
ಗುಜರಾತ್(ಸೆ.12): ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಬಿಜೆಪಿ ಹೈಕಮಾಂಡ್ ಸರ್ಕಾರದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ವಿಜಯ್ ರೂಪಾನಿ ಬದಲು ಭೋಪೇಂದ್ರ ಬಾಯಿ ಪಟೇಲ್ ಗುಜರಾತ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ವಿಶೇಷ ಅಂದರೆ ಭೂಪೇಂದ್ರ ಇದೇ ಮೊದಲ ಬಾರಿಗೆ ಶಾಸಕನಾಗಿ ಚುನಾಯಿತರಾಗಿದ್ದರು. ಆಗಲೇ ಸಿಎಂ ಪಟ್ಟ ಒಲಿದು ಬಂದಿದೆ.
ಗುಜರಾತ್ ನೂತನ ಸಿಎಂ ಭೂಪೇಂದ್ರ ಪಟೇಲ್ ಅಚ್ಚರಿ ಆಯ್ಕೆ ಹಿಂದಿದೆ ಪ್ರಮುಖ ಕಾರಣ!
ಸಿಎಂ ರೇಸ್ನಲ್ಲಿ ಭೂಪೇಂದ್ರ ಪಟೇಲ್ ಹೆಸರು ಎಲ್ಲೂ ಕೇಳಿ ಬಂದಿಲ್ಲ. ಕಾರಣ 2017ರ ಚುನಾವಣೆಯಲ್ಲಿ ಮೊದಲ ಬಾರಿಗೆ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದರು. ಕಾಂಗ್ರೆಸ್ ಅಭ್ಯರ್ಥಿ ಶಶಿಕಾಂತ್ ಪಟೇಲ್ ವಿರುದ್ಧ ಬರೋಬ್ಬರಿ 1 ಲಕ್ಷ ಮತಗಳ ಅಂತರದಿಂದ ಚುನಾವಣೆ ಗೆದ್ದಿದ್ದರು. ಮೊದಲ ಬಾರಿ ಶಾಸಕನಾದ ಭೂಪೇಂದ್ರ ಪಟೇಲ್ಗೆ ಇದೀಗ ಬಿಜೆಪಿ ಹೈಕಮಾಂಡ್ ಅತೀ ದೊಡ್ಡ ಹುದ್ದೆ ನೀಡಿದೆ.
ಭೂಪೇಂದ್ರ ಪಟೇಲ್ ಗಟೋಲ್ದಿಯಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಮತ್ತೊಂದು ವಿಶೇಷ ಅಂದರೆ ಮಾಜಿ ಸಿಎಂ ಆನಂದಿ ಬೆನ್ ಪಟೇಲ್ ರಾಜ್ಯಪಾಲರಾಗಿ ಬಡ್ತಿ ಪಡೆದ ಬಳಿಕ ಗಟೋಲ್ದಿಯಾ ಕ್ಷೇತ್ರದ ಟಿಕೆಟ್ ಭೂಪೇಂದ್ರ ಪಟೇಲ್ ಪಾಲಾಯಿತು. ಮೊದಲ ಚುನಾವಣೆಯಲ್ಲೇ ಭೂಪೇಂದ್ರ ಪಟೇಲ್ ತಮ್ಮ ಸಾಮರ್ಥ್ಯ ತೋರಿಸಿದರು.
ಸೆ.13ಕ್ಕೆ ಗುಜರಾತ್ ನೂತನ ಸಿಎಂ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ!
ಬಿಜೆಪಿ ಹೈಕಮಾಂಡ್ ಸಿಎಂ ಸ್ಥಾನಕ್ಕೆ ಕೆಲ ಹೆಸರುಗಳನ್ನು ಅಂತಿಮಗೊಳಿಸಿತ್ತು. ಇತ್ತ ನಿರ್ಗಮಿತಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಭೂಪೇಂದ್ರ ಪಟೇಲ್ ಹೆಸರು ಸೂಚಿಸಿದ್ದಾರೆ. ಹೈಕಮಾಂಡ್ ಅಂತಿಮಗೊಳಿಸಿದ ಪಟ್ಟಿಯಲ್ಲೂ ಇವರ ಹೆಸರಿತ್ತು. ಹೀಗಾಗಿ ಮಿಂಚಿನ ವೇಗದಲ್ಲಿ ಆಯ್ಕೆ ನಡೆದಿದೆ. ಭೂಪೇಂದ್ರ ಪೇಟಲ್ ನಾಳೆ(ಸೆ.13) ಗುಜರಾತ್ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ