
ಲಖನೌ(ಮಾ.04): ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ಸಂಕೀರ್ಣವನ್ನು ವಿಸ್ತರಿಸುವ ಉದ್ದೇಶದಿಂದ ದೇಗುಲಕ್ಕೆ ಹೊಂದಿಕೊಂಡಿದ್ದ 676.85 ಚದರ ಮೀಟರ್ ಭೂಮಿಯನ್ನು 1 ಕೋಟಿ ರು. ನೀಡಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖರೀದಿ ಮಾಡಿದೆ.
ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ಒಂದು ಕೋಟಿ ರು. ನೀಡಿ ಮಾಲಿಕ ಸ್ವಾಮಿ ದೀಪ್ನಾರಾಯಣ್ ಅವರಿಂದ ಭೂಮಿಯನ್ನು ಕೊಂಡುಕೊಂಡಿದ್ದಾರೆ. ಜಮೀನಿನ ನೋಂದಣಿ ಕಾರ್ಯ ಮಂಗಳವಾರ ಪೂರ್ಣಗೊಂಡಿದೆ.
ಟ್ರಸ್ಟ್ ಬಳಿ 70 ಎಕರೆ ಜಾಗ ಇದೆ. ಅದನ್ನು 107 ಎಕರೆಗೆ ವಿಸ್ತರಿಸಿ ಅಲ್ಲಿ ಮ್ಯೂಸಿಯಂ, ಗ್ರಂಥಾಲಯ, ರಾಮನ ಜೀವನವನ್ನು ಪ್ರಚುರಪಡಿಸುವ ಫೋಟೋ ಗ್ಯಾಲರಿ ಒಳಗೊಂಡ ಬೃಹತ್ ಸಂಕೀರ್ಣ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಮಂದಿರ ನಿರ್ಮಾಣ ಕಾರ್ಯಕ್ಕೆ ಈಗಾಗಲೇ 2100 ಕೋಟಿ ರು. ನಿಧಿ ಸಂಗ್ರಹವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ