Tirupati: 6 ದಿನಗಳ ಅಂತರದಲ್ಲಿ ತಿರುಪತಿಯಲ್ಲಿ ಮತ್ತೊಂದು ಅವಘಡ!

Published : Jan 13, 2025, 09:29 PM IST
Tirupati: 6 ದಿನಗಳ ಅಂತರದಲ್ಲಿ ತಿರುಪತಿಯಲ್ಲಿ ಮತ್ತೊಂದು ಅವಘಡ!

ಸಾರಾಂಶ

ತಿರುಪತಿಯಲ್ಲಿ ಆರು ದಿನಗಳ ಅಂತರದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ತಿರುಮಲ ತಿರುಪತಿಯ ವೆಂಕಟೇಶ್ವರ ದೇವಸ್ಥಾನದ 47ನೇ ಲಡ್ಡು ವಿತರಣಾ ಕೌಂಟರ್‌ನಲ್ಲಿ ಭಾರೀ ಅಗ್ನಿ ಅನಾಹುತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.

ಹೈದರಾಬಾದ್‌ (ಜ.13): ತಿರುಪತಿಯಲ್ಲಿ ಆರು ದಿನಗಳ ಅಂತರದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಅದೃಷ್ಟವಶಾತ್‌ ಈ ಬಾರಿ ಯಾವುದೇ ಪ್ರಾಣಹಾನಿಯಾಗಿಲ್ಲ ಅನ್ನೋದು ಸಮಾಧಾನದ ವಿಚಾರವಾಗಿದೆ. ಸೋಮವಾರ ಮಧ್ಯಾಹ್ನ ತಿರುಪತಿ ದೇವಸ್ಥಾನದ ಆವರಣದಲ್ಲಿಯೇ ಅಗ್ನಿ ಅವಘಡ ಸಂಭವಿಸಿದೆ. ತಿರುಮಲ ತಿರುಪತಿಯ ವೆಂಕಟೇಶ್ವರ ದೇವಸ್ಥಾನದ 47ನೇ ಲಡ್ಡು ವಿತರಣಾ ಕೌಂಟರ್‌ನಲ್ಲಿ ಭಾರೀ ಅಗ್ನಿ ಅನಾಹುತವಾಗಿದೆ. ತಕ್ಷಣವೇ ಎಚ್ಚೆತ್ತುಕೊಂಡ ದೇವಸ್ಥಾನದ ಆಡಳಿತ ಮಂಡಳಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ. ವೈಕುಂಠ ಏಕಾದಶಿ ನಿಮಿತ್ತ 10 ದಿನಗಳ ವೈಕುಂಠ ದ್ವಾರ ದರ್ಶನದಲ್ಲಿ ಹಾದು ಹೋಗಲು ಪ್ರತಿದಿನ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ. 6 ದಿನಗಳ ಹಿಂದೆ ವೈಕುಂಠ ಏಕಾದಶಿಯ ವೈಕುಂಠ ದ್ವಾರ ದರ್ಶನ ಟಿಕೆಟ್‌ಗಾಗಿ ನಡೆದ ನೂಕುನುಗ್ಗಲಿನ ವೇಳೆ ಕಾಲ್ತುಳಿತ ಉಂಟಾಗಿ 6 ಮಂದಿ ಸಾವು ಕಂಡಿದ್ದರು.

ಬೆಂಕಿ ಹೊತ್ತಿಕೊಳ್ಳಲು ಕಾರಣವೇನು?: 47ನೇ ಕೌಂಟರ್‌ನಲ್ಲಿದ್ದ ಯುಪಿಎಸ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ ಉಂಟಾಗಿತ್ತು. ಇದರಿಂದಾಗಿ ಬೆಂಕಿ ಹೊತ್ತಿಕೊಂಡು ದಟ್ಟವಾದ ಹೊಗೆ ಆವರಿಸಿತ್ತು. ಈ ವಿಚಾರ ಗೊತ್ತಾದ ಬೆನ್ನಲ್ಲಿಯೇ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಆಗಬಹುದಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.ಬೆಂಕಿ ಕಾಣಿಸಿಕೊಂಡ ಕಾರಣ ಪ್ರಸಾದ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಓಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಎಂದು ತಿಳಿದುಬಂದಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

6 ಭಕ್ತರ ಸಾವಿಗೆ ಕಾರಣವಾಗಿದ್ದ ಕಾಲ್ತುಳಿತ: ಜನವರಿ 10 ರಿಂದ ತಿರುಪತಿ ದೇವಸ್ಥಾನದಲ್ಲಿ ವೈಕುಂಟ ದ್ವಾರ ತೆರೆದಿದೆ. ಆದರೆ, ವೈಕುಂಠ ಏಕಾದಶಿಗೂ ಮುನ್ನವೇ ತಿರುಪತಿಯಲ್ಲಿ ದಾರುಣ ಘಟನೆ ನಡೆಸಿತ್ತು. ಕಳೆದ ಬುಧವಾರ ವೈಕುಂಠ ದ್ವಾರ ದರ್ಶನದ ಟಿಕೆಟ್‌ಗಾಗಿ ಭಾರೀ ಪ್ರಮಾಣದಲ್ಲಿ ನೂಕುನುಗ್ಗಲು ಉಂಟಾಗಿದ್ದರಿಂದ 6 ಮಂದಿ ಭಕ್ತರು ದಾರುಣ ಸಾವು ಕಂಡಿದ್ದರು. ಲಕ್ಷಾಂತರ ಭಕ್ತರ ಆಗಮನದಿಂದ ತಿರುಮಲ ಕ್ಷೇತ್ರ ಸದಾ ಸಡಗರದಿಂದ ಕೂಡಿರುತ್ತದೆ. ಇನ್ನು ವೈಕುಂಠ ಏಕಾದಶಿ ಅಂದರೆ ಅದಕ್ಕೆ ಇನ್ನಿಲ್ಲದ ಮಹತ್ವ. ಇದೇ ಕಾರಣಕ್ಕೆ ತಿರುಪತಿಯಲ್ಲಿ ಜನಸಾಗರವೇ ಹರಿದು ಬರುತ್ತಿದೆ.

ತಿರುಪತಿಯಲ್ಲಿ ಭಾರೀ ಕಾಲ್ತುಳಿತ, 6 ಮಂದಿ ದುರ್ಮರಣ, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ

ಘಟನೆ ನಡೆದ ಬೆನ್ನಲ್ಲಿಯೇ ಆಂಧ್ರ ಪ್ರದೇಶ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದು, ಘಟನೆಯ ಸಂಬಂಧ ಇಬ್ಬರು ಡಿಸಿಪಿಗಳನ್ನು ಅಮಾನತು ಮಾಡಲಾಗಿದೆ. ಅದರೊಂದಿಗೆ ಮೃತ ಭಕ್ತರಿಗೆ 25 ಲಕ್ಷ ರೂಪಾಯಿ ಪರಿಹಾರವನ್ನೂ ಘೋಷಣೆ ಮಾಡಲಾಗಿದೆ.

ವೈಕುಂಠ ಏಕಾದಶಿ ಸಂಭ್ರಮ: ತಿರುಪತಿ ಕಾಲ್ತುಳಿತದ ಗಾಯಾಳುಗಳಿಗೆ ತಿಮ್ಮಪ್ಪನ ವಿಶೇಷ ದರ್ಶನ!

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ಕೆಎಸ್‌ಸಿಎ ಚುನಾವಣೆ - ಅಸ್ತಿತ್ವದಲ್ಲೇ ಇಲ್ಲದ ಕ್ಲಬ್‌ಗಳ ಹೆಸರು ಮತದಾನ ಪಟ್ಟಿಯಲ್ಲಿ ಪತ್ತೆ!
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌