
ನವದೆಹಲಿ: ಸ್ವದೇಶಿ ನಿರ್ಮಿತ ‘ತೇಜಸ್’ ಯುದ್ಧ ವಿಮಾನ ‘ಅಸ್ತ್ರ’ ಕ್ಷಿಪಣಿಯ ಯಶಸ್ವಿ ಪ್ರಯೋಗಾರ್ಥ ಪರೀಕ್ಷೆ ನಡೆದಿಸಿದೆ ಆಗಸದಿಂದ ಆಗಸಕ್ಕೆ ಹಾರುವ ಈ ಕ್ಷಿಪಣಿಯನ್ನು ಯುದ್ಧವಿಮಾನದಿಂದ ಚಿಮ್ಮಿಸಿ 20 ಸಾವಿರ ಅಡಿ ಎತ್ತರದ ಮೇಲೆ ಹಾರಿಸಲಾಯಿತು. ಗೋವಾ ಕರಾವಳಿಯಲ್ಲಿ ನಿನ್ನೆ ಈ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಎಂದು ರಕ್ಷಣಾ ಸಚಿವಾಲಯ ಹೇಳಿದೆ. ಡಿಆರ್ಡಿಒ, ಎಚ್ಎಎಲ್ ಸೇರಿದಂತೆ ರಕ್ಷಣಾ ಸಚಿವಾಲಯದ ವಿವಿಧ ಘಟಕಗಳು ಪರೀಕ್ಷೆಯ ಮೇಲುಸ್ತುವಾರಿ ವಹಿಸಿದ್ದವು. ಈ ಯಶಸ್ಸಿನಿಂದ ತೇಜಸ್ ಸಮರ ಶಕ್ತಿ ಇನ್ನಷ್ಟು ಹೆಚ್ಚಲಿದೆ ಎಂದು ಅದು ಹರ್ಷಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ