ಬ್ರಾಹ್ಮ​ಣರು ವಿದೇ​ಶೀ​ಯ​ರು: ಛತ್ತೀ​ಸ್‌​ಗಢ ಸಿಎಂ ತಂದೆ ವಿವಾ​ದಿತ ಹೇಳಿ​ಕೆ

Published : Sep 06, 2021, 11:00 AM ISTUpdated : Sep 06, 2021, 12:00 PM IST
ಬ್ರಾಹ್ಮ​ಣರು ವಿದೇ​ಶೀ​ಯ​ರು: ಛತ್ತೀ​ಸ್‌​ಗಢ ಸಿಎಂ ತಂದೆ ವಿವಾ​ದಿತ ಹೇಳಿ​ಕೆ

ಸಾರಾಂಶ

* ನಂದ ಕುಮಾರ್‌ ಬಾಘೇಲ್‌ ಅವರು ಸಮುದಾಯವೊಂದರ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿ ವಿವಾದ * ಬ್ರಾಹ್ಮ​ಣರು ವಿದೇ​ಶೀ​ಯ​ರು ಛತ್ತೀ​ಸ್‌​ಗಢ ಸಿಎಂ ತಂದೆ ವಿವಾ​ದಿತ ಹೇಳಿ​ಕೆ

ರಾಯ್ಪುರ(ಫೆ.06): ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್‌ ಬಾಘೇಲ್‌ ಅವರ ತಂದೆ ನಂದ ಕುಮಾರ್‌ ಬಾಘೇಲ್‌ ಅವರು ಸಮುದಾಯವೊಂದರ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದಾರೆ. ಈ ಸಂಬಂಧ ಭಾನುವಾರ ಸರ್ವ ಬ್ರಾಹ್ಮಣ ಸಮಾಜದ ದೂರಿನ ಅನ್ವ​ಯ, ನಂದಕುಮಾರ್‌ ವಿರುದ್ಧ ಪೊಲೀ​ಸರು ಪ್ರಕ​ರಣ ದಾಖ​ಲಿ​ಸಿ​ಕೊಂಡಿ​ದ್ದಾ​ರೆ.

 

‘ವಿದೇಶಿಯರಾದ ಬ್ರಾಹ್ಮಣರನ್ನು ಬಹಿಷ್ಕರಿಸಬೇಕು. ಬ್ರಾಹ್ಮಣರನ್ನು ಗ್ರಾಮಗಳಿಗೆ ಬಿಟ್ಟುಕೊಳ್ಳಬಾರದು. ಅಲ್ಲದೆ ಅವರನ್ನು ದೇಶದಿಂದಲೇ ಹೊರಹಾಕಬೇಕು’ ಎಂದು ನಂದ ಕುಮಾರ್‌ ಬಾಘೇಲ್‌(86) ಅವರು ಜನರಿಗೆ ಕರೆ ನೀಡಿದ್ದಾರೆ. ಈ ಕುರಿತ ವಿಡಿ​ಯೋ ಸಾಮಾ​ಜಿಕ ಮಾಧ್ಯ​ಮ​ದ​ಲ್ಲ​ದೆ’ ಎಂದು ಸರ್ವ ಬ್ರಾಹ್ಮಣ ಸಮಾಜ ದೂರಿದೆ.

ಈ ಬಗ್ಗೆ ಸಿಎಂ ಭೂಪೇಶ್‌ ಪ್ರತಿ​ಕ್ರಿ​ಯಿ​ಸಿದ್ದು, ‘ಸಮುದಾಯವೊಂದರ ಕುರಿತಾಗಿ ತಮ್ಮ ತಂದೆ ನೀಡಿದ ಹೇಳಿಕೆಯಿಂದ ನೋವಾಗಿದ್ದು, ಅವರ ವಿರುದ್ಧ ನಮ್ಮ ಸರ್ಕಾರ ಮತ್ತು ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ’ ಎಂದಿ​ದ್ದಾ​ರೆ.

ಭೂಪೇಶ್‌ ಬಾಘೇಲ್‌ ಅವರ ತಂದೆ ಈ ಹಿಂದೆ ಶ್ರೀರಾಮನ ಕುರಿತಾಗಿಯೂ ಇದೇ ರೀತಿಯ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್