
ಸುಲ್ತಾನಪುರ(ಮಾ.12): ಭಾರತದಲ್ಲಿ ರಸ್ತೆ ಅಪಘಾತ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅತೀ ವೇಗ, ನಿಯಮಗಳ ನಿರ್ಲಕ್ಷ್ಯ ಸೇರಿದಂತೆ ಹಲವು ಕಾರಣಗಳಿಂದ ಅಪಘಾತ ಸಂಭವಿಸುತ್ತಿದೆ. ಅದರಲ್ಲೂ ಎಕ್ಸ್ಪ್ರೆಸ್ವೇನಲ್ಲಿ ಅತೀವೇಗದ ಪರಿಣಾಮ ಅಪಘಾತದ ಪ್ರಮಾಣ ಜಾಸ್ತಿಯಾಗಿದೆ. ಇದೀಗ ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್ಪ್ರೆಸ್ವೇನಲ್ಲಿ ಅತೀವೇಗದಿಂದ ಕಾರು ಟ್ರಕ್ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ವೇಳೆ ಯುಪಿಯ ಸುಲ್ತಾನಪುರ್ ಜಿಲ್ಲೆ ಬಳಿ ಈ ಘಟನೆ ನಡೆದಿದೆ.
ಮೃತರನ್ನು 19 ವರ್ಷದ ಸಾಹಿಲ್ ಖಂದ್, ಶಾರುಖ್(25), ಸೈನಾ ಖಟೂನ್(37), ಜಮೀಲಾ(33) ಹಾಗೂ ರುಕ್ಸರ್(31) ಎಂದು ಗುರುತಿಸಲಾಗಿದೆ. ದೆಹಲಿಯಿಂದ ಬಿಹಾರದ ಸಸರಾಂಗೆ ತೆರಳಲು ಪೂರ್ವಾಂಚಲ ಎಕ್ಸ್ಪ್ರೆಸ್ವೇ ಮೂಲಕ ಸಾಗಿದ್ದಾರೆ. ಅತೀ ವೇಗದದಲ್ಲಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.
ಎಕ್ಸ್ಪ್ರೆಸ್ವೇ ಲೋಕಾರ್ಪಣೆಯಾದ ದಿನವೇ ಅಪಘಾತ, ಮೂವರಿಗೆ ಗಾಯ!
ಅಪಘಾತ ಸಂಭವಿಸಿದ ಬೆನ್ನಲ್ಲೇ ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲಾಗಿದೆ. ಆದರೆ ಆಸ್ಪತ್ರೆ ಸೇರುವ ಮೊದಲೇ ಐವರು ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಿಂದ ಪೂರ್ವಾಂಚಲ್ ಎಕ್ಸ್ಪ್ರೆಸ್ವೇನಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಸಂಭವಿಸಿತ್ತು.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಮೃತರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಭೀಕರ ಅಪಘಾತ ಎಕ್ಸ್ಪ್ರೆಸ್ವೇನಲ್ಲಿನ ಅತೀವೇಗದ ಚಾಲನೆಗೆ ನೀಡಿದ ಮುನ್ನಚ್ಚೆರಿಕಿಯಾಗಿದೆ. ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳ ಪ್ರಮಾಣ ಇತರ ಹೆದ್ದಾರಿಗಳಿಗಿಂತ ಕಡಿಮೆಯಾಗಿದೆ. ಆದರೆ ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳು ಅತ್ಯಂತ ಭೀಕರ ಅನ್ನೋ ಅಭಿಪ್ರಾಯಗಳು ವ್ಯಕ್ತವಾಗಿದೆ. ಇತ್ತ ಎಕ್ಸ್ಪ್ರೆಸ್ವೇನಲ್ಲಿ ಅಪಘಾತ ಸಂಖ್ಯೆ ಹೆಚ್ಚಾಗುತ್ತಿದೆ. ಎಕ್ಸ್ಪ್ರೆಸ್ವೇ ಅವೈಜ್ಞಾನಿಕ ಅನ್ನೋ ಮಾತುಗಳು ಕೇಳಿಬಂದಿದೆ.
ರಸ್ತೆ ಅಪಘಾತ ವೇಳೆ ಗಾಯಾಳುಗಳ ಚಿಕಿತ್ಸೆಗೆ ತರಬೇತಿ: ಏನಿದು ರಾಸ್ತ ಟ್ರೈನಿಂಗ್?
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದ್ದಾರೆ. ಈ ಹೆದ್ದಾರಿಯಲ್ಲೂ ಅಪಘಾತ ಸಂಖ್ಯೆ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಹಿಂದೆ ಇದ್ದ ಮೈಸೂರು ಬೆಂಗಳೂರು ರಸ್ತೆಯಲ್ಲಿನ ಅಪಘಾತ ಸಂಖ್ಯೆ ನೋಡಿದ್ದೀರಾ ಅನ್ನೋ ತಿರುಗೇಟುಗಳು ಕೂಡ ವ್ಯಕ್ತವಾಗಿದೆ. ಆದರೆ ಎಕ್ಸ್ಪ್ರೆಸ್ವೇನಲ್ಲಿ ನಿಯಮಿತ ವೇಗದಲ್ಲಿ ಸಂಚರಿಸಿದರೆ ಒಳಿತು. ಇಲ್ಲದಿದ್ದರೆ ಅಪಾಯ ಹೆಚ್ಚು ಅನ್ನೋದು ಸತ್ಯ.
ಒಡಿಶಾದ ಅಂಗುಲು ಜಿಲ್ಲಿಯೆಲಲ್ಲಿ ಇಂದು ತ್ರಿಬಲ್ ರೈಡಿಂಗ್ ಮೂಲಕ ಸಾಗುತ್ತಿದ್ದ ಬೈಕ್ ರೈಡರ್ಸ್ ಜೀಪ್ಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಅತೀ ವೇಗದಿಂದ ಸಾಗುತ್ತಿದ್ದ ಬೈಕ್ ಸವಾರರು ಜೀಪ್ಗೆ ಡಿಕ್ಕಿಯಾಗಿದ್ದಾರೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ