
ನವದೆಹಲಿ(ಫೆ.10): ರೈತ ಸಂಘಟನೆಗಳು ದೇಶಾದ್ಯಂತ ಮತ್ತೊಂದು ಹೋರಾಟಕ್ಕೆ ಕರೆ ನೀಡಿದೆ. ಫೆಬ್ರವರಿಿ 18 ರಂದು ದೇಶದ್ಯಾಂತ ರೈಲು ತಡೆ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿದೆ. ಈ ಮೂಲಕ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧದ ಹೋರಾಟವನ್ನು ರೈತ ಸಂಘಟನೆಗಳು ತೀವ್ರಗೊಳಿಸಿದೆ.
ರೈತ ಪ್ರತಿಭಟನೆ ನಡುವೆ ಸೇರಿಕೊಂಡ ಖಲಿಸ್ತಾನಕ್ಕೆ ಪಾಕ್ ಬಹಿರಂಗ ಬೆಂಬಲ; ವೈರಲ್ ವಿಡಿಯೋ!
ಲೋಕಸಭೆಯಲ್ಲಿ ಪ್ರಧಾನಿ ಮೋದಿ ಮಾತಿನ ಬಳಿಕ ರೈತ ಸಂಘಟನೆಗಳು ಈ ನಿರ್ಧಾರ ತೆಗೆದುಕೊಂಡಿದೆ. ರೈತರನ್ನು ಮಾತುಕತೆಗೆ ಆಹ್ವಾನಿಸಿದ ಬೆನ್ನಲ್ಲೇ ರೈತ ಸಂಘಟನೆಗಲು ಚರ್ಚಿಸಿ ರೈಲು ತಡೆ ನಡೆಸಲು ಮುಂದಾಗಿದೆ. ಫೆಬ್ರವರಿ 18 ರಂದು 4 ಗಂಟೆಗಳ ಕಾಲ ರೈಲು ತಡೆ ನಡೆಸಲಿದೆ.
ಇನ್ನೂ 9 ತಿಂಗಳು ರೈತ ಪ್ರತಿಭಟನೆ ಖಚಿತ; ಶೀಘ್ರದಲ್ಲೇ ದೇಶಾದ್ಯಂತ ಮತ್ತೊಂದು ಹೋರಾಟ!
ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆವರೆಗೆ ರೈಲು ತಡೆ ನಡೆಸಲಾಗುವುದು ಎಂದು ರೈತ ಸಂಘಟನೆಗಳು ಹೇಳಿವೆ. ಒಂದೊಂದೆ ಪ್ರತಿಭಟನೆ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸುತ್ತೇವೆ. ರಸ್ತೆ, ತಡೆ ರೈಲು ತಡೆ ಪ್ರತಿಭಟನೆಗೆ ಸ್ಪಂದಿಸದಿದ್ದರೆ, ದೊಡ್ಡ ಮಟ್ಟದ ಹೋರಾಟ ಮಾಡಲು ರೈತ ಸಂಘಟನಗಳು ಸಜ್ಜಾಗಿದೆ ಎಂದು ರೈತ ಮುಖಂಡರು ಹೇಳಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ