ಬೀರ್ ಸಿಂಗ್ ರಜೇವಾಲ ಹೇಳಿದ್ದಾರೆ. ಕಿಸಾನ್ ಮೋರ್ಚಾ, ಟ್ರಾಕ್ಟರ್ 2 ಸೇರಿದಂತೆ ಹಲವು ಟ್ವಿಟರ್ ಖಾತೆಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ನಕಲಿ ಖಾತೆಗಳ ಬದಲು ನಮ್ಮ ಖಾತೆಗಳನ್ನು ನಿರ್ಬಂಧಿಸಿರುವುದು ತಪ್ಪು ಎಂದು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ.
ಈ ಎಲ್ಲಾ ಕಾರಣಕ್ಕಾಗಿ ರೈತರು ಚಕ್ಕಾ ಜಾಮ್ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇದೀಗ ಈ ಪ್ರತಿಭಟನೆ ಹಿಂಸಾ ರೂಪ ಪಡೆಯದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಮುಂಜಜಾಗ್ರತ ಕ್ರಮ ಕೈಗೊಳ್ಳಲು ಮುಂದಾಗಿದೆ. ಈಗಾಗಲೇ ದೆಹಲಿ ಸೇರಿದಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ. ಕಟ್ಟು ನಿಟ್ಟಿನ ಪೊಲೀಸ್ ಬಂದೋಬಸ್ತ್ ಮಾಡಲು ಆದೇಶಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ