ಪುಲ್ವಾಮಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಹಿಜ್ಬುಲ್​ ಮುಜಾಹಿದ್ದೀನ್​ ಉಗ್ರನ ತಂದೆ!

Published : Aug 15, 2021, 04:21 PM ISTUpdated : Sep 29, 2021, 01:19 PM IST
ಪುಲ್ವಾಮಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಹಿಜ್ಬುಲ್​ ಮುಜಾಹಿದ್ದೀನ್​ ಉಗ್ರನ ತಂದೆ!

ಸಾರಾಂಶ

* ಭಾರತೀಯರಿಗಿಂದು 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮ * ಕಣಿವೆ ನಾಡುವ ಜಮ್ಮು ಕಾಶ್ಮೀರದಲ್ಲಿ ಹಾರಿದ ತ್ರಿವರ್ಣ ಧ್ವಜ * ಪುಲ್ವಾಮಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಹಿಜ್ಬುಲ್​ ಮುಜಾಹಿದ್ದೀನ್​ ಉಗ್ರನ ತಂದೆ

 ಪುಲ್ವಾಮಾ(ಆ.15): ಭಾರತೀಯರಿಗಿಂದು 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮ.  ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಂಡು ಅನುಭವಿಸಿದ ಸ್ವಾತಂತ್ರ್ಯದ ಸಂಭ್ರಮ ಇಂದು ಕಾಶ್ಮೀದಿಂದ ಕನ್ಯಾಕುಮಾರಿವರೆಗೆ ದೇಶದ ಮೂಲೆ ಮೂಲೆಯಲ್ಲೂ ಅತ್ಯಂತ ಹೆಮ್ಮೆಯಿಂದ ಆಚರಿಸಲಾಗಿದೆ. ಈ ಅಮೃತ ಮಹೋತ್ಸವದ ಹರ್ಷಾಚರಣೆ ದೇಶದೆಲ್ಲೆಡೆ ಹಬ್ಬದ ವಾತಾವರಣ ಮೂಡಿಸಿದೆ. ಹೀಗಿರುವಾಗ ದೇಶದ ನಾನಾ ಕಡೆ ಸೈನಿಕರಿಂದ ಜನಸಾಮಾನ್ಯರವರೆಗೆ ಸ್ವಾತಂತ್ರ್ಯ ದಿನ ಹೇಗೆ ಆಚರಣೆ ಮಾಡಲಾಯ್ತು ಎಂಬ ಸುದ್ದಿಗಳು ಸದ್ದು ಮಾಡುತ್ತಿವೆ. ಇವೆಲ್ಲದರ ನಡುವೆ ಸದ್ಯ ಹಿಜ್ಬುಲ್​ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್, ಬುರ್ಹಾನ್​​ ವಾನಿಯ ತಂದೆ ಪುಲ್ವಾಮಾದ ಟ್ರಾಲ್​ನಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿರುವ ಫೋಟೋ ಭಾರೀ ವೈರಲ್ ಆಗಿದೆ.

ಹೌದು 2016ರಲ್ಲೇ ಹತ್ಯೆಗೀಡಾಗಿದ್ದ ಹಿಜ್ಬುಲ್​ ಮುಜಾಹಿದ್ದೀನ್​ ಸಂಘಟನೆಯ ಕಮಾಂಡರ್​ ಆಗಿದ್ದ ಬುರ್ಹಾನ್​​ ವಾನಿಯ ತಂದೆ ಮುಜಾಫರ್​ ವಾನಿ  75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಪುಲ್ವಾಮಾದ ಟ್ರಾಲ್​ನಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಇನ್ನು ವೃತ್ತಿಯಲ್ಲಿ ಮುಜಾಫರ್​ ವಾನಿ ಇಲ್ಲಿನ ಸರ್ಕಾರಿ ಮಾಧ್ಯಮಿಕ ಶಾಲೆಯ ಪ್ರಿನ್ಸಿಪಾಲ್​ ಆಗಿದ್ದಾರೆ. ಹೀಗಾಗಿ ಶಿಷ್ಟಾಚಾರದಂತೆ ಧ್ವಜಾರೋಹಣ ಮಾಡಿದ್ದಾರೆ.

ರಾಜೀನಾಮೆ ನೀಡಿಲ್ಲ

ಇನ್ನು ಈ ಬಾರಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆಯ ಸಂಭ್ರಮ. ಈ ಹಿನ್ನೆಲೆಯಲ್ಲಿ ಕಣಿವೆ ನಾಡು ಜಮ್ಮು-ಕಾಶ್ಮೀರದ ಎಲ್ಲಾ ಸರ್ಕಾರಿ ಕಚೇರಿ, ಶೈಕ್ಷಣಿಕ ಸಂಸ್ಥೆಯಲ್ಲಿ ಕಡ್ಡಾಯವಾಗಿ ಧ್ವಜಾರೋಹಣ ಮಾಡಬೇಕು ಎಂದು ಸ್ಥಳೀಯ ಆಡಳಿತ ಆದೇಶಿಸಿತ್ತು. ಆದರೆ ಈ ಆದೇಶದ ಬೆನ್ನಲ್ಲೇ ತ್ರಿವರ್ಣ ಧ್ವಜ ಹಾರಿಸುವುದನ್ನು ವಿರೋಧಿಸಿ ಮುಜಾಫರ್​ ವಾನಿ ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿ ಶನಿವಾರ ಭಾರೀ ಚರ್ಚೆ ಹುಟ್ಟಿಸಿತ್ತು. ಈ ಸುದ್ದಿ ಬೆಂಕಿಯಂತೆ ಹಬ್ಬಿಕೊಂಡಿದ್ದ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದ ವಾನಿ ತಾನು ರಾಜೀನಾಮೆ ನೀಡಿಲ್ಲ ಎಂದಿದ್ದರು. ಈ ಎಲ್ಲಾ ವಿವಾದಗಳ ಮಧ್ಯೆ ಮುಜಾಫರ್​ ವಾನಿ ಧ್ವಜಾರೋಹಣ ಮಾಡಿರುವುದು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದೆ. 

ಯಾರು ಬುರ್ಹಾನ್​​ ವಾನಿ

ಮುಜಾಫರ್​ ವಾನಿ ಪುತ್ರ ಬುರ್ಹಾನ್​ ವಾನಿ ಹಿಜ್ಬುಲ್​ ಮುಜಾಹಿದ್ದೀನ್​ ಉಗ್ರ ಸಂಘಟನೆಯ ಕಮಾಂಡರ್ ಆಗಿದ್ದ. ಈತ ಸೋಷಿಯಲ್ ಮೀಡಿಯಾಗಳ ಮೂಲಕ ಕಾಶ್ಮೀರಿ ಯುವಕರನ್ನು ಉಗ್ರಸಂಘಟನೆಗೆ ಸೆಳೆಯುವ ಕೆಲಸ ಮಾಡುತ್ತಿದ್ದ. 2016ರಲ್ಲಿ ಈತನ ವಿರುದ್ಧ ಕಾರ್ಯಾಚರಣೆ ನಡೆಸಿ, ಹತ್ಯೆಗೈಯ್ಯಲಾಗಿತ್ತು. ಇನ್ನು ಈ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಪೊಲೀಸ್​ ಐಪಿಎಸ್​ ಅಧಿಕಾರಿ ಅಬ್ದುಲ್​ ಜಬ್ಬರ್​​ಗೆ, ಕಳೆದ ವರ್ಷ ಗಣರಾಜ್ಯೋತ್ಸವದಂದು ಪೊಲೀಸ್​ ಮೆಡಲ್​ ಕೊಟ್ಟು ಸನ್ಮಾನಿಸಲಾಗಿತ್ತು.

15ನೇ ವಯಸ್ಸಿಗೆ ಮನೆಯಿಂದ ದೂರ

ಬುರ್ಹಾನ್​ ತನ್ನ 15ನೇ ವಯಸ್ಸಿನಲ್ಲಿ ಮನೆಬಿಟ್ಟು ಓಡಿ ಹೋಗಿದ್ದ. 2010ರಲ್ಲಿ ಹಿಜ್ಬುಲ್ ಮುಜಾಹಿದ್ದೀನ್​ ಸಂಘಟನೆ ಸೇರಿಕೊಂಡಿದ್ದ. ಇನ್ನು ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಸುಮಾರು 5 ತಿಂಗಳ ಕಾಲ ಆತನ ಬೆಂಬಲಿಗರು ಮುಷ್ಕರ ನಡೆಸಿದ್ದರು. ಈ ಘರ್ಷಣೆಯಲ್ಲಿ ಸುಮಾರು ನೂರು ಮಂದಿ ಸಾವನ್ನಪ್ಪಿದ್ದರು. ಆದರೀಗ ಇಂತಹ ಬಹುದೊಡ್ಡ ಉಗ್ರನ ತಂದೆ ರಾಷ್ಟ್ರಧ್ವಜ ಹಾರಿಸಿದ್ದು ಭಾರೀ ಪ್ರಶಂಸೆಗೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ಹಾವಿನ ಮೊಟ್ಟೆಗಳನ್ನು ಬೇಯಿಸಿ ತಿನ್ನಬಹುದೇ? ಅವುಗಳ ವಿಷಕಾರಿ ಅಲ್ಲವಾ? ಇಲ್ಲಿದೆ ಸತ್ಯ
Holi 2026: ಅರ್ಧ ಜಗತ್ತೇ ಯುದ್ಧದಲ್ಲಿ ರಕ್ತದೋಕುಳಿ ಆಡುತ್ತಿರುವಾಗ, ಅನಾಥಾಶ್ರಮದ ಮಕ್ಕಳೊಂದಿಗೆ ಭಾರತೀಯ ಸೈನಿಕರ ಸಂಭ್ರಮದ ಬಣ್ಣದಾಟ