ಚಾಟ್‌ಜಿಪಿಟಿಯಲ್ಲಿ ನಕಲಿ ಆಧಾರ್, ಪಾನ್ ಕಾರ್ಡ್ ಸೃಷ್ಟಿಯ ಆತಂಕ!

Published : Apr 07, 2025, 08:13 AM ISTUpdated : Apr 07, 2025, 08:19 AM IST
ಚಾಟ್‌ಜಿಪಿಟಿಯಲ್ಲಿ ನಕಲಿ ಆಧಾರ್, ಪಾನ್ ಕಾರ್ಡ್ ಸೃಷ್ಟಿಯ ಆತಂಕ!

ಸಾರಾಂಶ

ಕೃತಕ ಬುದ್ಧಿಮತ್ತೆ ಚಾಟ್‌ಜಿಪಿಟಿ ನಕಲಿ ಆಧಾರ್ ಮತ್ತು ಪಾನ್ ಕಾರ್ಡ್‌ಗಳನ್ನು ಸೃಷ್ಟಿಸುವ ಆತಂಕ ಸೃಷ್ಟಿಸಿದೆ. ಅಮೆರಿಕದ ಓಪನ್‌ ಎಐ ಸಂಸ್ಥೆಯ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗಿದೆ.

ನವದೆಹಲಿ: ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಕೃತಕ ಸೃಷ್ಟಿಗಳನ್ನು ಮಾಡಿಕೊಡುವ ಚಾಟ್‌ ಜಿಪಿಟಿಯಲ್ಲಿ ಇದೀಗ ನಕಲಿ ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌ ಆತಂಕ ಎದುರಾಗಿದೆ. ಘಿಬ್ಲಿ ಟ್ರೆಂಡ್‌ನಿಂದ ಭಾರೀ ಮೆಚ್ಚುಗೆ ಗಳಿಸಿದ್ದ ಓಪನ್‌ ಎಐನ ಸಂಸ್ಥೆಯ ವಿಶ್ವಾಸಾರ್ಹತೆ ವಿರುದ್ಧ ಜನರು ಕಳವಳ ವ್ಯಕ್ತಪಡಿಸಿದ್ದಾರೆ.

ಅಮೆರಿಕದ ಓಪನ್‌ ಎಐ ಸಂಸ್ಥೆಯ ಚಾಟ್‌ ಜಿಪಿಟಿ ಕೃತಕ ಬುದ್ಧಿಮತ್ತೆ ಆಧರಿಸಿ, ಬಳಕೆದಾರ ಕೇಳುವ ಪ್ರಶ್ನೆಗಳಿಗೆ ಉತ್ತರಿಸುವ ಮಾಧ್ಯಮವಾಗಿದ್ದು, ಚಿತ್ರಗಳನ್ನು ಸಹ ಇದು ಸೃಷ್ಟಿಸುತ್ತಿದೆ. ಇದರ ಜೊತೆಗೆ ಅನಿಮೇಷನ್‌ ಚಿತ್ರಗಳನ್ನು ತಯಾರಿಸುವುದಲ್ಲಿಯೂ ಇದು ಮುಂದಿದೆ. ಇದೇ ರೀತಿ ಫೋಟೋ, ಹೆಸರು, ವಿಳಾಸ ಹಂಚಿ, ಆಧಾರ್‌ಕಾರ್ಡ್‌, ಪಾನ್‌ ಕಾರ್ಡ್‌ ತಯಾರಿಸು ಎಂದು ಸೂಚನೆ ಕೊಟ್ಟರೆ ಚಾಟ್‌ಜಿಪಿಟಿ ಅವುಗಳನ್ನು ತಯಾರಿಸಲಿದೆ. ಜೊತೆಗೆ ತನ್ನದೇ ಆದ ಸಂಖ್ಯೆಯನ್ನೂ ಸಹ ನೀಡಲಿದೆ.

ಇದೇ ರೀತಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಫುಟ್‌ಬಾಲ್‌ ಪಟು ಕ್ರಿಸ್ಟಿಯಾನೋ ರೊನಾಲ್ಡೋ, ಭಾರತದ ವಿಜ್ಞಾನಿ ಆರ್ಯಭಟ ಸೇರಿ ಹಲವರು ನಕಲಿ ಆಧಾರ್‌ ಪಾನ್‌ಕಾರ್ಡ್‌ಗಳನ್ನು ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇವುಗಳಿಗೆ ಆಧಾರ್‌, ಪಾನ್‌ನ ಮಾದರಿಯನ್ನು ಅಳವಡಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮ ಬಳಕೆದಾರರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತಮಿಳು ನಾಯಕರೇಕೆ ತಮಿಳಿನಲ್ಲಿ ಸಹಿ ಮಾಡಲ್ಲ? : ಹಿಂದಿ ಹೇರಿಕೆ ಎನ್ನುವ ಡಿಎಂಕೆ ಸ್ಟಾಲಿನ್‌ಗೆ ಮೋದಿ ಟಾಂಗ್‌

ಮಾಲೇಗಾಂವ್‌ ಸ್ಫೋಟದ ಜಡ್ಜ್‌ ದಿಢೀರ್ ವರ್ಗ
ಮುಂಬೈ: ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ 2008ರ ಮಹಾರಾಷ್ಟ್ರದ ಮಾಲೇಗಾಂವ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸುತ್ತಿದ್ದ ಎನ್‌ಐಎ ಕೋರ್ಟ್‌ ನ್ಯಾಯಾಧೀಶ ಎ.ಕೆ.ಲಹೋಟಿ ಅವರನ್ನು ನಾಸಿಕ್‌ ಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ. ಮಾಲೇಗಾಂವ್‌ ಸ್ಫೋಟಕ್ಕೆ ಸಂಬಂಧಿಸಿದ ತೀರ್ಪು ಶೀಘ್ರ ಹೊರಬೀಳಲಿದೆ ಎನ್ನುವಾಗಲೇ ಅವರ ವರ್ಗಾವಣೆಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ.

ರದ್ದತಿಗೆ ಆಗ್ರಹ:
ಲಹೋಟಿ ಅವರ ವರ್ಗಾವಣೆಯಿಂದ ಪ್ರಕರಣದ ತೀರ್ಪು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸ್ಫೋಟದಲ್ಲಿ ಮೃತಪಟ್ಟವರ ಸಂತ್ರಸ್ತರು ಲಹೋಟಿ ಅವರ ಅವಧಿಯನ್ನು ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರಿಗೆ ವಿಸ್ತರಿಸುವಂತೆ ಮನವಿ ಮಾಡಲು ನಿರ್ಧರಿಸಿದ್ದಾರೆ.ಸುಮಾರು 17 ವರ್ಷಗಳಷ್ಟು ಹಳೆಯ ಈ ಸ್ಫೋಟ ಪ್ರಕರಣದಲ್ಲಿ ಆರು ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಮುಂಬೈ ಸಮೀಪದ ಮಾಲೇಗಾಂವ್‌ ಪ್ರದೇಶದಲ್ಲಿ ಬೈಕ್‌ನಲ್ಲಿ ಇರಿಸಲಾಗಿದ್ದ ಬಾಂಬ್‌ ಸ್ಫೋಟಿಸಿ ಈ ದುರಂತ ಸಂಭವಿಸಿತ್ತು. ಬಿಜೆಪಿ ನಾಯಕಿ ಪ್ರಜ್ಞಾ ಠಾಕೂರ್‌, ಲೆ.ಕರ್ನಲ್‌ ಪ್ರಸಾದ್ ಪುರೋಹಿತ್‌ ಮತ್ತು ಇತರೆ ಐವರ ವಿರುದ್ಧ ಸ್ಫೋಟದ ಆರೋಪ ಹೊರಿಸಲಾಗಿದೆ.

ಇದನ್ನೂ ಓದಿ: ಕೆಲವರಿಗೆ ಎಷ್ಟೇ ಅನುದಾನ ಹಣ ಕೊಟ್ರೂ ಅಳೋದು ಬಿಡೋಲ್ಲ : ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ಗೆ ಮೋದಿ ಚಾಟಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?