
ತಿರುಪತಿ[ಡಿ.09]: ಪ್ರಸಿದ್ಧ ತಿರುಮಲ ದೇವಸ್ಥಾನದ ಲಡ್ಡು ತಯಾರಿಸುವ ಅಡುಗೆ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡು, ಆತಂಕ ಸೃಷ್ಟಿಯಾದ ಘಟನೆ ಭಾನುವಾರ ನಡೆದಿದೆ.
ಬೆಂಕಿಯ ಪರಿಣಾಮ ನೋಡನೋಡುತ್ತಿದ್ದಂತೆ ದಟ್ಟಹೊಗೆ ಮತ್ತು ಬೆಂಕಿ ಕೋಣೆಯನ್ನು ಅವರಿಸಿಕೊಂಡಿತ್ತು. ಕೂಡಲೇ ಅಗ್ನಿಶಾಮಕ ದಳ ಪಡೆಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಬೆಂಕಿಯ ಕೆನ್ನಾಲಿಗೆ ಹರಡದಂತೆ ತಡೆದಿದ್ದಾರೆ.
ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದಿಲ್ಲವಾದರೂ, ಪ್ರಾಥಮಿಕ ತನಿಖೆಯ ಪ್ರಕಾರ ಲಡ್ಡು ತಯಾರಿಕೆ ವೇಳೆ ಸಿಬ್ಬಂದಿಯೋರ್ವ ದೊಡ್ಡ ಪಾತ್ರೆಯಲ್ಲಿ ಎಣ್ಣೆ ಸುರಿಯುತ್ತಿರುವಾಗ ಒಲೆಯ(ಸ್ಟೌ) ಬೆಂಕಿ ತಾಗಿ, ಬೆಂಕಿ ಹೊತ್ತಿಕೊಂಡಿದೆ. ಇದು ಕೋಣೆಯಲ್ಲಿ ಶೇಖರಿಸಿಟ್ಟಿದ್ದ ತುಪ್ಪ ಮತ್ತು ಎಣ್ಣೆಯ ಡಬ್ಬಗಳಿಗೂ ವ್ಯಾಪಿಸಿದೆ. ಜಾಗೃತಗೊಂಡ ಸಿಬ್ಬಂದಿ ಒಲೆಗಳನ್ನೆಲ್ಲಾ ನಂದಿಸಿದರೂ ಅಗ್ನಿಯ ತೀವ್ರತೆ ತಡೆಯಲಾಗಲಿಲ್ಲ.
ಘಟನೆ ಕುರಿತು ದೇವಸ್ಥಾನ ಆಡಳಿತ ಮಂಡಳಿ(ಟಿಟಿಡಿ) ತನಿಖೆಗೆ ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ