ಭ್ರಷ್ಟಾಚಾರ: ಅರುಣಾಚಲ ಪ್ರದೇಶ ಮಾಜಿ ಸಿಎಂ ವಿರುದ್ಧ FIR

Kannadaprabha News   | Asianet News
Published : Jun 11, 2021, 08:06 AM ISTUpdated : Jun 11, 2021, 09:04 AM IST
ಭ್ರಷ್ಟಾಚಾರ: ಅರುಣಾಚಲ ಪ್ರದೇಶ ಮಾಜಿ ಸಿಎಂ ವಿರುದ್ಧ FIR

ಸಾರಾಂಶ

: ಅರುಣಾಚಲ ಮಾಜಿ ಮುಖ್ಯಮಂತ್ರಿ ನಬಾಮ್‌ ಟುಕಿ ಅವರ ವಿರುದ್ಧ  FIR ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಎಫ್‌ಐಆರ್‌ ದಾಖಲಿಸಿದೆ.   ಬೌಂಡರಿ ನಿರ್ಮಾಣ ಕಾಮಗಾರಿಯ ಗುತ್ತಿಗೆ ವಿಚಾರದಲ್ಲಿ ಕೇಳಿಬಂದ ಭ್ರಷ್ಟಾಚಾರ ಆರೋಪ

ನವದೆಹಲಿ (ಜೂ.11): ಅರುಣಾಚಲ ಮಾಜಿ ಮುಖ್ಯಮಂತ್ರಿ ನಬಾಮ್‌ ಟುಕಿ ಅವರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಎಫ್‌ಐಆರ್‌ ದಾಖಲಿಸಿದೆ.

ಸ್ವಜನಪಕ್ಷಪಾತ ಮತ್ತು ಕೋಲ್ಕತಾದ ಸಾಲ್ಟ್‌ ಲೇಕ್‌ ಪ್ರದೇಶದಲ್ಲಿರುವ ಕೇಂದ್ರೀಯ ವಿದ್ಯಾಲಯ ಶಾಲೆಯ ಬೌಂಡರಿ ನಿರ್ಮಾಣ ಕಾಮಗಾರಿಯ ಗುತ್ತಿಗೆ ವಿಚಾರದಲ್ಲಿ ಕೇಳಿಬಂದ ಭ್ರಷ್ಟಾಚಾರ ಆರೋಪದ ಮೇಲೆ ಎಫ್‌ಐಆರ್‌ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಯಡಿಯೂರಪ್ಪ ಸರ್ಕಾರ ಭ್ರಷ್ಟಾಚಾರ, ಅತ್ಯಾಚಾರ, ಅನಾಚಾರದಲ್ಲಿ ಮುಳುಗಿದೆ' ...

ಟೆಂಡರ್‌ ಕರೆಯದೇ ಟುಕಿ ಅವರ ಸಂಬಂಧಿಕರಿಗೆ ಈ ಗುತ್ತಿಗೆ ನೀಡಲಾಗಿದೆ ಎಂಬ ಆರೋಪದ ಮೇಲೆ ಪ್ರಾಥಮಿಕ ತನಿಖೆ ನಡೆಸಿ ಪ್ರಕರಣ ದಾಖಲಿಸಲಾಗಿದೆ.

ಇದರಿಂದ ಮಾಜಿ ಸಿಎಂ ನಬಾಮ್ ಟುಕಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!
ವಾಟ್ಸಾಪ್ ಬಳಕೆದಾರರೇ ಎಚ್ಚರ: ಈ ಮೂರು ತಪ್ಪುಗಳು ಮಾಡಿದ್ರೆ ಜೈಲು ಪಾಲಾಗೋದು ಫಿಕ್ಸ್!