ಕೋವಿಡ್‌ ಚಿಕಿತ್ಸೆಗಾಗೇ ಉಳಿತಾಯ ಮಾಡುತ್ತಿರುವ ಮಧ್ಯಮ ವರ್ಗ!

Published : Jul 18, 2020, 12:42 PM ISTUpdated : Jul 18, 2020, 12:47 PM IST
ಕೋವಿಡ್‌ ಚಿಕಿತ್ಸೆಗಾಗೇ ಉಳಿತಾಯ ಮಾಡುತ್ತಿರುವ ಮಧ್ಯಮ ವರ್ಗ!

ಸಾರಾಂಶ

ಕೋವಿಡ್‌ ಚಿಕಿತ್ಸೆಗಾಗೇ ಉಳಿತಾಯ ಮಾಡುತ್ತಿರುವ ಮಧ್ಯಮ ವರ್ಗ: ವರದಿ| ಆದ್ಯತೆ ಕಳೆದುಕೊಂಡ ಭವಿಷ್ಯದ ಖರ್ಚು| ಆರೋಗ್ಯ, ಉದ್ಯೋಗ ನಷ್ಟದ ಬಗ್ಗೆ ಚಿಂತೆ| ಅಗತ್ಯ ಖರ್ಚುಗಳಿಗಿಲ್ಲ ಕಡಿವಾಣ

ಮುಂಬೈ(ಜು.18): ಮಹಾಮಾರಿ ಕೊರೋನಾ ವೈರಸ್‌ ಮಧ್ಯಮ ವರ್ಗದ ಕುಟುಂಬವನ್ನು ಇನ್ನಿಲ್ಲದಂತೆ ಕಾಡಿದ್ದು, ತಮ್ಮ ಬಹುಪಾಲು ಗಳಿಕೆಯನ್ನು ಕೋವಿಡ್‌ ಚಿಕಿತ್ಸೆಗಾಗಿಯೇ ಉಳಿತಾಯ ಮಾಡುತ್ತಿದ್ದಾರೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ಅಚಾನಕ್ಕಾಗಿ ಉಂಟಾದ ಆರೋಗ್ಯ ತುರ್ತು ಪರಿಸ್ಥಿತಿ ಈ ವರ್ಗವನ್ನು ಬಹುವಾಗಿ ಕಾಡಿದ್ದು, ಮಕ್ಕಳ ಶಿಕ್ಷಣ ಅಥವಾ ಮದುವೆಯಂಥ ದೀರ್ಘ ಕಾಲಿನ ಯೋಜನೆಗೆ ಉಳಿತಾಯ ಮಾಡದೇ ಕೋವಿಡ್‌ ಚಿಕಿತ್ಸೆಗಾಗಿಯೇ ಎತ್ತಿಡುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಲಾಕ್‌ಡೌನ್ ಮತ್ತೆ ಮುಂದುವೆಯುತ್ತಾ? ಸಿಎಂ ಯಡಿಯೂರಪ್ಪ ಹೇಳಿದ್ದಿಷ್ಟು!

ಖಾಸಗಿ ವಿಮಾ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಇದು ಗೊತ್ತಾಗಿದ್ದು, ಪ್ರತಿಕ್ರಿಯಿಸಿದವರ ಪೈಕಿ ಅತೀ ಹೆಚ್ಚು ಮಂದಿ ಕೊರೋನಾ ಚಿಕಿತ್ಸೆಗೆ ಉಳಿತಾಯ ಮಾಡುತ್ತಿದ್ದಾರೆ. ಬಳಿಕದ ಸ್ಥಾನದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಹಾಗೂ ಕೆಲಸ ನಷ್ಟಇದೆ. ಮಕ್ಕಳ ಶಿಕ್ಷಣ,ಮನೆ ಖರೀದಿ, ಮಕ್ಕಳ ವಿವಾಹ ಮುಂತಾದ ಅಗತ್ಯಗಳು ಆದ್ಯತೆ ಕಳೆದುಕೊಂಡಿವೆ ಎಂದು ಹೇಳಿದೆ.

ಹೆತ್ತ ತಾಯಿಯ ಎತ್ತಿ ಬಿಸಾಕಿದ: ವೃದ್ಧ ತಾಯಿಗೆ ಮಗ, ಮೊಮ್ಮಗನಿಂದ ಅಮಾನುಷ ಹಲ್ಲೆ

ಇದೇ ವೇಳೆ ಮಧ್ಯಮ ವರ್ಗದ ಆರ್ಥಿಕ ಭದ್ರತೆಯೂ ಕುಸಿದಿದ್ದು, ಮೆಟ್ರೋ ನಗರದಲ್ಲಿ ಅದರ ಪ್ರಮಾಣ ಶೇ.46ರಷ್ಟಿದೆ. ಒಂದನೇ ಹಾಗೂ ಎರಡನೇ ಹಂತದ ನಗರಗಳಲ್ಲಿ ಆರ್ಥಿಕ ಭದ್ರತೆಯ ಪ್ರಮಾಣ ಕ್ರಮವಾಗಿ ಶೇ.52 ಹಾಗೂ ಶೇ.55ರಷ್ಠಿದೆ. ಇದೇ ವೇಳೆ ಅಗತ್ಯಗಳಿಗೆ ಜನರ ಖರ್ಚು ಹಿಂದಿನಷ್ಟೇ ಇದ್ದು, ಒಂದನೇ ಹಂತ ಹಾಗೂ ಮೆಟ್ರೋ ನಗರದಲ್ಲಿನ ಶೇ.48 ಮಂದಿಗಳಲ್ಲಿ ಉಳಿತಾಯ ಹೆಚ್ಚಿದೆ ಎಂದು ಸಮೀಕ್ಷೆ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭಾರತೀಯರ ಬಳಿ ಇದೆ ವಿಶ್ವದ ಟಾಪ್ 10 ಬ್ಯಾಂಕ್‌ಗಳಲ್ಲಿ ಇರುವುದಕ್ಕಿಂತ ಹೆಚ್ಚು ಚಿನ್ನ: ಬಲಿಷ್ಠ ರಾಷ್ಟ್ರಗಳ ಜಿಡಿಪಿಯನ್ನೂ ಮೀರಿಸಿದ ಸಂಪತ್ತು
Post Office Scheme: ದಿನಕ್ಕೆ ₹300 ಉಳಿಸಿ, 10 ವರ್ಷದಲ್ಲಿ ₹15 ಲಕ್ಷ ನಿಮ್ಮದಾಗಿಸಿಕೊಳ್ಳಿ!