ದೆಹೆಲಿ ಸಂಸದರ ಫ್ಲ್ಯಾಟ್‌ನಲ್ಲಿ ಹೊತ್ತಿಕೊಂಡ ಬೆಂಕಿ, ಸ್ಥಳಕ್ಕೆ ದೌಡಾಯಿಸಿದ 6 ಅಗ್ನಿಶಾಮಕದಳ

Published : Oct 18, 2025, 02:54 PM IST
fire delhi flat

ಸಾರಾಂಶ

ದೆಹೆಲಿ ಸಂಸದರ ಫ್ಲ್ಯಾಟ್‌ನಲ್ಲಿ ಹೊತ್ತಿಕೊಂಡ ಬೆಂಕಿ, ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳ, ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ತೀವ್ರತೆಗೆ ಫ್ಲ್ಯಾಟ್ ಸಂಪೂರ್ಣ ಸುಟ್ಟುಕರಕಲಾಗಿದೆ. ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ.

ನವದೆಹಲಿ (ಅ.08) ರಾಷ್ಟ್ರ ರಾಜಧಾನಿ ದೆಗಲಿಯ ರಾಜ್ಯಸಭಾ ಸದಸ್ಯರ ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಫ್ಲ್ಯಾಟ್ ಸಂಪೂರ್ಣ ಸುಟ್ಟು ಕಲಕರಲಾಗಿದೆ. ಬೆಂಕಿಯ ಕೆನ್ನಾಲಗೆ ಅಕ್ಕ ಪಕ್ಕದ ಫ್ಲ್ಯಾಟ್‌ಗೂ ವ್ಯಾಪಿಸಿದೆ. 6 ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ತೀವ್ರಗೊಳ್ಳುತ್ತಿದ್ದಂತೆ ಅಕ್ಕ ಪಕ್ಕದ ಫ್ಲ್ಯಾಟ್‌ನಲ್ಲಿದ್ದವರನ್ನು ತುರ್ತುಗಾಗಿ ಹೊರಗೆ ಕಳುಹಿಸಲಾಗಿದೆ. ಅದೃಷ್ಠ ಪ್ರಕಾರ ಯಾವುದೇ ಸಾವು ನೋವು ಸಂಭಿವಿಸಿಲ್ಲ ಅನ್ನೋ ಮಾಹಿತಿ ಲಭ್ಯವಾಗಿದೆ.

ಹಲವು ಫ್ಲ್ಯಾಟ್‌ಗೆ ಆವರಿಸಿಕೊಂಡ ಬೆಂಕಿ

ರಾಜ್ಯಸಭಾ ಸದಸ್ಯರ ಮನೆಯಲ್ಲಿ ಕಾಣಿಸಿಕೊಂಡ ಬೆಂಕಿ ಅಕ್ಕ ಪಕ್ಕದ ಫ್ಲ್ಯಾಟ್‌ಗೂ ಹಬ್ಬಿದೆ. 6 ಅಗ್ನಿಶಾಮಕ ದಳ ಹಾಗೂ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸುರಕ್ಷಿತಾ ಕ್ರಮವಾಗಿ ಇತರ ಫ್ಲ್ಯಾಟ್‌ಗಳಿಂದ ಜನರನ್ನು ಸುರಕ್ಷಿತವಾಗಿ ಹೊರಗೆ ತರೆತರಲಾಗಿದೆ. ಇದೀಗ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ. ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕಾರಣ ನಂದಿಸುವ ಕಾರ್ಯಾಚರಣೆ ವಿಳಂಬವಾಗಿದೆ.

ಸಂಸತ್ತಿನಿಂದ 200 ಮೀಟರ್ ದೂರದಲ್ಲಿರುವ ಸಂಸರದ ಅಪಾರ್ಟ್‌ಮೆಂಟ್

ದೆಹೆಲಿಯ ಸಂಸತ್ತಿನಿಂದ ಕೇವಲ 200 ಮೀಟರ್ ದೂರದಲ್ಲಿರುವ ಸಂಸದರ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪೊಲೀಸರು ಅಲರ್ಟ್ ಆಗಿದ್ದಾರೆ. ಇತ್ತ ಟ್ರಾಫಿಕ್ ಮಾರ್ಗ ಬದಲಿಸಲಾಗಿದೆ. ಅಗ್ನಿಶಾಮಕ ದಳ ಹಾಗೂ ಪೊಲೀಸರ ಕಾರ್ಯಾಚರಣೆಗೆ ಅನುವು ಮಾಡಿಕೊಡಲಾಗಿದೆ.

ಅದೃಷ್ಠವಶಾತ್ ಯಾರಿಗೂ ನೋವಾಗಿಲ್ಲ

ಬೆಂಕಿ ಕಾಣಿಸಿಕೊಂಡ ಫ್ಲ್ಯಾಟ್ನನಲ್ಲಿ ಅಗ್ನಿಗೆ ಯಾರು ಸಿಲುಕಿಲ್ಲ. ಅಕ್ಕ ಪಕ್ಕದ ಫ್ಲ್ಯಾಟ್‌ನಲ್ಲಿದ್ದವರನ್ನೂ ಹೊರಗೆ ಕಳುಹಿಸಿರುವ ಕಾರಣ ಯಾವುದೇ ಪ್ರಾಣ ಹಾನಿಯಾಗಿಲ್ಲ. ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

2020ರಲ್ಲಿ ಮೋದಿ ಉದ್ಘಾಟನೆ ಮಾಡಿದ್ದ ಫ್ಲ್ಯಾಟ್

ಸಂಸದರಿಗೆ ವಸತಿ ಸಮುಚ್ಚಯ ಕಟ್ಟವಾಗಿದೆ. ಹಲವು ಮನೆಗಳಿರುವ ಸಂಸರದ ಅಪಾರ್ಟ್‌ಮೆಂಟ್ ಒಂದು ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. 2020ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಸದರ ಹೊಸ ವಸತಿ ಸಮುಚ್ಚಯ ಉದ್ಘಾಟಿಸಿದ್ದರು. ಇದರಲ್ಲಿ 76 ಫ್ಲ್ಯಾಟ್‌ಗಳಿವೆ. 80 ವರ್ಷಕ್ಕೂ ಹಳೇ 8 ಬಂಗಲೆಗಳನ್ನು ಮರು ಅಭಿವೃದ್ಧಿ ಮಾಡಿ ಈ ವಸತಿ ಸಮುಚ್ಚಯ ಕಟ್ಟಲಾಗಿತ್ತು. ಈ ವಸತಿ ಸಮುಚ್ಚಯಗಳಿಂದ ಶೇಕಡಾ 14ರಷ್ಟು ವೆಚ್ಚ ಸಂಸರದ ವೆಚ್ಚ ಕಡಿಮೆಯಾಗುತ್ತಿದೆ ಎಂದು ವರದಿಗಳು ಹೇಳುತ್ತಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಗರ್ಭ ಶ್ರೀಮಂತನೆಂದು ಎಂಜಿನಿಯರ್‌ನನ್ನ ಮದುವೆಯಾದಳು... ಫಸ್ಟ್‌ ನೈಟ್‌ನಲ್ಲೇ ಬಯಲಾಯ್ತು ಕರಾಳ ಸತ್ಯ!
ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ