
ಚೆನ್ನೈ(ಅ.27): ದೀಪಾವಳಿ(Diwali) ಹಬ್ಬಕ್ಕೆ ತಮಿಳುನಾಡಿನಾದ್ಯಂತ(Tamil Nadu) ಹೊಸ ಹೊಸ ಪಟಾಕಿ(Firecracker) ಅಂಗಡಿಗಳು ತಲೆ ಎತ್ತಿವೆ. ಹಲವೆಡೆ ಅನುಮತಿ ಪಡೆಯದೇ ಪಟಾಕಿ ಅಂಗಡಿಗಳನ್ನು ಸ್ಥಾಪಿಸಿರುವ ಬಗ್ಗೆ ವರದಿಯಾಗಿದೆ. ಹೀಗಿರುವಾಗ ತಮಿಳುನಾಡಿನ ಕಲ್ಲಕುರಿಚಿ(Kallakurichi) ಜಿಲ್ಲೆಯ ಶಂಕರಪುರಂನಲ್ಲಿ(Sankarapuram) ಪಟಾಕಿ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದೆ. ಪರಿಣಾಮವಾಗಿ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಈ ದುರಂತದಲ್ಲಿ ಐವರು ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ಮೃತರ ಸಂಖ್ಯೆ ಏರುವ ಸಾಧ್ಯತೆಗಳಿವೆ.
'ದೀಪಾವಳಿಗೆ ಮುಂಚಿತವಾಗಿ ಶಂಕರಪುರಂನಲ್ಲಿ ಆರಂಭಿಸಿದ್ದ ಪಟಾಕಿ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಐವರು ಸಾವಿಗೀಡಾಗಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ದೊಡ್ಡ ಅಂಗಡಿಯಲ್ಲಿ ಪಟಾಕಿ ಸ್ಫೋಟಗೊಂಡು ತಗುಲಿದ ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದೆ. ಪಟಾಕಿ ಅಂಗಡಿ ಬಳಿಯಿದ್ದ ಬೇಕರಿಯೊಂದಕ್ಕೂ ಬೆಂಕಿ ವ್ಯಾಪಿಸಿ ಭಯಂಕರ ಶಬ್ಧದೊಂದಿಗೆ ಸಿಲಿಂಡರ್ ಸ್ಫೋಟಗೊಂಡಿದೆ. ಸುಮಾರು ನೂರು ಮೀಟರ್ ಎತ್ತರಕ್ಕೆ ಸಿಲಿಂಡರ್ ಎಹಾರಿದೆ ಎನ್ನಲಾಗಿದೆ. ಅಪಘಾತದ ಸ್ಥಳದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಜಮಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ.
ಸ್ಫೋಟದಲ್ಲಿ ಗಾಯಗೊಂಡಿರುವವರನ್ನು ಕಲ್ಲಕುರಿಚಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ.
ಇನ್ನು ಪಟಾಕಿ ಅಂಗಡಿಯಲ್ಲಿ ಸ್ಫೋಟ ಸಂಭವಿಸಿ ಹಬ್ಬಿಕೊಂಡ ಬೆಂಕಿಯ ದೃಶ್ಯಗಳು ವೆಬ್ ಸೈಟ್ ಗಳಲ್ಲಿ ವೇಗವಾಗಿ ಶೇರ್ ಆಗುತ್ತಿವೆ. ಇದೇ ವೇಳೆ ಕಲ್ಲಕುರಿಚಿ ಜಿಲ್ಲೆಯಲ್ಲಿ ನಿಯಮ ಉಲ್ಲಂಘಿಸಿ ಪಟಾಕಿ ಅಂಗಡಿಗಳು ಕಂಡುಬಂದರೆ ಕೂಡಲೇ ಸೀಲ್ ಹಾಕಲಾಗುವುದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ