ಇಂದು ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ₹80000 ಕೋಟಿ ವೆಚ್ಚದ ತೈಲ ಘಟಕಕ್ಕೆ ನಿನ್ನೆ ಬೆಂಕಿ!

Kannadaprabha News, Ravi Janekal |   | Kannada Prabha
Published : Apr 21, 2026, 08:08 AM IST
Fire breaks out at oil refinery PM Modi was to inaugurate today

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಬೇಕಿದ್ದ ರಾಜಸ್ಥಾನದ ಪಚ್ಪದ್ರಾದಲ್ಲಿನ ನೂತನ ತೈಲ ಶುದ್ಧೀಕರಣ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ಘಟನೆಯಿಂದಾಗಿ ₹80000 ಕೋಟಿ ವೆಚ್ಚದ, ದೇಶದ ಮೊದಲ ಗ್ರೀನ್‌ಫೀಲ್ಡ್‌ ರಿಫೈನರಿಯ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಜೈಪುರ (ಏ.21): ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ಮಂಗಳವಾರ ಉದ್ಘಾಟಿಸಬೇಕಿದ್ದ ₹80000 ಕೋಟಿ ರು. ವೆಚ್ಚದ ತೈಲ ಶುದ್ಧೀಕರಣ ಘಟಕದಲ್ಲಿ ಸೋಮವಾರ ಬೆಂಕಿ ಅವಘಡ ಸಂಭವಿಸಿದ್ದು, ಭಾರೀ ಹಾನಿಯಾಗಿದೆ. ಹೀಗಾಗಿ ಉದ್ಘಾಟನೆ ಮುಂದೂಡಲಾಗಿದೆ.

ರಾಜಸ್ಥಾನದ ಬಲೋತ್ರಾದ ಪಚ್ಪದ್ರಾದಲ್ಲಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೆಷನ್ ಮತ್ತು ರಾಜ್ಯ ಸರ್ಕಾರದ ಜಂಟಿ ಉದ್ಯಮದಲ್ಲಿ ಘಟಕ ನಿರ್ಮಾಣವಾಗಿತ್ತು. ಇದು ದೇಶದ ಮೊದಲ ಗ್ರೀನ್‌ಫೀಲ್ಡ್‌ ರಿಫೈನರಿ ಎನ್ನುವ ಹೆಗ್ಗಳಿಕೆಗೂ ಪಾತ್ರವಾಗಿದೆ.

ಆದರೆ ಸೋಮವಾರ ರಿಫೈನರಿಯ ಕಚ್ಚಾ ಭಟ್ಟಿ ಇಳಿಸುವಿಕೆ ಘಟಕದ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ.19ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ತಹಬದಿಗೆ ತರಲು ಯತ್ನಿಸಿವೆ. ಘಟನೆ ಕಾರಣ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಉದ್ಘಾಟನೆ ಯಾವಾಗ?

ಬೆಂಕಿ ಅವಘಡದಿಂದಾಗಿ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಈ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು X ನಲ್ಲಿ ಪೋಸ್ಟ್‌ ಮಾಡಿದ್ದು,

HPCL ರಾಜಸ್ಥಾನ ರಿಫೈನರಿ ಲಿಮಿಟೆಡ್ (HRRL) ನಲ್ಲಿರುವ ಕಚ್ಚಾ ಬಟ್ಟಿ ಇಳಿಸುವಿಕೆ ಘಟಕ (CDU) ಬಳಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಕಾರಣ(ಗಳನ್ನು)ತಿಳಿಯಲು ಮತ್ತು ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ತನಿಖೆಯನ್ನು ಪ್ರಾರಂಭಿಸಲಾಗಿದೆ. ಸಮರ್ಪಣೆಗೆ ಪರಿಷ್ಕೃತ ದಿನಾಂಕವನ್ನು ಸೂಕ್ತ ಸಮಯದಲ್ಲಿ ಘೋಷಿಸಲಾಗುವುದು' ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ಇಂದು ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ₹80000 ವೆಚ್ಚದ ಕೋಟಿ ತೈಲ ಘಟಕಕ್ಕೆ ನಿನ್ನೆ ಬೆಂಕಿ!
ಮೋದಿ ಭೇಟಿಯಿಂದ ಸ್ಟಾರ್​ ಆಗಿರೋ ಈ ಅಂಗಡಿಯವ ನಿಜಕ್ಕೂ ಯಾರು? ಪ್ರಧಾನಿ ಬಗ್ಗೆ ಯುವಕ ಹೇಳಿದ್ದೇನು