
ಇಂದೋರ್ : ಕೇಂದ್ರ ಸರ್ಕಾರದ ಭಿಕ್ಷಾಟನೆ ಮುಕ್ತ ನಗರ ಯೋಜನೆಯ ಭಾಗವಾಗಿ ಮಧ್ಯಪ್ರದೇಶದ ಇಂದೋರ್ ನಗರವನ್ನು ಭಿಕ್ಷಾಟನೆ ಮುಕ್ತಗೊಳಿಸಲು ನಿರ್ಧರಿಸಲಾಗಿದೆ. ಈ ನಿಮಿತ್ತ 2025ರ ಜ.1ರಿಂದಲೇ ಭಿಕ್ಷೆ ನೀಡುವ ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಿಸಲು ನಿರ್ಧರಿಸಲಾಗಿದೆ.‘ಇಂದೋರ್ನಲ್ಲಿ ಭಿಕ್ಷಾಟನೆ ನಿಷೇಧಿಸುವ ಬಗ್ಗೆ ಈಗಾಗಲೇ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಭಿಕ್ಷಾಟನೆ ವಿರುದ್ಧ ನಗರದಲ್ಲಿ ಅಭಿಯಾನ ಪ್ರಾರಂಭಿಸಿದ್ದು ತಿಂಗಳಾಂತ್ಯದವರೆಗೆ ಮುಂದುವರಿಯಲಿದೆ. ಭಿಕ್ಷೆ ನೀಡುವ ಪಾಪದಲ್ಲಿ ಜನರು ಭಾಗಿಯಾಗಬಾರದು’ ಎಂದು ಜಿಲ್ಲಾಧಿಕಾರಿ ಆಶಿಷ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.
ಇತ್ತೀಚಿನ ತಿಂಗಳುಗಳಲ್ಲಿ ಜನರನ್ನು ಭಿಕ್ಷೆಗೆ ಪ್ರೇರಿಸುವ ಹಲವು ಗುಂಪುಗಳನ್ನು ಜಿಲ್ಲಾಡಳಿತ ನಿರ್ಬಂಧಿಸಿದ್ದು, ಭಿಕ್ಷುಕರಿಗೆ ಪುನರ್ವಸತಿ ಕಲ್ಪಿಸಿದೆ.ದೇಶದಲ್ಲಿ 10 ನಗರಗಳನ್ನು ಭಿಕ್ಷಾಟನೆ ಮುಕ್ತ ಮಾಡುವ ಪೈಲಟ್ ಯೋಜನೆಯನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಆರಂಭಿಸಿದೆ. ಈ ನಗರಗಳಲ್ಲಿ ಇಂದೋರ್ ಸಹ ಒಂದು.
ಮಹಾ ಮಂತ್ರಿಮಂಡಲ ವಿಸ್ತರಣೆ: ಎನ್ಸಿಪಿ, ಸೇನೆಯಲ್ಲಿ ಅತೃಪ್ತಿ ಭುಗಿಲು
ಮುಂಬೈ: ಮಹಾರಾಷ್ಟ್ರದಲ್ಲಿ ಭಾನುವಾರ ಮಂತ್ರಿಮಂಡಲ ವಿಸ್ತರಣೆಯಾದ ಬೆನ್ನಲ್ಲೇ ಆಡಳಿತಾರೂಢ ಮಹಾಯುತಿ ಕೂಟದ ಭಾಗವಾದ ಶಿವಸೇನೆ (ಶಿಂಧೆ ಬಣ) ಹಾಗೂ ಎನ್ಸಿಪಿ(ಅಜಿತ್ ಬಣ)ದಲ್ಲಿ ಅಸಮಾಧನ ಭುಗಿಲೆದ್ದಿದೆ.ತಮಗೆ ಶಿವಸೇನೆ ಅಧ್ಯಕ್ಷ ಏಕನಾಥ ಶಿಂಧೆ ಅವರು ಸಚಿವ ಸ್ಥಾನ ಖಚಿತ ಎಂಬ ಭರವಸೆ ನೀಡಿದ್ದರೂ ಇದೀಗ ಸಂಪುಟಕ್ಕೆ ಆಯ್ಕೆಯಾಗದೇ ಇರುವುದರಿಂದ ಬೇಸರಗೊಂಡಿರುವ ಶಾಸಕ ನರೇಂದ್ರ ಭೋಂಡೆಕರ್, ತಾವು ನಿಭಾಯಿಸುತ್ತಿದ್ದ ಪಕ್ಷದ ಉಪ ನಾಯಕ ಹಾಗೂ ಪೂರ್ವ ವಿದರ್ಭ ಜಿಲ್ಲೆಗಳ ಸಂಯೋಜಕ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಅತ್ತ ಎನ್ಸಿಪಿ (ಅಜಿತ್ ಬಣ)ಯ ಹಿರಿಯ ನಾಯಕ ಛಗನ್ ಭುಜಬಲ್ ಅವರೂ ಸಚಿವ ಸ್ಥಾನದಿಂದ ವಂಚಿತರಾಗಿದ್ದು, ತಮ್ಮ ಕ್ಷೇತ್ರದ ಜನರೊಂದಿಗೆ ಮಾತಾಡಿ ಮುಂದಿನ ನಡೆ ನಿರ್ಧರಿಸುವುದಾಗಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ